ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

Date:

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದನ್ನು ಸ್ವಾಗತಿಸಿರುವ ಸಿಪಿಐಎಂ, ಈ ಆಯ್ಕೆ ವಿಚಾರದಲ್ಲಿ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ಮುಖಂಡರ ನಡೆಯನ್ನು ಖಂಡಿಸಿದೆ.

ಈ ಬಗ್ಗೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಸಿಪಿಐಎಂ, “ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಲು ನಾಡಿನ ಹಿರಿಯ ಸಾಹಿತಿ, ತಮ್ಮ ಸಾಹಿತ್ಯಕ್ಕೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆಯುವ ಮೂಲಕ ಕನ್ನಡದ ಕೀರ್ತಿಯನ್ನು, ರಾಜ್ಯವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಿದ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದು ಅತ್ಯಂತ ಸೂಕ್ತವಾಗಿದೆ. ಮಾತ್ರವಲ್ಲ ಈ ಮೂಲಕ ಸರ್ಕಾರ ಸೂಕ್ತ ಗೌರವವನ್ನು ನೀಡಿದೆ” ಎಂದು ಸಿಪಿಐಎಂ ಹೇಳಿದೆ.

ಇದನ್ನು ಓದಿದ್ದೀರಾ? ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶ್ವವಿಖ್ಯಾತ ಮೈಸೂರು ದಸರಾ ಕರ್ನಾಟಕದ ಸಾಂಸ್ಕೃತಿಕ ವಿದ್ಯಮಾನವೇ ಹೊರತು ಅದೊಂದು ಧಾರ್ಮಿಕ ಅಲ್ಲ. ಹಾಗಾಗಿ ವಿಶ್ವವಿಖ್ಯಾತ ಕರ್ನಾಟಕದ ಸಾಂಸ್ಕೃತಿಕ ಉತ್ಸವ ಮೈಸೂರು ದಸರಾವನ್ನು ಕನ್ನಡ ನಾಡಿನ ಸಾಹಿತ್ಯದ ಮಹತ್ವವನ್ನು ಜಾಗತಿಕ ಮಟ್ಟದಲ್ಲಿ ಎತ್ತಿಹಿಡಿದ ಹಿರಿಯ ಸಾಹಿತಿ ಬಾನು ಮುಷ್ತಾಕ್ ಅವರಿಂದ ಉದ್ಘಾಟಿಸುವುದು ಅತ್ಯಂತ ಸಮಯೋಚಿತವಾಗಿದೆ. ಈ ಸಂದರ್ಭದಲ್ಲಿ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅಲ್ಲದೆ ಬೇರೆ ಯಾವುದೇ ಆಯ್ಕೆ ಸೂಕ್ತವಾಗುವುದಿಲ್ಲ. ಸರ್ಕಾರದ ಈ ನಿರ್ಧಾರವನ್ನು ಮಾರ್ಕ್ಸ್‌ವಾದಿ ಕಮ್ಯೂನಿಸ್ಟ್ ಪಕ್ಷ ಸಿಪಿಐಎಂ ಹಾಸನ ಜಿಲ್ಲಾ ಸಮಿತಿ ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತದೆ” ಎಂದಿದೆ.

“ಇದೇ ಸಂದರ್ಭದಲ್ಲಿ ಬಿಜೆಪಿಯ ಕೆಲ ಮುಖಂಡರು ಬಾನು ಅವರ ಆಯ್ಕೆಯ ವಿರುದ್ಧ ಮಾತನಾಡಿದ್ದಾರೆ. ದಸರಾವನ್ನು ರಾಜ್ಯ ಸರ್ಕಾರದ ಕೋಟ್ಯಾಂತರ ರೂಪಾಯಿಗಳ ಅನುದಾನದಲ್ಲಿ ಸಂಘಟಿಸಲಾಗುತ್ತದೆ. ಅಂದರೆ ಅದು ನೇರವಾಗಿ ಈ ರಾಜ್ಯದ ಜನತೆಯ ತೆರಿಗೆಯ ಹಣ. ಕರ್ನಾಟಕ ಯಾವುದೋ ಒಂದು ಧರ್ಮ ಅಥವಾ ಜಾತಿಗೆ ಸೇರಿಲ್ಲ. ರಾಷ್ಟ್ರ ಕವಿ ಕುವೆಂಪು ಅವರು ಹೇಳಿದಂತೆ ಇದು ಸರ್ವ ಜನಾಂಗದ ಶಾಂತಿಯ ತೋಟ. ರಾಜ ಪ್ರಭುತ್ವವನ್ನು ಕೊನೆಗಾಣಿಸಿ ನಾವಿಂದು ಭಾರತದ ಸಂವಿಧಾನದ ಅಡಿಯಲ್ಲಿ, ಅದರ ಆಶಯದಂತೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ಇಲ್ಲಿ ಎಲ್ಲರಿಗೂ ಸಮಾನವಾದ ಅವಕಾಶಗಳಿವೆ. ಇದನ್ನು ಅರ್ಥ ಮಾಡಿಕೊಳ್ಳಲಾಗದ ಬಿಜೆಪಿ ನಾಯಕರು ರಾಜ್ಯದ ಸೌಹಾರ್ದತೆಗೆ ಕೊಳ್ಳಿ ಇಡಲು ಹುನ್ನಾರ ನಡೆಸಿದ್ದಾರೆ. ಇದನ್ನು ಸಿಪಿಐಎಂ ತೀರ್ವವಾಗಿ ಖಂಡಿಸುತ್ತದೆ” ಎಂದು ತಿಳಿಸಿದೆ.

“ಕನ್ನಡದ ಕಂಪು ಬಾನು ಮುಷ್ತಾಕ್ ಅವರ ಮೂಲಕ ಅಂತಾರಾಷ್ಟ್ರೀಯವಾಗಿ ಪಸರಿಸಿದಾಗ ಅವರು ಮುಸ್ಲಿಂ ಸಮುದಾಯವರು ಎಂಬ ಕಾರಣಕ್ಕಾಗಿ ಒಂದು ಅಭಿನಂದನೆಯನ್ನೂ ಸಲ್ಲಿಸದ ಇವರು ಭಾರತದ ಜಾತ್ಯಾತೀತ ಪರಂಪರೆಯ ವಿರೋಧಿಗಳು. ಬಿಜೆಪಿ ಆರಂಭದಿಂದಲೂ ತನ್ನ ಸಿದ್ದಾಂತವನ್ನೇ ಮಹಿಳಾ ವಿರೋಧಿಯಾಗಿ, ಅಲ್ಪಸಂಖ್ಯಾತ ವಿರೋಧಿಯಾಗಿ, ದಲಿತ ವಿರೋಧಿಯಾಗಿ ರೂಪಿಸಿಕೊಂಡು ಬಂದಿದೆ ಮತ್ತು ಅದರ ಆಧಾರದಲ್ಲೇ ಕೀಳು ರಾಜಕಾರಣ ಮಾಡುತ್ತಿದೆ. ಆದರೆ ರಾಜ್ಯದ ಜನತೆ ಇಂತಹ ಕೀಳು ರಾಜಕಾರಣಕ್ಕೆ ಎಂದಿಗೂ ಬೆಲೆಕೊಟ್ಟವರಲ್ಲಾ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಹಾಸನ | ʼದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದು ನನಗೆ ಖುಷಿʼ ಎಂದ ಬಾನು ಮುಷ್ತಾಕ್

“ಎಲ್ಲರೂ ಜೊತೆ ಸೇರಿ ಸಂಭ್ರಮಿಸುವ ನಾಡ ಹಬ್ಬ ತನ್ನ ಸೌಹಾರ್ದ ಪರಂಪರೆಯನ್ನು ಮುಂದುವರೆಸಲಿ. ಇದೇ ದಸರಾವನ್ನು 2017ರಲ್ಲಿ ಕವಿ ನಿಸಾರ್ ಅಹಮದ್ ಅವರು ಉದ್ಘಾಟಿಸಿದ್ದಾರೆ. ಆಗಲೂ ನಾಡಿನ ಜನ ಸಂಭ್ರಮಿಸಿದ್ದಾರೆ. ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ಮಾಡವುದನ್ನು ವಿರೋಧಿಸುವ ಮೂಲಕ ಬಿಜೆಪಿ ಮತ್ತು ಸಂಘಪರಿವಾರದ ಶಕ್ತಿಗಳು ನಿಜವಾಗಿಯೂ ರಾಜ್ಯ ಹಾಗೂ ಕನ್ನಡ ಭಾಷೆಯ ಸಾಂಸ್ಕೃತಿಕ ಪರಂಪರೆಯ ವಿರೋಧಿಗಳು ಎಂದು ನಿರೂಪಿಸುತ್ತಿದ್ದಾರೆ. ಸರ್ಕಾರ ಇಂತಹ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಯ ವಿರೋಧಿಗಳಿಗೆ ಮಣಿಯಬಾರದು ಹಾಗೂ ಅಂತಹ ದುಷ್ಟಶಕ್ತಿಗಳನ್ನು ನಿಯಂತ್ರಿಸಬೇಕು” ಎಂದು ಸಿಪಿಐಎಂ ಆಗ್ರಹಿಸಿದೆ.

“ಹಾಸನದವರಾದ ಬಾನು ಮುಷ್ತಾಕ್ ಆರಂಭದಿಂದಲೂ ಸಮಾಜದಲ್ಲಿನ ಅನ್ಯಾಯ, ಶೋಷಣೆಗಳ ವಿರುದ್ಧ ನಿರಂತರವಾಗಿ ದನಿ ಎತ್ತಿದವರು ಮತ್ತು ಆ ಕುರಿತೇ ತಮ್ಮ ಉತ್ಕೃಷ್ಟ ಸಾಹಿತ್ಯವನ್ನು ಕನ್ನಡದಲ್ಲಿ ರಚಿಸಿದವರು. ಬಾನು ಮುಷ್ತಾಕ್ ಅವರ ಜೊತೆಗೆ ಪಕ್ಷ ನಿಲ್ಲುತ್ತದೆ” ಎಂದು ಹಾಸನ ಸಮಿತಿ ಭರವಸೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...