ಸಿ ಟಿ ರವಿ ಒಬ್ಬನೇ ಇಷ್ಟು ಕೀಳು ಮಟ್ಟದ ಸಂಸ್ಕೃತಿ ಹೊಂದಿರುವ ವ್ಯಕ್ತಿ: ಡಿ ಕೆ ಶಿವಕುಮಾರ್‌ ವಾಗ್ದಾಳಿ

Date:

ಸಿ ಟಿ ರವಿ ಅವರ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ. ಅವರು ಈ ಹಿಂದೆ ಸಿದ್ದರಾಮಯ್ಯ ಸೇರಿದಂತೆ
ಯಾರ ಬಗ್ಗೆ ಏನೆಲ್ಲಾ ಪದ ಪ್ರಯೋಗ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿಯ ಸರ್ಕಿಟ್ ಹೌಸ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಶುಕ್ರವಾರ ಮಾತನಾಡಿ, “ಈ ಹಿಂದೆ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು ಕರೆದಿದ್ದರು. ಹೀಗೆ ನಮ್ಮ ನಾಯಕರ ವಿರುದ್ಧ ಬಹಳ ಕೀಳು ಮಟ್ಟದ ಪದ ಬಳಕೆ ಮಾಡಿದ್ದಾರೆ. ಇದು ಚಿಕ್ಕಮಗಳೂರು ಸಂಸ್ಕೃತಿಯೇ? ಭಾರತದ ಸಂಸ್ಕೃತಿಯೇ? ಬಿಜೆಪಿ ಸಂಸ್ಕೃತಿಯೇ? ಚಿಕ್ಕಮಗಳೂರಿನಲ್ಲಿ ಇಂತಹ ಸಂಸ್ಕೃತಿಯನ್ನು ನಾನು ಈವರೆಗೂ ನೋಡಿಲ್ಲ. ಇಡೀ ಚಿಕ್ಕಮಗಳೂರಿನಲ್ಲಿ ಇವನೊಬ್ಬನೇ ಇಷ್ಟು ಕೀಳು ಮಟ್ಟದ ಸಂಸ್ಕೃತಿ ಹೊಂದಿರುವ ವ್ಯಕ್ತಿ” ಎಂದು ಕಿಡಿಕಾರಿದರು.

“ಸದನದಲ್ಲಿ ಅಂಬೇಡ್ಕರ್ ಅವರಿಗೆ ಕೇಂದ್ರ ಗೃಹಸಚಿವರು ಅಪಮಾನ ಮಾಡಿದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಆ ಸಂದರ್ಭದಲ್ಲಿ ಈತ ರಾಹುಲ್ ಗಾಂಧಿ ಅವರನ್ನು ಮಾದಕ ವ್ಯಸನಿ ಎಂದು ನಿಂದಿಸಿದರು. ಹೀಗಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಪಕ್ಷದ ನಾಯಕನ ಸಮರ್ಥನೆಗೆ ಮುಂದಾದಾಗ, ಆತ ನಮ್ಮ ಸಚಿವರನ್ನು ಹಲವು ಬಾರಿ ಪ್ರಾ**ಟ್ ಎಂದು ಕರೆದಿದ್ದಾನೆ. ಬಿಜೆಪಿಯವರು ತಮ್ಮ ನಾಯಕನನ್ನು ಹೇಗೆ ಸಮರ್ಥನೆ ಮಾಡಿಕೊಂಡರೋ ಅದೇ ರೀತಿ ನಮ್ಮ ಸಚಿವರು ನಮ್ಮ ನಾಯಕರನ್ನು ಸಮರ್ಥನೆ ಮಾಡಿಕೊಂಡಿದ್ದಾರೆ, ತಪ್ಪೇ? ಅದಕ್ಕಾಗಿ ಇಂತಹ ಪದ ಬಳಸುವುದೇ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಟ್ಟು 12 ಬಾರಿ ಈ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಮಾಧ್ಯಮಗಳು ಈ ಎಲ್ಲ ಅಂಶಗಳನ್ನು ಸೇರಿ ಸುದ್ದಿ ಪ್ರಕಟಿಸಬೇಕು. ನಿಮ್ಮ ಬಳಿ ದಾಖಲೆ ಇಲ್ಲವಾದರೆ ಹೇಳಿ ನಾನು ನೀಡುತ್ತೇನೆ. ಪರಿಷತ್ತಿನಲ್ಲಿ ಗುರುವಾರದಂದು ನನ್ನ ಇಲಾಖೆಗಳಿಗೆ ಸಂಬಂಧಿಸಿದ 12 ಪ್ರಶ್ನೆಗಳಿದ್ದವು. ಅವುಗಳಿಗೆ ಉತ್ತರ ನೀಡಿ ನಾನು ವಿಧಾನಸಭೆಗೆ ಬಂದಾಗ ಈ ಘಟನೆ ನಡೆದಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಅವಾಚ್ಯ ಪದ ಬಳಸಿದ್ದರಿಂದಲೇ ಸಿ ಟಿ ರವಿ ಅರೆಸ್ಟ್: ಸಿಎಂ ಸಿದ್ದರಾಮಯ್ಯ

ಸಭಾಪತಿಗಳ ನಡೆ ಬೇಸರ ತಂದಿದೆ

ಸಾಕ್ಷಿಗಳು ಇದ್ದರೆ ಸಭಾಪತಿಗಳು ಕ್ರಮ ಕೈಗೊಳ್ಳಬಹುದಿತ್ತಲ್ಲವೇ ಎಂದು ಕೇಳಿದಾಗ, “ಅವರು ಹಿರಿಯ ನಾಯಕರು. ಅವರ ಬಗ್ಗೆ ನನಗೆ ಗೌರವವಿದೆ. ಆದರೆ ಈ ವಿಚಾರದಲ್ಲಿ ಅವರ ನಡೆ ಬೇಸರ ತಂದಿದೆ. ಅವರು ಯಾವುದೇ ಪಕ್ಷದವರಾದರೂ ಸಭಾಪತಿ ಸ್ಥಾನದಲ್ಲಿ ಕೂತಾಗ ಎಲ್ಲರ ರಕ್ಷಣೆ ಮಾಡಬೇಕು. ಈ ವಿಚಾರವಾಗಿ ಅವರು ನಿನ್ನೆ ಚರ್ಚೆಗೆ ಅವಕಾಶ ನೀಡಬೇಕಿತ್ತು. ಅಲ್ಲಿ ಏನಾಗಿದೆ ಎಂದು ಪರಿಶೀಲನೆ ಮಾಡಬೇಕಿತ್ತು. ಒಂದು ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ತಪ್ಪಿದ್ದರೆ ಅವರದ್ದೆ ತಪ್ಪು ಎಂದು ಹೇಳಬೇಕಿತ್ತು. ಅದನ್ನು ಬಿಟ್ಟು ಇಬ್ಬರನ್ನು ಕರೆದುಕೊಂಡು ಹೋಗಿ ಹೇಳಿಕೆ ಬರೆಸಿಕೊಳ್ಳುವುದು ಸರಿಯಲ್ಲ” ಎಂದು ಹೇಳಿದರು.

ಪೊಲೀಸರು ರಾತ್ರಿ ಪೂರ್ತಿ ತಿರುಗಾಡಿಸಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಪೊಲೀಸರು ಏನು ಮಾಡಿದ್ದಾರೆ ಗೊತ್ತಿಲ್ಲ. ಸುಮ್ಮನೆ ಆರೋಪ ಮಾಡುತ್ತಾರೆ. ಪೊಲೀಸರು ಬೇರೆಯವರಿಗಿಂತ ಹೆಚ್ಚು ಸೌಜನ್ಯ ತೋರಿದ್ದಾರೆ. ಪೊಲೀಸ್ ಠಾಣೆಯಲ್ಲಿ ಅವರ ಮನೆಯವರಿಗೆ ಅವಕಾಶ ನೀಡಲಿ. ಅದನ್ನು ಬಿಟ್ಟು ಖಾನಾಪುರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರನ್ನು ಬಿಟ್ಟುಕೊಂಡು ಬಿಜೆಪಿ ಸಭೆ ಮಾಡುವುದು ಎಷ್ಟು ಸರಿ? ಈ ವಿಚಾರದಲ್ಲಿ ಪೊಲೀಸರ ನಡೆ ಸರಿಯಿಲ್ಲ. ನಾವು ಪೊಲೀಸರ ಕಾರ್ಯದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿದ್ದರೂ ಅವರಿಗೆ ಯಾವುದೇ ತೊಂದರೆ ಆಗಲು ಅವಕಾಶ ನೀಡಿಲ್ಲ. ತಮ್ಮ ಶಾಸಕಿಗೆ ಅಪಮಾನ ಮಾಡಿದರೆ ಕ್ಷೇತ್ರದ ಜನ ರೊಚ್ಚಿಗೇಳುವುದು ಸಹಜ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...