ಚುನಾವಣಾ ಬಾಂಡ್‌ಗಳ ಮೂಲಕ ಯಾವುದೇ ಹಣ ಪಡೆದಿಲ್ಲ: ಸಿಪಿಐ(ಎಂ)

Date:

ಚುನಾವಣಾ ಬಾಂಡ್‌ಗಳ ಮೂಲಕ ಯಾವುದೇ ಹಣ ಪಡೆದಿಲ್ಲ. ಬಾಂಡ್‌ಗಳನ್ನು ಸ್ವೀಕರಿಸಲು ಅಗತ್ಯವಿದ್ದ ಎಸ್‌ಬಿಐ ಖಾತೆಯನ್ನು ಪಕ್ಷ ತೆರೆದೂ ಇಲ್ಲ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) [ಸಿಪಿಐಎಂ] ಹೇಳಿದೆ.

ಸಿಪಿಐ(ಎಂ) ಕೂಡ ಚುನಾವಣಾ ಬಾಂಡ್‌ಗಳ ಮೂಲಕ ಹಣವನ್ನು ಪಡೆದಿದೆ ಎಂದು ಕೆಲವು ಮಾಧ್ಯಮಗಳು ವರದಿ ಬಿತ್ತರಿಸಿದ್ದವು. ಈ ಬೆನ್ನಲ್ಲೇ ಸಿಪಿಐ(ಎಂ) ವರದಿಗೆ ಪ್ರತಿಕ್ರಿಯೆ ನೀಡಿದೆ. ಪಕ್ಷವೂ ಚುನಾವಣಾ ಬಾಂಡ್‌ ಮೂಲಕ ಯಾವುದೇ ಹಣ ಪಡೆದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

“ಚುನಾವಣಾ ಬಾಂಡ್‌ ಮೂಲಕ ಹಣ ಪಡೆದಿರುವ ಬಗ್ಗೆ ಮಾಧ್ಯಮಗಳು ಪ್ರಕಟಿಸಿರುವ ವರದಿಗಳು ಸುಳ್ಳು ಮತ್ತು ಆಧಾರರಹಿತ. ವಾಸ್ತವವೆಂದರೆ, ಸಿಪಿಐ(ಎಂ) ತಾತ್ವಿಕವಾಗಿ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಚುನಾವಣಾ ಬಾಂಡ್‌ ಮೂಲಕ ಹಣ ಪಡೆಯಲು ಅಗತ್ಯವಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಖಾತೆಯನ್ನೇ ಪಕ್ಷ ತೆರೆಯಲಿಲ್ಲ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಮನಿಸಬೇಕಾದ ವಿಚಾರವೆಂದರೆ, ಚುನಾವಣಾ ಬಾಂಡ್‌ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದ ಸಿಪಿಐ(ಎಂ) ಯೋಜನೆಯ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಚುನಾವಣಾ ಬಾಂಡ್ ವಿರುದ್ಧ ಕಾನೂನಾತ್ಮಕವಾಗಿ ಹೋರಾಟ ಮಾಡಿದೆ” ಎಂದು ವಿವರಿಸಿದೆ.

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಸುಪ್ರೀಂ ಕೋರ್ಟ್‌ ಗುರುವಾರ ಮಹತ್ವದ ತೀರ್ಪು ನೀಡಿದೆ. ಕೇಂದ್ರದ ಚುನಾವಣಾ ಬಾಂಡ್‌ಗಳ ಬೇನಾಮಿ ರಾಜಕೀಯ ನಿಧಿ ಯೋಜನೆಯನ್ನು ರದ್ದುಗೊಳಿಸಿದೆ. ಚುನಾವಣಾ ಬಾಂಡ್‌ ‘ಅಸಂವಿಧಾನಿಕ‘ ಎಂದು ಕೋರ್ಟ್‌ ಹೇಳಿದೆ. 2024ರ ಮಾರ್ಚ್ 13 ರೊಳಗೆ ಬಾಂಡ್‌ನ ದಾನಿಗಳು, ಮೊತ್ತ ಮತ್ತು ಅವುಗಳನ್ನು ಸ್ವೀಕರಿಸಿದವರ ಹೆಸರುಗಳನ್ನು ಬಹಿರಂಗಪಡಿಸುವಂತೆ ಎಸ್‌ಬಿಐ ಮತ್ತು ಚುಣಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

2018ರ ಜನವರಿಯಲ್ಲಿ ಚುನಾವಣಾ ಬಾಂಡ್ ಯೋಜನೆಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿ, ಜಾರಿಗೆ ತಂದಿತ್ತು. ನಾಗರಿಕರು ಅಥವಾ ಕಾರ್ಪೊರೇಟ್ ಗುಂಪುಗಳು ಚುನಾವಣಾ ಬಾಂಡ್‌ಗಳನ್ನು ಬ್ಯಾಂಕ್‌ನಿಂದ ಖರೀದಿಸಬಹುದು ಮತ್ತು ರಾಜಕೀಯ ಪಕ್ಷಕ್ಕೆ ನೀಡಬಹುದು. ಇವುಗಳ ಮಾಹಿತಿಯು ಗೌಪ್ಯವಾಗಿರುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...