ಹೈರಿಸ್ಕ್ ರೋಗ ಲಕ್ಷಣ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Date:

ಕೋವಿಡ್ ಪಾಸಿಟಿವ್ ಇರುವವರ ಸಂಪರ್ಕದಲ್ಲಿದ್ದ ಹೈರಿಸ್ಕ್ ರೋಗಲಕ್ಷಣ ಹೊಂದಿರುವವರಿಗೆ, ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸಲು ಕ್ಯಾಬಿನೆಟ್ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪ ಸಮಿತಿಯ ಎರಡನೇ ಕೋವಿಡ್ ಸಭೆ ನಡೆಸಲಾಯಿತು. ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ ಮಹದೇವಪ್ಪ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ರವಿ, ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, “ದೇಶದಲ್ಲಿಯೇ ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಟೆಸ್ಟ್‌ಗಳನ್ನು ನಡೆಸಲಾಗುತ್ತಿದೆ. ಕೋವಿಡ್ ಇಳಿಮುಖ ಕಾಣುವವರೆಗೂ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮುಂದುವರಿಸುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚು ಬರುತ್ತದೆ ಎನ್ನುವ ಕಾರಣಕ್ಕೆ ಟೆಸ್ಟಿಂಗ್ ಕಡಿಮೆ ಮಾಡಿ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನ ಮುಚ್ಚಿಡುವ ಕೆಲಸವನ್ನು ಸರ್ಕಾರ ಮಾಡುವುದಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿಯೇ ಟೆಸ್ಟಿಂಗ್ ನಡೆಸಿ, ಅಗತ್ಯ ಚಿಕಿತ್ಸೆ ಕೊಡುವುದು ಮುಖ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.

“ಪ್ರಸ್ತುತ ಐ.ಸಿ.ಯುನಲ್ಲಿ 19 ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಇವರ ಮೇಲೆ ಹೆಚ್ವಿನ ನಿಗಾ ಇಡಲು ಸೂಚಿಸಲಾಗಿದೆ. ಅಲ್ಲದೇ, ಕೋವಿಡ್ ಪಾಸಿಟಿವ್ ಬಂದವರ ಸಂಪರ್ಕದಲ್ಲಿದ್ದವರಲ್ಲಿ ಹೈ ರಿಸ್ಕ್ ರೋಗಲಕ್ಷಣ ಕಂಡುಬಂದರೆ ಕಡ್ಡಾಯವಾಗಿ ಕೋವಿಡ್ ಟೆಸ್ಟಿಂಗ್ ಮಾಡುವಂತೆ ತಿಳಿಸಲಾಗಿದೆ” ಎಂದು ಆರೋಗ್ಯ ಸಚಿವರು ತಿಳಿಸಿದರು.

ಇದನ್ನು ಓದಿದ್ದೀರಾ? ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ: ಗೊಂದಲಗಳಿಗೆ ತೆರೆ ಎಳೆದ ಸುರ್ಜೇವಾಲ

“ಕೋವಿಡ್ ಪಾಸಿಟಿವ್ ಬಂದವರಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಡೆತ್ ಆಡಿಟ್ ಮಾಡಲು ಸೂಚಿಸಲಾಗಿತ್ತು. 26 ಪ್ರಕರಣಗಳಲ್ಲಿ 21 ಜನರ ಡೆತ್ ಆಡಿಟ್ ನಡೆಸಲಾಗಿದ್ದು, ನೈಜವಾಗಿ ಕೋವಿಡ್ ಕಾರಣದಿಂದ 2 ಮಾತ್ರ ಸಾವಿಗಿಡಾಗಿದ್ದಾರೆ. ಉಳಿದವರು ಇತರ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ. ಆದರೆ ಇವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಜನರು ಆತಂಕಕ್ಕೆ ಈಡಾಗುವ ಅಗತ್ಯವಿಲ್ಲ. ಎಲ್ಲ ರೀತಿಯ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ” ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...