ದೆಹಲಿ ವಿದ್ಯುತ್ ನಿಯಂತ್ರಕ ಮುಖ್ಯಸ್ಥರ ನೇಮಕ ವಿವಾದ: ಕೇಂದ್ರ, ಎಲ್‌ಜಿಗೆ ಸುಪ್ರೀಂ ನೋಟಿಸ್

Date:

ದೆಹಲಿ ನಗರದ ವಿದ್ಯುತ್ ನಿಯಂತ್ರಕ ಆಯೋಗದ ಅಧ್ಯಕ್ಷರ (ಡಿಇಆರ್‌ಸಿ) ನೇಮಕಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಸರ್ಕಾರದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ಅಲಹಾಬಾದ್‌ ಹೈಕೋರ್ಟ್ ಮಾಜಿ ನ್ಯಾಯಾಧೀಶರನ್ನು ಡಿಇಆರ್‌ಸಿ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಜುಲೈ 11ರ ಮುಂದಿನ ಆದೇಶದವರೆಗೂ ಪ್ರಮಾಣ ವಚನವನ್ನು ಬೋಧಿಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠ ಹೇಳಿದೆ. ನೋಟಿಸ್‌ ಜಾರಿ ಹಿನ್ನೆಲೆಯಲ್ಲಿ ಪ್ರಮಾಣ ವಚನ ಸಮಾರಂಭ ಮುಂದೂಡಿಕೆಯಾಗಿದೆ.

ರಾಜಧಾನಿಯ ಅಧಿಕಾರಶಾಹಿಗಳನ್ನು ಯಾರು ನಿಯಂತ್ರಿಸುತ್ತಾರೆ ಎಂಬುದರ ಕುರಿತು ಕೇಂದ್ರ ಮತ್ತು ದೆಹಲಿ ಸರ್ಕಾರದ ಹಗ್ಗ-ಜಗ್ಗಾಟದ ನಡುವೆ ಇಂದಿನ ತೀರ್ಪು ಕೂಡ ಮಹತ್ವ ಪಡೆದುಕೊಂಡಿದೆ. ಚುನಾಯಿತ ಸರ್ಕಾರವೇ ದೆಹಲಿಯ ಅಧಿಕಾರಿಗಳ ಮೇಲೆ ನಿಯಂತ್ರಣ ಸಾಧಿಸಬೇಕು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರ ಅಧಿಕಾರ ಸಾರ್ವಜನಿಕ ಸುವ್ಯವಸ್ಥೆ, ಕಾನೂನು ಮತ್ತು ಭೂಮಿ ವಿಷಯಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಮೇ ತಿಂಗಳಿನಲ್ಲಿ ತೀರ್ಪು ನೀಡಿತ್ತು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸರ್ಕಾರಗಳನ್ನು ಬುಡಮೇಲು ಮಾಡುತ್ತಿರುವ ಬಿಜೆಪಿ ಬಗ್ಗೆ ಸುಪ್ರೀಂ ಕೋರ್ಟ್ ಗಮನ ಹರಿಸಲಿ: ಕಪಿಲ್ ಸಿಬಲ್

ಇದಾದ ಕೆಲವೇ ದಿನಗಳಲ್ಲಿ, ದೆಹಲಿ ಅಧಿಕಾರಶಾಹಿಗಳ ಮೇಲೆ ನಿಯಂತ್ರಣವನ್ನು ಉಳಿಸಿಕೊಳ್ಳಲು ಕೇಂದ್ರವು ಸುಗ್ರೀವಾಜ್ಞೆ ಜಾರಿಗೊಳಿಸುವ ಮೂಲಕ ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರಕ್ಕೆ ನೀಡಿದ್ದ ಅಧಿಕಾರವನ್ನು ಮೊಟಕುಗೊಳಿಸಿತ್ತು. ಕೇಂದ್ರದ ಸುಗ್ರಿವಾಜ್ಞೆಯ ವಿರುದ್ಧ ಅರವಿಂದ್ ಕೇಜ್ರಿವಾಲ್ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಲೆಫ್ಟಿನೆಂಟ್ ಗವರ್ನರ್ ಅವರು ದೆಹಲಿ ನಗರದ ವಿದ್ಯುತ್ ನಿಯಂತ್ರಕ ಆಯೋಗದ ಅಧ್ಯಕ್ಷರನ್ನು ನೇಮಿಸಿರುವ ಕ್ರಮವನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಪ್ರತ್ಯೇಕ ಅರ್ಜಿ ಸಲ್ಲಿಸಿದೆ. ಎಎಪಿ ಸರ್ಕಾರವು ರಾಜಧಾನಿಯ ನಿವಾಸಿಗಳಿಗೆ ವಿಸ್ತರಿಸಿದ ವಿದ್ಯುತ್ ಸಬ್ಸಿಡಿಯನ್ನು ನಿಲ್ಲಿಸಲು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ಪ್ರಯತ್ನವಾಗಿದೆ ಎಂದು ಆರೋಪಿಸಲಾಗಿದೆ.

ಇದಕ್ಕೆ ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಯಾರೂ ಉಚಿತ ವಿದ್ಯುತ್ ಅನ್ನು ನಿಲ್ಲಿಸುತ್ತಿಲ್ಲ ಹಾಗೂ ಹೊಸ ಡಿಇಆರ್‌ಸಿ ಮುಖ್ಯಸ್ಥರ ಪ್ರಮಾಣ ವಚನವನ್ನು ದೆಹಲಿ ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ” ಎಂದು ಕೋರ್ಟ್‌ಗೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...