ಸಿ ಟಿ ರವಿ ಅವರ ಸಹಕಾರ ಸಿ ಪಿ ಯೋಗೇಶ್ವರ್ ಪರವಾಗಿದೆ: ಮಾಜಿ ಸಂಸದ ಡಿ ಕೆ ಸುರೇಶ್

Date:

ಸಿ ಟಿ ರವಿ ಅವರ ಸಹಕಾರ ಸಿ ಪಿ ಯೋಗೇಶ್ವರ್ ಅವರ ಪರವಾಗಿದೆ. ಮಿಕ್ಕ ವಿಶ್ಲೇಷಣೆ ಮಾಧ್ಯಮದವರು ಮಾಡಿಕೊಳ್ಳಿ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದಲ್ಲಿ ಸಿ.ಪಿ.ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಕಾಂಗ್ರೆಸ್ ದುರ್ಬಲವೆಂದು ತೋರಿಸಿಕೊಂಡಿದೆ ಎನ್ನುವ ಸಿ ಟಿ ರವಿ ಅವರ ಹೇಳಿಕೆ ಸುದ್ದಿಗಾರರು ಕೇಳಿದಾಗ ಈ ರೀತಿ ಪ್ರತಿಕ್ರಿಯಿಸಿದರು.

ಬಿಜೆಪಿಯ ಕೆಲ ನಾಯಕರಿಂದಾಗಿ ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದಾರೆ ಎಂಬ ಕುಮಾರಸ್ವಾಮಿ ಹಾಗೂ ನಿಖಿಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ “ನಾನು ಸಿ ಟಿ ರವಿಯವರ ಹೇಳಿಕೆಗೆ ಮಾತ್ರ ಉತ್ತರ ನೀಡುತ್ತಿದ್ದು, ಮಿಕ್ಕ ಚರ್ಚೆ, ವಿಶ್ಲೇಷಣೆಯನ್ನು ನೀವು ಮಾಡಿ. ಮಾಧ್ಯಮದವರು ಹೆಚ್ಚು ವ್ಯಾಖ್ಯಾನ ಮಾಡುವುದರಿಂದ ಇದರ ಸಾಧಕ- ಬಾಧಕಗಳು ಹಾಗೂ ಕಳೆದ ಒಂದು ವಾರಗಳಿಂದ ನಡೆದ ವಿದ್ಯಮಾನಗಳನ್ನು ರಾಜ್ಯದ ಜನರಿಗೆ ನೀವು ತಿಳಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಖಿಲ್ ಅಥವಾ ಅನಸೂಯಾ ಮಂಜುನಾಥ್ ಅವರನ್ನು ಕಣಕ್ಕೆ ಇಳಿಸಬೇಕು ಎನ್ನುವ ಚರ್ಚೆಯ ಬಗ್ಗೆ ಕೇಳಿದಾಗ “ಅದು ಆಯಾಯ ಪಕ್ಷದ ತೀರ್ಮಾನ” ಎಂದು ಹೇಳಿದರು.

ಚನ್ನಪಟ್ಟಣದಲ್ಲಿ ಜೆಡಿಎಸ್ ನಿಂದ ಪ್ರಬಲ ವ್ಯಕ್ತಿಯನ್ನೇ ಕಾಂಗ್ರೆಸ್‌ಗೆ ಕರೆತರಲಾಗುತ್ತದೆ ಎನ್ನುವ ಸುದ್ದಿಯ ಬಗ್ಗೆ ಕೇಳಿದಾಗ “ಕಾದು ನೋಡೋಣ” ಎಂದಷ್ಟೇ ಉತ್ತರಿಸಿದರು.

ಚನ್ನಪಟ್ಟಣದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ

ಚನ್ನಪಟ್ಟಣದಲ್ಲಿ ಡಿ.ಕೆ.ಸುರೇಶ್ ಅವರಿಗೆ ಟಿಕೆಟ್ ನೀಡಲು ಶಿವಕುಮಾರ್ ಅವರು ಹಿಂದೇಟು ಹಾಕಿದರು ಎನ್ನುವ ಬಗ್ಗೆ ಕೇಳಿದಾಗ, “ನಾನು ಲೋಕಸಭಾ ಚುನಾವಣೆಯಲ್ಲಿ ಸೋತಿದ್ದೇನೆ. ತಕ್ಷಣ ಇನ್ನೊಂದು ಚುನಾವಣೆಗೆ ನಿಂತರೆ, ಜನರಿಗೆ ಒಳ್ಳೆಯ ಸಂದೇಶ ನೀಡಿದಂತೆ ಆಗುವುದಿಲ್ಲ. ಹೀಗಾಗಿ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೈಕಮಾಂಡ್‌ಗೆ ಹಾಗೂ ಪಕ್ಷದ ವರಿಷ್ಠರಿಗೆ ತಿಳಿಸಿದ್ದೆ. ಅನೇಕ ಕಾರ್ಯಕರ್ತರು ನಾನೇ ನಿಲ್ಲಬೇಕು ಎಂದು ಹೇಳಿದರು. ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ” ಎಂದರು.

ಅಭ್ಯರ್ಥಿಗಳ ವಿಚಾರದಲ್ಲಿ ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರಬೇಕು

ಯೋಗೇಶ್ವರ್ ಅವರು ಪಕ್ಷದಲ್ಲಿ ಮೂರು ವರ್ಷ ದುಡಿದ ನಂತರ ಟಿಕೆಟ್ ನೀಡಿ ಎನ್ನುವ ಕಾರ್ಯಕರ್ತರ ಹೇಳಿಕೆಗಳ ಬಗ್ಗೆ ಕೇಳಿದಾಗ, “ಪಕ್ಷದ ಶಿಸ್ತಿನ ಸಿಪಾಯಿಗಳಾಗಿ ನಾವುಗಳು, ಮುಖಂಡರು, ಕಾರ್ಯಕರ್ತರಾದಿಯಾಗಿ ಎಲ್ಲರೂ ಪಕ್ಷ ತೆಗೆದುಕೊಂಡಿರುವ ತೀರ್ಮಾನಕ್ಕೆ ಬದ್ಧವಾಗಿರಬೇಕಾಗುತ್ತದೆ. ಒಬ್ಬೊಬ್ಬರದು ಒಂದೊಂದು ಅಭಿಪ್ರಾಯವಿರುತ್ತದೆ. ನಾಮಪತ್ರ ಸಲ್ಲಿಕೆಯಾದ ನಂತರ ಎಲ್ಲರ ಬಳಿಯೂ ನಾನೇ ಖುದ್ದಾಗಿ ಮಾತನಾಡುತ್ತೇನೆ” ಎಂದು ತಿಳಿಸಿದರು.

ಆಕಾಂಕ್ಷಿಗಳ ಪಟ್ಟಿ ದೆಹಲಿಗೆ

ಶಿಗ್ಗಾಂವಿಯಲ್ಲಿ ಮುಸ್ಲಿಂ ಅಭ್ಯರ್ಥಿ ಹೊರತಾಗಿ ಬೇರೆಯವರನ್ನು ಘೋಷಣೆ ಮಾಡಲಾಗುತ್ತದೆಯೇ ಎಂದು ಕೇಳಿದಾಗ, “ಇದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸ್ಕ್ರೀನಿಂಗ್ ಕಮಿಟಿಯವರು ಈಗಾಗಲೇ ನಾಲ್ಕರಿಂದ ಐದು ಜನ ಆಕಾಂಕ್ಷಿಗಳ ಹೆಸರನ್ನು ದೆಹಲಿಗೆ ಕಳಿಸಿರಬಹುದು. ಮಾಜಿ ಮುಖ್ಯಮಂತ್ರಿ ಕ್ಷೇತ್ರವಾಗಿರುವುದರಿಂದ, ಗೆಲ್ಲುವಂತಹ ಪ್ರಭಾವಿ ವ್ಯಕ್ತಿಗೆ ಟಿಕೆಟ್ ನೀಡಬಹುದು” ಎಂದರು.

ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ ಎನ್ನುವ ಸಚಿವ ಜಮೀರ್ ಅವರ ಬಹಿರಂಗ ಹೇಳಿಕೆ ಬಗ್ಗೆ ಕೇಳಿದಾಗ, “ಪ್ರತಿ ಬಾರಿಯೂ ಶಿಗ್ಗಾಂವಿ ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲಾಗುತ್ತಿದೆ. ಕ್ಷೇತ್ರದ ಅಭ್ಯರ್ಥಿ ಆಯ್ಕೆ ಉಸ್ತುವಾರಿಯನ್ನು ಜಮೀರ್ ಅವರಿಗೆ ಹೈಕಮಾಂಡ್ ನೀಡಿರುವುದರಿಂದ ಹಾಗೂ ಅವರು ಸಹ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕಾರಣಕ್ಕೆ ಈ ರೀತಿಯ ಬೇಡಿಕೆ ಇಡುವುದು ಸಹಜ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...