ದೇಶದ ಆರ್ಥಿಕತೆ ಕುಸಿತ ಮೋದಿಯವರ ಸಾಧನೆ: ಸಿಎಂ ಸಿದ್ದರಾಮಯ್ಯ

Date:

“ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ರೈತರ ಆದಾಯ ಕುಸಿತ, ನಿರುದ್ಯೋಗ ಹೆಚ್ಚಳ, ದೇಶದ ಆರ್ಥಿಕತೆ ಕುಸಿತ ನರೇಂದ್ರ ಮೋದಿಯವರ ಸಾಧನೆ. ಈ ಚಂದಕ್ಕೆ ಇವರು ಪ್ರಧಾನಿ ಆಗ್ಬೇಕಾ?” ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಾ ರಾಮಯ್ಯ ಪರವಾಗಿ ದೊಡ್ಡಬಳ್ಳಾಪುರದಲ್ಲಿ ರೋಡ್ ಶೋ ನಡೆಸಿ ಅವರು ಮಾತನಾಡಿದರು.

“ಹತ್ತತ್ತು ವರ್ಷ ಪ್ರಧಾನಿ ಆಗಿ ರೈತರಿಗೆ, ಕಾರ್ಮಿಕರಿಗೆ, ಯುವ ಸಮೂಹಕ್ಕೆ, ಮಹಿಳೆಯರಿಗೆ, ದುಡಿಯುವ ವರ್ಗಗಳಿಗೆ, ಕೃಷಿ ಕಾರ್ಮಿಕರಿಗೆ, ಮಧ್ಯಮ ವರ್ಗದವರಿಗೆ, ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಿಗಳಿಗೆ ಒಂದೇ ಒಂದು ಕಾರ್ಯಕ್ರಮವನ್ನೂ ಕೊಡಲಾಗಲಿಲ್ಲವಲ್ಲ ಏಕೆ? ಮತ್ತೆ ನೀವು ಪ್ರಧಾನಿಯಾಗಿ ಭಾರತೀಯರಿಗೆ , ದೇಶಕ್ಕೆ ಸಿಕ್ಕಿದ್ದಾದರೂ ಏನು ಎಂದು ಮುಖ್ಯಮಂತ್ರಿ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದೇಶದಿಂದ ಕಪ್ಪು ಹಣ ತರುವುದಾಗಿ ಹೇಳಿದ್ರಿ. ಆದರೆ ಅದು ತರಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ರಿ, ಹೊಸ ಉದ್ಯೋಗ ಸೃಷ್ಟಿಯಾಗುವುದಿರಲಿ ಇರುವ ಉದ್ಯೋಗಗಳೇ ನಷ್ಟವಾದವು. ರೈತರ ಆದಾಯ ದುಪ್ಪಟ್ಟು ಮಾಡುವುದಾಗಿ ಹೇಳಿದ್ರಿ. ಆದರೆ ರೈತರ ಖರ್ಚು ಮೂರು ಪಟ್ಟು ಆಗಿದೆ. ಡಾಲರ್ ಎದುರು ರೂಪಾಯಿ ಮೌಲ್ಯ ಹೆಚ್ಚಿಸುವುದಾಗಿ ಹೇಳಿದ್ರಿ. ಆದರೆ ರೂಪಾಯಿ ಮೌಲ್ಯ ಹೆಚ್ಚಾಗಲೇ ಇಲ್ಲ” ಎಂದು ಮೋದಿ ವೈಫಲ್ಯಗಳ ಸುದೀರ್ಘ ಪಟ್ಟಿಯನ್ನೇ ಸಿಎಂ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು.

“ಬಿಜೆಪಿಯಾಗಲೀ, ಮೋದಿಯವರಾಗಲೀ ಕೊಟ್ಟ ಮಾತಲ್ಲಿ ಒಂದನ್ನೂ ಈಡೇರಿಸಲಿಲ್ಲ. ಬದಲಿಗೆ ಹೇಳಿದ್ದಕ್ಕೆ ಉಲ್ಟಾ ಅನಾಹುತಗಳನ್ನೇ ಮಾಡಿದ್ದಾರೆ” ಎಂದರು.

“ಕೊರೋನಾ ಸಂದರ್ಭದಲ್ಲೂ ಕೋಟಿ ಕೋಟಿ ಕೊಳ್ಳೆ ಹೊಡೆದವರನ್ನು ಕ್ಷಮಿಸಲು ಸಾಧ್ಯವೇ? ಕೋವಿಡ್ ಹಗರಣದ ತನಿಖೆ ನಡೆಯುತ್ತಿದೆ. ಹಗರಣ ನಡೆದಿರುವುದಕ್ಕೆ ಸಾಕಷ್ಟು ಸಾಕ್ಷ್ಯಗಳಿರುವ ಬಗ್ಗೆ ನನಗೆ ಮಾಹಿತಿ ಇದೆ. ತನಿಖೆ ಪೂರ್ಣಗೊಂಡ ಬಳಿಕ ಭ್ರಷ್ಟಾಚಾರಕ್ಕೆ ತಕ್ಕ ಶಾಸ್ತಿ ಆಗುತ್ತದೆ. ಆದ್ದರಿಂದ ಬಿಜೆಪಿ ಅಭ್ಯರ್ಥಿ ಸುಧಾಕರ್ ಅವರನ್ನು ಸೋಲಿಸಿ ಕನ್ನಡ ನಾಡಿನ ಪರವಾಗಿ ಧ್ವನಿ ಎತ್ತುವ ರಕ್ಷಾ ರಾಮಯ್ಯರನ್ನು ಗೆಲ್ಲಿಸಿಕೊಂಡು ಬನ್ನಿ. ರಕ್ಷಾ ರಾಮಯ್ಯ ನೂರಕ್ಕೆ ನೂರು ಗೆಲ್ಲಲಿದ್ದಾರೆ” ಎಂದು ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...