ಮುಸ್ಲಿಮರು, ಕಾಂಗ್ರೆಸ್ ಬಗ್ಗೆ ದ್ವೇಷ ಭಾಷಣ: ಮೋದಿ ವಿರುದ್ಧ ಕಠಿಣ ಕ್ರಮಕ್ಕೆ ಸಿಪಿಐಎಂ ಆಗ್ರಹ

Date:

ಮುಸ್ಲಿಮರು ಮತ್ತು ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಮಾಡಿದ ದ್ವೇಷ ಭಾಷಣಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು “ಸುಪ್ರೀಂ ಕೋರ್ಟ್ ಮತ್ತು ಭಾರತೀಯ ಚುನಾವಣಾ ಆಯೋಗ (ಇಸಿಐ) ಮೋದಿ ವಿರುದ್ಧ ‘ಕಠಿಣ ಕ್ರಮ’ ತೆಗೆದುಕೊಳ್ಳಬೇಕು” ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಐಎಂ) ಒತ್ತಾಯಿಸಿದೆ.

ಭಾನುವಾರ ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಾ ದ್ವೇಷ ಭಾಷಣ ಮಾಡಿದ್ದಾರೆ. “ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಮಂಗಳಸೂತ್ರ ಸೇರಿ ಬೆಲೆಬಾಳುವ ವಸ್ತುಗಳನ್ನು ಒಳನುಸುಳುಕೋರರು ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮರುಹಂಚಿಕೆ ಮಾಡಲು ಕಾಂಗ್ರೆಸ್ ಯೋಜಿಸುತ್ತಿದೆ” ಎಂದು ಪ್ರಧಾನಿ ಮೋದಿ ಆರೋಪಿಸಿದ್ದರು.

ಮೋದಿ ಹೇಳಿಕೆಯು ಮಾದರಿ ನೀತಿ ಸಂಹಿತೆಯ (ಎಂಸಿಸಿ) ಉಲ್ಲಂಘನೆಯಾಗಿದ್ದು ಈ ನಿಟ್ಟಿನಲ್ಲಿ ಮೋದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡುವ ‘ಭಾರತದ ಕಾಳಜಿಯುಳ್ಳ ನಾಗರಿಕರು’ ಎಂಬ ಹೆಸರಿನಲ್ಲಿ ಆನ್‌ಲೈನ್ ಅರ್ಜಿ ಅಭಿಯಾನವನ್ನು ಪ್ರಾರಂಭಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪ್ರಧಾನಿ ಮೋದಿ ದ್ವೇಷ ಭಾಷಣ: ಒಂದು ಲಕ್ಷಕ್ಕೂ ಅಧಿಕ ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಪತ್ರ

ಇನ್ನು ಚುನಾವಣಾ ಆಯೋಗದ ಮೌನವನ್ನು ಪ್ರಶ್ನಿಸಿರುವ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು, “ಪ್ರಧಾನಮಂತ್ರಿಯವರ ಈ ಹೇಳಿಕೆ ಅಮಾನುಷವಾಗಿದೆ” ಎಂದಿದ್ದಾರೆ.

“ಇದು ಘೋರವಾಗಿದೆ! ಚುನಾವಣಾ ಆಯೋಗದ ಮೌನವು ಇನಷ್ಟು ಕ್ರೂರವಾಗಿದೆ! ಮೋದಿಯವರ ಉದ್ರೇಕಕಾರಿ ಭಾಷಣವು ಮಾದರಿ ನೀತಿ ಸಂಹಿತೆ ಮತ್ತು ದ್ವೇಷ ಭಾಷಣದ ಕುರಿತು ಸುಪ್ರೀಂ ಕೋರ್ಟ್ ಘೋಷಣೆಗಳ ಸಂಪೂರ್ಣ ಉಲ್ಲಂಘಟನೆಯಾಗಿದೆ. ಇದು ಕಠಿಣ ಕ್ರಮ ಮತ್ತು ನ್ಯಾಯಾಲಯದ ನಿಂದನೆಗೆ ಅರ್ಹವಾಗಿದೆ” ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಸೀತಾರಾಮ್ ಯೆಚೂರಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ದ್ವೇಷ ಭಾಷಣ ವಿವಾದದ ಬೆನ್ನಲ್ಲೇ ‘ಡ್ಯಾಮೇಜ್ ಕಂಟ್ರೋಲ್‌’ಗೆ ಮುಂದಾದ ಪ್ರಧಾನಿ ಮೋದಿ!

“ಸುಪ್ರೀಂಕೋರ್ಟ್ ಈ ದ್ವೇಷ ಭಾಷಣವನ್ನು ಸ್ವಯಂಪ್ರೇರಿತವಾಗಿ ಗ್ರಹಿಸುತ್ತದೆ ಮತ್ತು ಮೋದಿಯವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸುತ್ತದೆ, ನಂತರ ಕಠಿಣ ಶಿಕ್ಷೆಯನ್ನು ನೀಡುತ್ತದೆ ಎಂದು ಭಾವಿಸುತ್ತೇವೆ” ಎಂದು ಯೆಚೂರಿ ಎಕ್ಸ್‌ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರತಿಕ್ರಿಯಿಸಲು ನಿರಾಕರಿಸಿದ ಚುನಾವಣಾ ಆಯೋಗ!

ಈ ನಡುವೆ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಚುನಾವಣಾ ಆಯೋಗ ನಿರಾಕರಿಸಿದೆ. ಇನ್ನು ಪ್ರಧಾನಮಂತ್ರಿಯವರ ಭಾಷಣವು ಸತ್ಯವನ್ನು ತಿರುಚುವಂತದ್ದು, ನಕಲಿ ಸುದ್ದಿಗಳನ್ನು ತಡೆಗಟ್ಟಲು ಚುನಾವಣಾ ಆಯೋಗ ಕ್ರಮಕೈಗೊಳ್ಳುವುದು ಅಗತ್ಯ ಎಂದು ಆನ್‌ಲೈನ್ ಅರ್ಜಿಯಲ್ಲಿ ತಿಳಿಸಲಾಗಿದೆ.

ಇಂತಹ ದ್ವೇಷದ ಭಾಷಣದ ವಿರುದ್ಧ ಚುನಾವಣಾ ಆಯೋಗವು ಯಾವುದೇ ಕ್ರಮವನ್ನು ಕೈಗೊಳ್ಳದಿರುವುದು ಆಯೋಗದ ವಿಶ್ವಾಸಾರ್ಹತೆ ಮತ್ತು ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...