ಹರಿಯಾಣದ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆಗೆ ಸಿಪಿಐಎಂ ಒತ್ತಾಯ

Date:

ಹರಿಯಾಣದ ದಲಿತ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಆತ್ಮಹತ್ಯೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ) ಒತ್ತಾಯಿಸಿದೆ. ಮೃತ ಅಧಿಕಾರಿಯ ಕುಟುಂಬವನ್ನು ಭೇಟಿಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಧಾನ ಕಾರ್ಯದರ್ಶಿ ಎಂ ಎ ಬೇಬಿ ಪತ್ರ ಬರೆದಿದ್ದಾರೆ. ಸಿಪಿಎಂ ನಿಯೋಗವು ಐಪಿಎಸ್ ಅಧಿಕಾರಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿದೆ.

“ನ್ಯಾಯಯುತ ಮತ್ತು ಪಾರದರ್ಶಕ ನ್ಯಾಯಾಂಗ ತನಿಖೆಯು ದೇಶದ ಸಾಂವಿಧಾನಿಕ ಮೌಲ್ಯಗಳಿಗೆ ಬದ್ಧತೆಯನ್ನು ಮತ್ತು ಯಾವುದೇ ರೀತಿಯ ತಾರತಮ್ಯದಿಂದ ತನ್ನ ಅಧಿಕಾರಿಗಳನ್ನು ರಕ್ಷಿಸುವುದನ್ನು ಪುನರುಚ್ಚರಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹರಿಯಾಣ | ಮೃತ ಐಪಿಎಸ್‌ ಪೂರಣ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಯ ಬಗ್ಗೆ ತೀವ್ರ ಕಳವಳ ಮತ್ತು ದುಃಖವನ್ನು ವ್ಯಕ್ತಪಡಿಸಿದ ಬೇಬಿ, “ಇದು ದೇಶಾದ್ಯಂತ ಆಘಾತವನ್ನು ಉಂಟು ಮಾಡಿದೆ. ಪೊಲೀಸ್ ಸೇವೆಯಲ್ಲಿ ಹಿಂದುಳಿದ ಸಮುದಾಯಗಳಿಗೆ ಸೇರಿದ ಅಧಿಕಾರಿಗಳಿಗೆ ಇರುವ ಹೊಣೆಗಾರಿಕೆ ಮತ್ತು ರಕ್ಷಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದಿದ್ದಾರೆ.

“ಪೂರಣ್ ಕುಮಾರ್ ಅವರ ಸಾವಿಗೆ ಕಾರಣದ ಬಗ್ಗೆ ತನಿಖೆಗಾಗಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದ ತಂಡವನ್ನು ರಚಿಸಿ ತಕ್ಷಣವೇ ನ್ಯಾಯಾಂಗ ತನಿಖೆಯನ್ನು ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ. ಹಾಗೆಯೇ ಮೃತ ಅಧಿಕಾರಿ ಹೆಸರಿಸಿದ ಎಲ್ಲಾ ಅಧಿಕಾರಿಗಳನ್ನು ನ್ಯಾಯಾಂಗ ವಿಚಾರಣೆ ಮುಗಿಯುವವರೆಗೂ ಅಮಾನತುಗೊಳಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ತನಿಖೆಯ ಮೇಲೆ ಯಾವುದೇ ರೀತಿಯಲ್ಲಿ ಪ್ರಭಾವ ಬೀರದಂತೆ ಅಥವಾ ಯಾವುದೇ ರಾಜಿ ನಡೆಯದಂತೆ ನೋಡಿಕೊಳ್ಳಲು ಇದು ಅತ್ಯಗತ್ಯ” ಎಂದು ಹೇಳಿದ್ದಾರೆ.

“ಈ ಪ್ರಕರಣವನ್ನು ತುರ್ತು ಮತ್ತು ಗಂಭೀರತೆಯಿಂದ ಪರಿಗಣಿಸಲಾಗುತ್ತದೆ ಎಂದು ನಾವು ನಂಬುತ್ತೇವೆ. ನ್ಯಾಯಯುತ ಮತ್ತು ಪಾರದರ್ಶಕ ನ್ಯಾಯಾಂಗ ತನಿಖೆಯು ದುಃಖಿತ ಕುಟುಂಬಕ್ಕೆ ಸಾಂತ್ವನ ನೀಡುವುದಲ್ಲದೆ, ಸಾಂವಿಧಾನಿಕ ಮೌಲ್ಯಗಳಿಗೆ ದೇಶದ ಬದ್ಧತೆಯನ್ನು ಮತ್ತು ಯಾವುದೇ ರೀತಿಯ ತಾರತಮ್ಯದಿಂದ ಅಧಿಕಾರಿಗಳ ರಕ್ಷಣೆಯನ್ನು ಪುನರುಚ್ಚರಿಸುತ್ತದೆ” ಎಂದೂ ಬೇಬಿ ಬರೆದಿದ್ದಾರೆ.

ಐಪಿಎಸ್ ಅಧಿಕಾರಿಯ ಸಾವಿನ ಬಗ್ಗೆ ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು ಘಟನೆಗೆ ಆಘಾತಕಾರಿ ತಿರುವು ನೀಡಿದೆ. ರೋಹ್ಟಕ್‌ನ ಸೈಬರ್ ಸೆಲ್‌ನಲ್ಲಿ ಸಹಾಯಕ ಸಬ್-ಇನ್‌ಸ್ಪೆಕ್ಟರ್ ಆಗಿ ನೇಮಕಗೊಂಡಿದ್ದ ಸಂದೀಪ್ ಕುಮಾರ್, ಮೃತ ಅಧಿಕಾರಿ ಪೂರಣ್ ಕುಮಾರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು ಆತ್ಮಹತ್ಯೆ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...