ಒಳಮೀಸಲಾತಿಯಲ್ಲಿ ಕ್ರೀಮಿ ಲೇಯರ್ | ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ‘ಭಾರತ್ ಬಂದ್‌’ಗೆ ಬಿಎಸ್‌ಪಿ ಬೆಂಬಲ

Date:

ಪರಿಶಿಷ್ಟ ಜಾತಿಗಳ (ಎಸ್‌ಸಿ) ಉಪವರ್ಗೀಕರಣದ (ಒಳಮೀಓಸಲಾತಿ) ಕುರಿತು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪನ್ನು ಪ್ರತಿಭಟಿಸಿ ಕೆಲವು ದಲಿತ ಮತ್ತು ಆದಿವಾಸಿ ಸಂಘಟನೆಗಳು ಕರೆ ಕೊಟ್ಟಿರುವ ಬುಧವಾರದ ಭಾರತ್‌ ಬಂದ್‌ಗೆ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಬೆಂಬಲ ಘೋಷಿಸಿದೆ.

ಮೀಸಲಾತಿಯನ್ನು ರದ್ದುಗೊಳಿಸಲು ಬಿಜೆಪಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿವೆ. ಈ ಪಕ್ಷಗಳು ಮತ್ತು ಇತರರು ಮೀಸಲಾತಿಯ ಅಗತ್ಯವನ್ನು ಅರ್ಥಮಾಡಿಕೊಳ್ಳಬೇಕು. ಮೀಸಲಾತಿಯ ವಿಚಾರದಲ್ಲಿ ಆಟವಾಡಬಾರದು ಎಂದು ಬಿಎಸ್‌ಪಿ ಹೇಳಿದೆ.

ಎಸ್‌ಸಿ/ಎಸ್‌ಟಿ ಸಮುದಾಯಗಳಲ್ಲಿ ಒಳಮೀಸಲಾತಿಗೆ ಅವಕಾಶ ನೀಡಿರುವ ಸುಪ್ರೀಂ ಕೋರ್ಟ್‌, ಒಳಮೀಸಲಾತಿಯಲ್ಲಿ ಕ್ರೀಮಿ ಲೇಯರ್ ಅಳವಡಿಸಿಕೊಳ್ಳಬೇಕೆಂದು ಆಗಸ್ಟ್‌ 1ರಂದು ನೀಡಿದ ತನ್ನ ತೀರ್ಪಿನಲ್ಲಿ ಹೇಳಿದೆ. ‘ಕ್ರೀಮಿ ಲೇಯರ್’ ಅಳವಡಿಕೆ ಬಗ್ಗೆ ಅಸಮಾಧಾನ ಹೊಂದಿರುವ 21 ಸಂಘಟನೆಗಳು ಆಗಸ್ಟ್‌ 21ರಂದು ‘ಭಾರತ್ ಬಂದ್‌’ಗೆ ಕರೆ ಕೊಟ್ಟಿವೆ. ಬಂದ್‌ಅನ್ನು ಬಿಎಸ್‌ಪಿ ಬೆಂಬಲಿಸಿದೆ. “ಬಿಜೆಪಿ ಮತ್ತು ಕಾಂಗ್ರೆಸ್‌ನಂತಹ ಪಕ್ಷಗಳ ಮೀಸಲಾತಿ ವಿರುದ್ಧದ ಪಿತೂರಿಯಿಂದ ಎಸ್‌ಸಿ/ಎಸ್‌ಟಿ ಸಮುದಾಯಗಳ ಉಪವರ್ಗೀಕರಣದಲ್ಲಿ ‘ಕ್ರೀಮಿ ಲೇಯರ್’ ಅಳವಡಿಕೆಯನ್ನು ಒಪ್ಪಿಕೊಳ್ಳುತ್ತಿವೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೀಸಲಾತಿಯನ್ನು ನಿಷ್ಪರಿಣಾಮಕಾರಿಯಾಗಿ ಮಾಡಿ ಮತ್ತು ಅಂತಿಮವಾಗಿ ಕೊನೆಗೊಳಿಸುವುದು ಆ ಪಕ್ಷಗಳ ಉದ್ದೇಶವಾಗಿದೆ” ಎಂದು ಬಿಎಸ್‌ಪಿ ವರಿಷ್ಠೆ ಮಾಯಾವತಿ ಆರೋಪಿಸಿದ್ದಾರೆ.

“ಕ್ರೀಮಿ ಲೇಯರ್ ಅಳವಡಿಸದಂತೆ ಭಾರತ್ ಬಂದ್‌ನ ಅಂಗವಾಗಿ ಸರ್ಕಾರಕ್ಕೆ ಪ್ರತಿಭಟನಾಕಾರರು ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಲಿದ್ದಾರೆ. ಸಂವಿಧಾನ ತಿದ್ದುಪಡಿಯ ಮೂಲಕ ಮೀಸಲಾತಿಯಲ್ಲಿ ಮಾಡಲಾದ ಬದಲಾವಣೆಗಳನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

“ಎಸ್‌ಸಿ ಮತ್ತು ಎಸ್‌ಟಿಗಳ ಜೊತೆಗೆ ಒಬಿಸಿ ಸಮುದಾಯಕ್ಕೆ ನೀಡಿರುವ ಮೀಸಲಾತಿಯ ಸಾಂವಿಧಾನಿಕ ಹಕ್ಕು ಬಿ.ಆರ್ ಅಂಬೇಡ್ಕರ್ ಅವರ ನಿರಂತರ ಹೋರಾಟದ ಫಲವಾಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಮೀಸಲಾತಿಯ ಅಗತ್ಯತೆ ಮತ್ತು ಸೂಕ್ಷ್ಮತೆಯನ್ನು ಅರ್ಥಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಆಗಸ್ಟ್ 1ರ ಮಹತ್ವದ ತೀರ್ಪಿನಲ್ಲಿ, “ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರುವ ಜಾತಿಗಳ ಉನ್ನತಿಗಾಗಿ ಎಸ್‌ಸಿ/ಎಸ್‌ಟಿ ಸಮುದಾಯಗಳೊಳಗೆ ಉಪ-ವರ್ಗೀಕರಣ ಮಾಡಲು ರಾಜ್ಯಗಳಿಗೆ ಸಂವಿಧಾನಾತ್ಮಕವಾಗಿ ಅಧಿಕಾರವಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...