ಕೊರೋನಾ ರೂಪಾಂತರಿಯ ಬಗ್ಗೆ ಆತಂಕ ಬೇಡ: ಜಿನೋಮ್ ಒಕ್ಕೂಟದ ಮುಖ್ಯಸ್ಥ ಡಾ. ಎನ್.ಕೆ. ಅರೋರಾ

Date:

ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ವರದಿಯ ನಡುವೆಯೇ ದೇಶದಲ್ಲಿ ಮತ್ತೆ ಕೊರೋನಾ ಆತಂಕ ಆವರಿಸಿದೆ. ಈ ನಡುವೆ ಹೇಳಿಕೆ ನೀಡಿರುವ ಭಾರತೀಯ ಸಾರ್ಸ್-ಕೋವ್-2 ಜಿನೋಮ್ ಒಕ್ಕೂಟದ (ಐಎನ್‌ಎಎಸಿಒಜಿ) ಮುಖ್ಯಸ್ಥ ಡಾ. ಎನ್.ಕೆ. ಅರೋರಾ, “ಕೊರೋನಾ ರೂಪಾಂತರಿಯ ಬಗ್ಗೆ ಆತಂಕ ಬೇಡ” ಎಂದು ತಿಳಿಸಿದ್ದಾರೆ.

“ಕೊರೋನಾ ವೈರಸ್‌ನ ಉಪತಳಿ ಜೆಎನ್-1 ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ. ಕೇರಳದಲ್ಲಿ ಮೃತಪಟ್ಟ ವ್ಯಕ್ತಿ ಕೇವಲ ವೈರಸ್ ಸೋಂಕಿನಿಂದ ಮೃತಪಟ್ಟಿಲ್ಲ. ಆತನಿಗೆ ಗಂಭೀರ ಆರೋಗ್ಯ ಸಮಸ್ಯೆಗಳು ಕೂಡ ಇದ್ದವು” ಎಂದು ಅವರು ಹೇಳಿದ್ದಾರೆ.

“ಮೃತ ವ್ಯಕ್ತಿಯು ಹೃದಯ, ಶ್ವಾಸಕೋಶ ಮತ್ತು ಮೂತ್ರಪಿಂಡದ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಕಾರಣಗಳಿಂದ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಕೇವಲ ಜೆಎನ್.1 ಸೋಂಕಿನಿಂದ ಅಲ್ಲ” ಎಂದು ಡಾ. ಎನ್.ಕೆ. ಅರೋರಾ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೊರೋನಾ ರೂಪಾಂತರಿ ಜೆಎನ್-1 ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಸೋಂಕಿತರ ಮಾದರಿಗಳ ಸಂಖ್ಯೆ ಬಹಳಷ್ಟು ಕಡಿಮೆ ಇದ್ದು, ಎಲ್ಲ ರಾಜ್ಯಗಳಿಂದ ಮಾದರಿ ಸಂಗ್ರಹಿಸಲಾಗುತ್ತಿದೆ. ಆದರೂ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ” ಎಂದು ಸಲಹೆ ನೀಡಿದ್ದಾರೆ.

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಮತ್ತು ಕೊರೋನಾ ರೂಪಾಂತರಿ ಜೆಎನ್.1 ಉಪತಳಿಯ ಮೊದಲ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇರಿಸಲು ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ.

ಈ ಮಧ್ಯೆ ನಿನ್ನೆ ಕೊಡಗಿನ ಕುಶಾಲ ನಗರದಲ್ಲಿ ಹೇಳಿಕೆ ನೀಡಿದ್ದ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್‌, “60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಕಾಯಿಲೆ ಹಾಗೂ ಕೋವಿಡ್ ಲಕ್ಷಣ ಹೊಂದಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಗುಂಪು ಸೇರಬಾರದು, ಈ ಬಗ್ಗೆ ಮಾರ್ಗಸೂಚಿಯನ್ನು ಇಲಾಖೆ ಹೊರಡಿಸಲಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...