ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತುಗೊಳಿಸಿದ ನಂತರ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಬಲವಂತವಾಗಿ ಅಂಗೀಕರಿಸಲಾಗಿದ್ದು ಈ ಬುಲ್ಡೋಜರ್ ನ್ಯಾಯ ಒಪ್ಪಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ.
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸೋಮವಾರದಿಂದ ದೇಶದಲ್ಲಿ ಜಾರಿಗೆ ಬಂದಿದೆ. ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ 2023 ಎಂಬ ಹೊಸ ಕಾನೂನುಗಳನ್ನು ಜಾರಿ ಮಾಡಲಾಗಿದೆ.
ಈ ಹಿಂದಿನ ಕ್ರಿಮಿನಲ್ ಕಾನೂನುಗಳಾದ ಭಾರತೀಯ ದಂಡ ಸಂಹಿತೆ (ಐಪಿಸಿ), ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್ಪಿಸಿ), ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಯ ಬದಲಿಗೆ ಈ ಮೂರು ಕಾನೂನುಗಳನ್ನು ಜಾರಿ ಮಾಡಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಈಗಾಗಲೇ ಮೊದಲ ಪ್ರಕರಣ ದಾಖಲಾಗಿದೆ. ದೆಹಲಿಯ ಬೀದಿ ಬದಿ ವ್ಯಾಪಾರಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಇದನ್ನು ಓದಿದ್ದೀರಾ? ನೂತನ ಭಾರತೀಯ ನ್ಯಾಯ ಸಂಹಿತೆ: ದೆಹಲಿಯ ಬೀದಿ ಬದಿ ವ್ಯಾಪಾರಿ ವಿರುದ್ಧ ಮೊದಲ ಪ್ರಕರಣ ದಾಖಲು!
ಈ ನೂತನ ಕಾನೂನು ಜಾರಿ ಬೆನ್ನಲ್ಲೇ ಎಕ್ಸ್ ಪೋಸ್ಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, “ಚುನಾವಣೆಯ ರಾಜಕೀಯ ಮತ್ತು ನೈತಿಕ ಆಘಾತದ ನಂತರ, ನರೇಂದ್ರ ಮೋದಿ ಅವರು ಮತ್ತು ಬಿಜೆಪಿಯವರು ಸಂವಿಧಾನವನ್ನು ಗೌರವಿಸುವಂತೆ ನಟಿಸುತ್ತಿದ್ದಾರೆ. ಆದರೆ ಇಂದಿನಿಂದ ಜಾರಿಗೆ ಬರುತ್ತಿರುವ ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಮೂರು ಕಾನೂನುಗಳನ್ನು ಜಾರಿ ಮಾಡಲು 146 ಸಂಸದರನ್ನು ಬಲವಂತವಾಗಿ ಅಮಾನತುಗೊಳಿಸಲಾಗಿದೆ” ಎಂದು ಆರೋಪಿಸಿದರು.
“ಭಾರತವು ಇನ್ನು ಮುಂದೆ ಈ ‘ಬುಲ್ಡೋಜರ್ ನ್ಯಾಯ’ವನ್ನು ಸಂಸದೀಯ ವ್ಯವಸ್ಥೆಯಲ್ಲಿ ಜಾಲ್ತಿಗೆ ತರಲು ಅವಕಾಶ ನೀಡಲ್ಲ” ಎಂದು ಹೇಳಿದರು.
चुनाव में राजनीतिक व नैतिक झटके के बाद मोदी जी और भाजपा वाले संविधान का आदर करने का ख़ूब दिखावा कर रहें हैं, पर सच तो ये है कि आज से जो आपराधिक न्याय प्रणाली के तीन क़ानून लागू हो रहे हैं, वो 146 सांसदों को सस्पेंड कर जबरन पारित किए गए।
INDIA अब ये “बुलडोज़र न्याय” संसदीय…
— Mallikarjun Kharge (@kharge) July 1, 2024
ಸೋಮವಾರದಿಂದ ಎಲ್ಲಾ ಹೊಸ ಎಫ್ಐಆರ್ಗಳನ್ನು ಬಿಎನ್ಎಸ್ ಅಡಿಯಲ್ಲಿ ದಾಖಲಿಸಲಾಗುತ್ತದೆ. ಆದರೆ ಈ ಹಿಂದೆ ದಾಖಲಾದ ಪ್ರಕರಣಗಳು ಅಂತಿಮ ವಿಲೇವಾರಿಯಾಗುವವರೆಗೆ ಹಳೆಯ ಕಾನೂನುಗಳ ಅಡಿಯಲ್ಲಿ ವಿಚಾರಣೆಯನ್ನು ಮುಂದುವರಿಸಲಾಗುತ್ತದೆ.





