ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಅಭಿಯಾನಕ್ಕೆ ಸಿಪಿಐಎಂ ಬೆಂಬಲ; ವಿಶೇಷ ಸಂಸತ್ ಅಧಿವೇಶನಕ್ಕೆ ಆಗ್ರಹ

Date:

ಕೆಲವು ವಿಚಾರದಲ್ಲಿ ತನ್ನ ‘ವಿರೋಧ’ಗಳ ಹೊರತಾಗಿಯೂ, ಆಪರೇಷನ್ ಸಿಂಧೂರ ಬಳಿಕ ಪಾಕಿಸ್ತಾನದ ಮೇಲೆ ರಾಜತಾಂತ್ರಿಕ ಒತ್ತಡ ಹೇರಲು ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಅಭಿಯಾನ ನಡೆಸುವುದಕ್ಕೆ ಭಾರತೀಯ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ)-ಸಿಪಿಐಎಂ ಬೆಂಬಲ ವ್ಯಕ್ತಪಡಿಸಿದೆ. ಹಾಗೆಯೇ ವಿವಿಧ ಪ್ರಮುಖ ದೇಶಗಳಿಗೆ ಭೇಟಿ ನೀಡಲಿರುವ ಸರ್ವಪಕ್ಷ ನಿಯೋಗದ ಭಾಗವಾಗಲು ನಿರ್ಧರಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತ್ರ ಸಭೆ ನಡೆಸುತ್ತಿರುವ ಬಗ್ಗೆ ಸಿಪಿಐಎಂ ಪೊಲಿಟ್ ಬ್ಯೂರೋ ಅಸಮಾಧಾನ ವ್ಯಕ್ತಪಡಿಸಿದೆ. ಗಡಿಯಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಲು ವಿಶೇಷ ಸಂಸತ್ತಿನ ಅಧಿವೇಶನ ನಡೆಸಬೇಕು ಎಂಬ ತನ್ನ ಬೇಡಿಕೆಯನ್ನು ಪುನರುಚ್ಚರಿಸಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ವಿಧಾನಸಭಾ ಉಪಚುನಾವಣೆ; ಪ್ರಜಾಪ್ರಭುತ್ವ ವಿರೋಧಿ, ಕೋಮುವಾದಿ ಬಿಜೆಪಿ-ಜೆಡಿಎಸ್ ಪಕ್ಷಗಳನ್ನು ಸೋಲಿಸಲು ಸಿಪಿಐಎಂ ಕರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನಂತರದ ಬೆಳವಣಿಗೆಗಳ ಕುರಿತು ಚರ್ಚಿಸಲು ಪ್ರಧಾನಿ ಮತ್ತು ಅವರ ಸರ್ಕಾರ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಲು ನಿರಾಕರಿಸಿದ್ದು ದುರದೃಷ್ಟಕರ. ಸರ್ಕಾರವು ತಕ್ಷಣವೇ ಸಂಸತ್ತಿನ ಅಧಿವೇಶನವನ್ನು ಕರೆಯಬೇಕು. ಜನರಿಗೆ ಮಾಹಿತಿ ನೀಡಬೇಕು. ಸ್ವಷ್ಟೀಕರಣ ಪಡೆಯಲು ಅವಕಾಶ ನೀಡಬೇಕು” ಎಂದು ಸಿಪಿಐಎಂ ಒತ್ತಾಯಿಸಿದೆ.

ಸಿಪಿಐಎಂ

“ಪ್ರಧಾನಿ ಬಿಜೆಪಿ-ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕರೆದು ‘ಆಪರೇಷನ್ ಸಿಂಧೂರ’ ಬಗ್ಗೆ ವಿವರಿಸಲು ನಿರ್ಧರಿಸಿದರು. ಇದು ತಾರತಮ್ಯ. ದೇಶಕ್ಕೆ ಸಂಬಂಧಿಸಿದ ಗಂಭೀರ ವಿಚಾರದ ಬಗ್ಗೆ ಮಾಹಿತಿ ನೀಡಲು ಕೇಂದ್ರವು ವಿರೋಧ ಪಕ್ಷದ ಮುಖ್ಯಮಂತ್ರಿಗಳು ಸೇರಿದಂತೆ ದೇಶದ ಎಲ್ಲಾ ಮುಖ್ಯಮಂತ್ರಿಗಳ ಸಭೆಯನ್ನು ನಡೆಸಬೇಕು” ಎಂದು ಆಗ್ರಹಿಸಿದೆ.

“ಸರ್ಕಾರವು ಮೊದಲು ಭಾರತದ ಜನರಿಗೆ ಮಾಹಿತಿ ನೀಡಬೇಕು, ಪಾರದರ್ಶಕವಾಗಿರಬೇಕು.ಆಡಳಿತ ಪಕ್ಷದ ನಾಯಕರು ಮತ್ತು ರಾಜ್ಯ ಸಚಿವರು ಈ ಪರಿಸ್ಥಿತಿಗೆ ಕೋಮು ಬಣ್ಣ ಬಳಿಯುವ ಅಭಿಯಾನ ನಡೆಸುತ್ತಿದ್ದಾರೆ. ಅದನ್ನು ಕೂಡಲೇ ನಿಲ್ಲಿಸಬೇಕು” ಎಂದು ಸಿಪಿಐಎಂ ಒತ್ತಾಯಿಸಿದೆ.

ಇನ್ನು, “ಸರ್ಕಾರವು ರಾಜ್ಯಸಭೆಯಲ್ಲಿ ನಮ್ಮ ಪಕ್ಷದ ನಾಯಕರನ್ನು ಕರೆದು, ತನ್ನ ರಾಜತಾಂತ್ರಿಕ ಸಂಪರ್ಕದ ಭಾಗವಾಗಿ ವಿವಿಧ ದೇಶಗಳಿಗೆ ಕಳುಹಿಸಲು ನಿರ್ಧರಿಸಿರುವ ವಿವಿಧ ನಿಯೋಗಗಳ ಬಗ್ಗೆ ತಿಳಿಸಿದೆ. ನಾವು ಇತರೆ ಯಾವುದೇ ಆಗ್ರಹಗಳನ್ನು ಹೊಂದಿದ್ದರೂ ಕೂಡಾ, ಅದನ್ನು ಪುನರುಚ್ಚರಿಸುತ್ತಲೇ ಈ ನಿಯೋಗ ರಚನೆಗೆ ಬೆಂಬಲ ನೀಡುತ್ತೇವೆ. ವಿಶಾಲ ರಾಷ್ಟ್ರೀಯ ಹಿತಾಸಕ್ತಿಯಿಂದ ಈ ನಿಯೋಗದ ಭಾಗವಾಗಲು ನಾವು ಬಯಸುತ್ತೇವೆ” ಎಂದು ಸಿಪಿಐಎಂ ಪೊಲಿಟ್ ಬ್ಯೂರೋ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...