ಯುವನಿಧಿ ಯೋಜನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸೂಚನೆ

Date:

ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳ ಹೆಸರುಗಳನ್ನು ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅಗತ್ಯಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಕಾಸ ಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ವೇಳೆ ಮಾತನಾಡಿದ ಸಚಿವರು, ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಯುವನಿಧಿ ಯೋಜನೆಗೆ ನೋಂದಣಿ ಆಗದಿರುವುದಕ್ಕೆ ಅಧಿಕಾರಿಗಳಿಂದ ವಿವರಣೆ ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳ ಅಂಕಿ‌- ಸಂಖ್ಯೆಯನ್ನು ಮಾಹಿತಿ ಪಡೆದು, ಅಧಿಕಾರಿಗಳು ಹೆಚ್ಚು ಸಕ್ರಿಯರಾಗುವಂತೆ ತಿಳಿಸಿದರು.

“ಪದವಿ ಕಾಲೇಜು, ಡಿಪ್ಲೊಮಾ, ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು, ಪ್ರಾಂಶುಪಾಲರ
ಜೊತೆಗೆ ಕೂಡಲೇ ಸಭೆ ನಡೆಸಿ, ಗರಿಷ್ಠ ಪ್ರಮಾಣದಲ್ಲಿ ನೋಂದಣಿ ಮಾಡಿಸಬೇಕು. ಸರ್ಕಾರದ ಈ ಯೋಜನೆ ಪರಿಣಾಮಕಾರಿ ಅನುಷ್ಠಾನವಾಗಲು ಶಕ್ತಿ ಮೀರಿ ಪ್ರಯತ್ನ ಮಾಡಬೇಕು” ಎಂದು ಸಚಿವ ಪಾಟೀಲ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಗರಸಭೆ, ಪುರಸಭೆ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಮೂಲಕ ವ್ಯಾಪಕ ಪ್ರಚಾರ ನಡೆಸಬೇಕು. ಯೋಜನೆಯಿಂದ ಸಿಗುವ ಲಾಭದ ಬಗ್ಗೆ ಮನವರಿಕೆ ಮಾಡಿ” ಎಂದು ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದರು.

ಯುವನಿಧಿ ಯೋಜನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಲು ಸಾಮಾಜಿಕ ಜಾಲತಾಣಗಳನ್ನು ಅಧಿಕಾರಿಗಳು ಹೆಚ್ಚು ಬಳಸಿಕೊಳ್ಳಬೇಕು. ವಾಟ್ಸಪ್, ಫೇಸ್‌ಬುಕ್, ಇನ್ಸ್‌ಟಾಗ್ರಾಂ, ಮೆಸೆಂಜರ್, ಟ್ವಿಟ್ಟರ್ ಸೇರಿದಂತೆ ಅನೇಕ ರೀತಿಯ ವೇದಿಕೆಗಳನ್ನು ಬಳಸಿಕೊಳ್ಳಬೇಕು ಎಂದು ಸೂಚಿಸಿದರು.

ಪ್ರತಿಯೊಂದು ಕಾಲೇಜು ಮುಂಭಾಗ ಬೃಹತ್ ಪ್ರಮಾಣದ ಕಟ್ ಔಟ್, ಹೋರ್ಡಿಂಗ್ ಸೇರಿದಂತೆ ಗ್ರಾಮ ಪಂಚಾಯತಿಗಳು ಮತ್ತು ಪ್ರತಿ ಗ್ರಾಮದಲ್ಲೂ ಊರಿನ ಮುಂಭಾಗದಲ್ಲಿ ಫ್ಲೆಕ್ಸ್ ಆಳವಡಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಾಯಂ ಸೇವೆ | ಕೊಟ್ಟ ಮಾತಿನಂತೆ ನಡೆದುಕೊಳ್ಳಿ: ಸರ್ಕಾರಕ್ಕೆ ಅತಿಥಿ ಉಪನ್ಯಾಸಕರ ಒಕ್ಕೊರಲ ಆಗ್ರಹ

ಅಭ್ಯರ್ಥಿಗಳ ನೋಂದಣಿ ವೇಳೆ ನಕಲಿ ಪ್ರಮಾಣಪತ್ರ ಸಲ್ಲಿಕೆ ಆಗದಂತೆ ನೋಡಿಕೊಳ್ಳಬೇಕು. ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳು ಡಿಪ್ಲೊಮಾ, ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜಿನ ಮಾನ್ಯತೆಯನ್ನು ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು. ಒಂದು ವೇಳೆ ಪ್ರಮಾದ ಕಂಡು ಬಂದರೆ, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದರು.

ಈ ವೇಳೆ, ಕೌಶಲ್ಯಭಿವೃದ್ದಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್,ಆಯುಕ್ತೆ ರಾಗಪ್ರಿಯ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...