ಗೋಕಳ್ಳರನ್ನು ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸುತ್ತೇವೆ: ಸಚಿವ ಮಂಕಾಳ್ ವೈದ್ಯ ವಿವಾದಾತ್ಮಕ ಹೇಳಿಕೆ

Date:

“ಗೋ ಕಳ್ಳತನ ಮಾಡಿದವರನ್ನು ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸುತ್ತೇವೆ” ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳ್ ಎಸ್ ವೈದ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾರವಾರದಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ವೇಳೆ ಮಾತನಾಡಿದ ಅವರು, “ಉತ್ತರ ಕನ್ನಡ ಜಿಲ್ಲೆಯಾದ್ಯಂತ ಗೋವು ಕಳ್ಳತನ ಪ್ರಕರಣಗಳು ಹೆಚ್ಚುತ್ತಿದೆ. ಇತ್ತೀಚೆಗೆ ಹೊನ್ನಾವರದಲ್ಲಿ ಗರ್ಭಿಣಿ ಹಸುವನ್ನು ಕೊಂದ ಘಟನೆ ನಡೆದಿದೆ. ಗೋಕಳ್ಳತನ ಮಾಡುವವರ ಮೇಲೆ ಸ್ಥಳದಲ್ಲೇ ಶೂಟೌಟ್ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದ್ದು, ಸದ್ಯ ವಿವಾದಕ್ಕೆ ನಾಂದಿ ಹಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಗೋ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ಅದನ್ನು ತಡೆಯಲು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ನಾವು ಹಸುವನ್ನು ಪೂಜ್ಯನೀಯ ಭಾವನೆಯಿಂದ ಕಾಣುತ್ತೇವೆ. ನಾವು ಅವುಗಳನ್ನು ಬಹಳ ಪ್ರೀತಿಯಿಂದ ಕಾಣುತ್ತೇವೆ. ಅಂತಹ ಹಸುವಿನ ಮೇಲೆ ದೌರ್ಜನ್ಯ ನಡೆಸಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಿ. ಅವರು ಯಾರೇ ಆಗಲಿ ಕ್ರಮ ಕೈಗೊಳ್ಳಲಿ. ಇನ್ನೂ ಹೆಚ್ಚಾಗಿ ಹೇಳಬೇಕು ಅಂದ್ರೆ ಗೋ ಕಳ್ಳರ ವಿರುದ್ಧ ಅಥವಾ ಗೋವಿನ ಮೇಲೆ ದೌರ್ಜನ್ಯ ನಡೆಸುವವರನ್ನು ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕಾಗುತ್ತದೆ ಎಂದು ಬಹಿರಂಗವಾಗಿಯೇ ಸರ್ಕಾರಿ ಸಭೆಯಲ್ಲೇ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಗೋ ಕಳ್ಳತನ ನಡೆದಿತ್ತು. ಈಗ, ಕುಮಟಾ ಶಾಸಕ ದಿನಕರ ಶೆಟ್ಟಿ ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಟೀಕಿಸುತ್ತಿದ್ದಾರೆ. ಬಿಜೆಪಿ ಆಡಳಿತದಲ್ಲಿ ಯಾವುದೇ ಕ್ರಮ ಇರಲಿಲ್ಲ. ಆದರೆ, ನಾವು ಕಠಿಣ ಕ್ರಮ ಕೈಗೊಂಡಿದ್ದೇವೆ ಎಂದು ವೈದ್ಯ ಹೇಳಿದರು.

ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್, ನಮ್ಮ ಪಕ್ಷದ ಶಾಸಕರಂತೆ. ಅವರು ಜಿಲ್ಲೆಯ ಅಭಿವೃದ್ಧಿಗೆ ಬೆಂಬಲ ನೀಡುವ ಕೆಲಸ ಮಾಡುತ್ತಿದ್ದಾರೆ. ಕುಮಟಾದಲ್ಲಿ ಮಾತ್ರ ಬಿಜೆಪಿ ಶಾಸಕರು ಇದ್ದಾರೆ. ಅಲ್ಲಿ, ನಮ್ಮ ಪಕ್ಷದ ಕಾರ್ಯಕರ್ತರ ಸಹಾಯದಿಂದ ನಾವು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೇವೆ ಎಂದು ಅವರು ಹೇಳಿದರು.

ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಅನಧಿಕೃತವಾಗಿ ಗೋವುಗಳನ್ನು ಸಾಗಿಸಿದವರ ವಿರುದ್ಧ 138 ಪ್ರಕರಣಗಳನ್ನು ದಾಖಲಿಸಲಾಗಿದ್ದು, 866 ಹಸುಗಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ಒಟ್ಟು 23 ಹಸು ಕಳ್ಳತನ ಪ್ರಕರಣಗಳು ದಾಖಲಾಗಿದ್ದು, 34 ಹಸುಗಳನ್ನು ಪತ್ತೆ ಮಾಡಲಾಗಿದ್ದು, ಅನಧಿಕೃತ ಗೋವು ಸಾಗಾಟ ಮತ್ತು ಗೋವು ಕಳ್ಳತನ ಪ್ರಕರಣಗಳಲ್ಲಿ 467 ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...