ನರ್ಸಿಂಗ್‌ ಕಾಲೇಜು ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸಲು ಸಚಿವ ಶರಣ್ ಪ್ರಕಾಶ್‌ ಪಾಟೀಲ್‌ ಸೂಚನೆ

Date:

ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, “ರಾಜ್ಯದ ನರ್ಸಿಂಗ್‌ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ನಮ್ಮ ಕಚೇರಿಗೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ. ಇದರಿಂದ ವಿದ್ಯಾರ್ಥಿಗಳ ಹಣಕಾಸಿನ ಹೊರೆಯನ್ನು ಹೊರಬೇಕಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳುತ್ತಿದ್ದೇವೆ” ಎಂದರು.

“ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳ ನೇತೃತ್ವದಲ್ಲಿ 5 ಜನ ಸದಸ್ಯರುಗಳ “ಶುಲ್ಕ ನಿಯಂತ್ರಣ ಪ್ರಾಧಿಕಾರವನ್ನು” ರಚಿಸಲಾಗುವುದು. ನರ್ಸಿಂಗ್‌ ಕಾಲೇಜುಗಳ ಶುಲ್ಕಗಳನ್ನ ಪರಿಶೀಲಿಸುವ ಕಾರ್ಯವನ್ನು ಈ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಸರಕಾರ ನಿಗದಿಪಡಿಸಿರುವ ಶುಲ್ಕಕ್ಕೂ ಹೆಚ್ಚು ಶುಲ್ಕವನ್ನು ವಸೂಲು ಮಾಡುತ್ತಿರುವ ಸಂಸ್ಥೆಗಳ ಎಸೆನ್ಸಿಯಲ್‌ ಸರ್ಟಿಫಿಕೇಟ್‌ ಹಾಗೂ ಫೀಸಿಬಲಿಟಿ ಸರ್ಟಿಫಿಕೇಟ್‌ನ್ನು ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ಸರಕಾರಿ ಕೋಟಾದ ಅಡಿಯಲ್ಲಿ ಭರ್ತಿಯಾಗುವ ವಿದ್ಯಾರ್ಥಿಗಳಿಗೆ 10,000. ಮ್ಯಾನೇಜ್‌ ಮೆಂಟ್‌ ಕೋಟಾದ ಅಡಿಯಲ್ಲಿ ಭರ್ತಿಯಾಗುವ ವಿದ್ಯಾರ್ಥಿಗಳಿಗೆ 1 ಲಕ್ಷ ಮತ್ತು ನಾನ್‌-ಕರ್ನಾಟಕ ವಿದ್ಯಾರ್ಥಿಗಳಿಗೆ 1.40 ಲಕ್ಷ ರೂಪಾಯಿಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ 611 ನರ್ಸಿಂಗ್‌ ಕಾಲೇಜುಗಳಿದ್ದು 35,000 ಸೀಟ್‌ ಗಳು ಲಭ್ಯವಿವೆ. ಅಲ್ಲದೇ, ಈ ಶುಲ್ಕವನ್ನು ಶೇಕಡಾ 20 ರಷ್ಟು ಹೆಚ್ಚಿಸುವಂತೆ ನರ್ಸಿಂಗ್‌ ಕಾಲೇಜುಗಳ ಆಡಳಿತ ಮಂಡಳಿಯ ಪ್ರತಿನೀಧಿಗಳು ಇತ್ತೀಚೆಗೆ ಮಾಡಿದ ಮನವಿಯನ್ನು ತಿರಸ್ಕರಿಸಲಾಗಿದೆ” ಎಂದರು.

“ಈ ಸಮಿತಿಯು ಬಿಎಸ್ಸಿ, ನರ್ಸಿಂಗ್‌ ಹಾಗೂ ಜನರಲ್‌ ನರ್ಸಿಂಗ್‌ ಮತ್ತು ಮಿಡ್‌ವೈಪ್ರೀ (ಜಿಎನ್‌ಎಂ) ಡಿಪ್ಲಮೋ ಪ್ರೋಗ್ರಾಂ ಗಳ ಶುಲ್ಕದ ಬಗ್ಗೆಯೂ ನಿಗಾವಹಿಸಲಿದೆ. ಹಾಗೆಯೇ, ಜಿಲ್ಲಾಧಿಕಾರಿಗಳ ಸಭೆಯನ್ನು ಆಯೋಜಿಸಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿರುವ ಜಿಎನ್‌ಎಂ ನರ್ಸಿಂಗ್‌ ಕಾಲೇಜುಗಳಲ್ಲಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಒಂದು ತಿಂಗಳ ಒಳಗಾಗಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಲು ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿಗಳಾದ ಮೊಹಮ್ಮದ್‌ ಮೋಶಿನ್‌ ಅವರಿಗೆ ಸೂಚಿಸಲಾಗಿದೆ” ಎಂದು ಹೇಳಿದರು.

“ಬಿಎಸ್‌ಸಿ ನರ್ಸಿಂಗ್‌ ಕಾಲೇಜುಗಳಿಗೆ ಸಂಬಂಧಿಸಿದಂತೆ ಒಂದು ಪರಿಶೀಲನಾ ತಂಡವನ್ನು ರಚಿಸಿ ವರದಿ ನೀಡಬೇಕು” ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಾದ ಡಾ. ಬಿ.ಎಲ್‌ ಸುಜಾತಾ ಅವರಿಗೆ ಸೂಚನೆ ನೀಡಿದರು.

“ನರ್ಸಿಂಗ್‌ ಕಾಲೇಜುಗಳಲ್ಲಿ ಅಗತ್ಯ ಸೌಲಭ್ಯಗಳು, ಭೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು, ಲ್ಯಾಬೋರೋಟರಿಗಳು, ಗ್ರಂಥಾಲಯಗಳು ಹಾಗೂ ಹೈಜೀನ್‌ ಸ್ಟಾಂರ್ಡ್‌ಡ್‌ ಇಲ್ಲದೇ ಇರುವ ಬಗ್ಗೆ ಹಲವು ದೂರುಗಳು ನಮ್ಮ ಕಚೇರಿಗೆ ಸಲ್ಲಿಕೆಯಾಗಿವೆ. ಹೆಚ್ಚು ಶುಲ್ಕವನ್ನು ತಗೆದುಕೊಳ್ಳುವುದರ ಹೊರತಾಗಿಯೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಸಂಸ್ಥೆಗಳು ವಿಫಲವಾಗಿವೆ. ಅಗತ್ಯ ಸೌಲಭ್ಯಗಳನ್ನು ಹೊಂದಿರದೇ ಇರುವ ನರ್ಸಿಂಗ್‌ ಕಾಲೇಜುಗಳ ಅನುಮತಿಯನ್ನ ಹಿಂದಕ್ಕೆ ಪಡೆಯಲಾಗುವುದು” ಎಂದು ಸಚಿವರು ಎಚ್ಚರಿಕೆ ನೀಡಿದರು.

ಒಂದು ಕಟ್ಟಡ ಒಂದು ಸಂಸ್ಥೆ ನಿಯಮ

“ನರ್ಸಿಂಗ್‌ ಕಾಲೇಜುಗಳನ್ನು ನಡೆಸಲು ಅನುಮತಿ ಪಡೆದಿರುವ ಕಟ್ಟಡಗಳಲ್ಲಿ ನರ್ಸಿಂಗ್‌ ಕೋರ್ಸುಗಳನ್ನು ಮಾತ್ರ ನಡೆಸಬೇಕು. ಬೇರೆ ಯಾವುದೇ ಕೋರ್ಸುಗಳನ್ನು ನಡೆಸುತ್ತಿದ್ದರೆ ಅಂತಹ ಕಾಲೇಜುಗಳ ಅನುಮತಿಯನ್ನು ಹಿಂಪಡೆಯಬೇಕು” ಎಂದು ಸೂಚಿಸಿದರು.

ಸಭೆಯಲ್ಲಿ ರಾಜೀವ್‌ ಗಾಂಧಿ ಯೂನಿರ್ಸಿಟಿ ಆಫ್‌ ಹೆಲ್ತ ಸೈನ್ಸ್‌ಸ್‌ ನ ಉಪ-ಕುಲಪತಿಗಳಾದ ಡಾ ರಮೇಶ್‌, ರಿಜಿಸ್ಟ್ರಾರ್‌ ಪಿ.ಆರ್‌ ಶಿವಪ್ರಸಾದ್‌, ಜಂಟಿ ಕಾರ್ಯದರ್ಶಿಗಳಾದ ವೆಂಕಟೇಶ್‌ ಮೂರ್ತಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...