ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣರ ಭಾವಚಿತ್ರ ಬಿಡುಗಡೆ, ಫೆ.17ರಿಂದ ಸರ್ಕಾರಿ ಕಚೇರಿಗಳಲ್ಲಿ ಅಳವಡಿಕೆ

Date:

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಂಸ್ಕೃತಿಕ ನಾಯಕ- ವಿಶ್ವಗುರು ಬಸವಣ್ಣನವರ ಭಾವಚಿತ್ರ ಮತ್ತು ವಚನ‌ ವಿವೇಕ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.

ಬಳಿಕ ಮಾತನಾಡಿದ ಸಿದ್ದರಾಮಯ್ಯ, “ಫೆ.17 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಬಸವಣ್ಣರ ನೂತನ ಭಾವಚಿತ್ರ ಅನಾವರಣಗೊಳಿಸಲಾಗುತ್ತದೆ.‌ ಪ್ರತಿ ಭಾವಚಿತ್ರದ‌‌ ಕೆಳಗಡೆ ಸಾಂಸ್ಕೃತಿಕ ನಾಯಕ ಬಸವಣ್ಣ ಅಂತ ಬರೆಯುತ್ತೇವೆ. ಬುದ್ಧ, ಬಸವಣ್ಣ, ಗಾಂಧಿ ಹಾಗೂ ಅಂಬೇಡ್ಕರ್ ಬಗ್ಗೆ ಇಡೀ ವಿಶ್ವವೇ ಮಾತನಾಡುತ್ತದೆ. ಇವರು ನಮ್ಮ ಸಮಾಜದಲ್ಲಿ ಇರುವ ಅಂಕುಡೊಂಕು ತಿದ್ದಿ, ಆರೋಗ್ಯಕರ ಸಮಾಜ ನಿರ್ಮಾಣ ಮಾಡಿದ್ದಾರೆ” ಎಂದರು.

“ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಹೊಸ ಭಾವಚಿತ್ರ ಮೌಢ್ಯಗಳನ್ನು ಸಮಾಜದಲ್ಲಿ ನೋಡಿದ್ದೇವೆ. ಸಮಾಜದ ಬದಲಾವಣೆಗಾಗಿ ಅಸಮಾನತೆ ಹೋಗಬೇಕು. ಪ್ರತಿಯೊಬ್ಬರೂ ಸ್ವಾಭಿಮಾನದಿಂದ ಬದುಕುವ ವ್ಯವಸ್ಥೆ ನಿರ್ಮಾಣ ಆಗಬೇಕು ಎಂದು ಬಸವಣ್ಣ ಕನಸು ಕಂಡಿದ್ದರು. ಅದರಂತೆಯೇ ಬಸವಣ್ಣ ನಡೆದುಕೊಂಡಿದ್ದರು. ಇದು ಜನಪರವಾದ ಸಮಾಜ. ಆಡು ಮಾತಿನಲ್ಲೇ ಬಸವಣ್ಣ ವಚನ ರೂಪಿಸಿದ್ದವರು. ಜನರಿಗೆ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ರಚನೆ‌ ಮಾಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿಕಾರ ಹಾಗೂ ಸಂಪತ್ತು ಬಲಾಢ್ಯರ ಕೈಯಲ್ಲಿ ಹೋಗಬಾರದು. ವಿದ್ಯಾವಂತರು ಸಹ ತಮ್ಮ ಹಣೆಬರಹ ಸರಿಯಿಲ್ಲ ಅಂತಾರೆ. ದೇವರು ಬಡವನಾಗಿರು ಅಂತ ಬರಿತಾರಾ? ದೇವರು ಕರುಣಾಮಯಿ ಅಂತಾರಲ್ವಾ? ಇದೆಲ್ಲಾ ಸ್ವಾರ್ಥಿಗಳು ಹೇಳಿದ ಮಾತುಗಳು. ಕಾಯಕ ಮಾಡಿದವರೆಲ್ಲಾ ಶ್ರೀಮಂತರು, ಕಾಯಕ ಮಾಡದವರೆಲ್ಲಾ ಬಡವರು. ಸಂಸದೀಯ ವ್ಯವಸ್ಥೆ ನಮ್ಮ ಕಾಲದಲ್ಲೇ ಬಂದಿದೆ. ಬ್ರಿಟಿಷರ ಕಾಲದಲ್ಲಿ ಸಂಸದೀಯ ವ್ಯವಸ್ಥೆ ಬಂದಿದೆ ಅಂತಾರೆ. ಇದು ತಪ್ಪು, ಯಾಕೆಂದರೆ ಬಸವಣ್ಣರ ಕಾಲದಲ್ಲೇ ಸಂಸದೀಯ ವ್ಯವಸ್ಥೆ ಬಂದಿತ್ತು. ಬಸವಣ್ಣರು ಅನುಭವ ಮಂಟಪ ಸ್ಥಾಪನೆ ಮಾಡಿದ್ದರು” ಎಂದು ಸಿಎಂ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಜೆಟ್‌ ಅಧಿವೇಶನ | ₹50 ಸಾವಿರ ಕೋಟಿ ಹೂಡಿಕೆ, 58 ಸಾವಿರ ಉದ್ಯೋಗ ಸೃಷ್ಟಿ: ಎಂ ಬಿ ಪಾಟೀಲ್

“ಅಲ್ಲಿ ಮೌಢ್ಯ, ಕಂದಾಚಾರ, ಸಮಸ್ಯೆಗಳು ಅನುಭವ ಮಂಟಪದಲ್ಲಿ ಚರ್ಚೆ ಆಗುತ್ತಿತ್ತು. ಮಹಿಳೆಯರಿಗೆ ಸ್ವಾತಂತ್ರ್ಯ ಇರಲಿಲ್ಲ. ಮಹಿಳೆಯರ ವಿಚಾರದಲ್ಲಿ ಬಹಳ ಕೆಟ್ಟ ಪದ್ಧತಿ ಇತ್ತು. ಆರ್ಥಿಕ ಚಲನೆ ಆದರೆ ಮಾತ್ರವೇ ಪ್ರತಿಯೊಂದು ಜಾತಿ ಗಟ್ಟಿಯಾಗಿ ನೆಲೆ ನಿಲ್ಲುತ್ತದೆ. ಮನುವಾದಿಗಳು ಕೆಟ್ಟ ಸಮಾಜ ನಿರ್ಮಾಣ ಮಾಡಿದ್ದರು. ಅದನ್ನು ಹೋಗಲಾಡಿಸುವ ಸಲುವಾಗಿ ಬಸವಣ್ಣ ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನ ದ್ವೇಷಿಸಿದರೆ ದುರ್ಗುಣ. ನಾನೇನು ಕುರುಬ ಜಾತಿಯಲ್ಲಿ ಹುಟ್ಟಬೇಕು ಅಂತ ಅರ್ಜಿ ಹಾಕಿದ್ನಾ? ನಾನು ಹುಟ್ಟಿದ್ದೇನೆ. ಜಾತಿ ವ್ಯವಸ್ಥೆ ಇದೆ” ಎಂದರು.

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಸಭಾಪತಿ

ಸಭಾಪತಿ ಬಸವರಾಜ್ ಹೊರಟ್ಟಿ ಮಾತನಾಡಿ, “ಕರ್ನಾಟಕದಲ್ಲಿ ಅನೇಕ ಸರ್ಕಾರಗಳು ಬಂದು ಹೋಗಿವೆ. ಅನೇಕ ಮುಖ್ಯಮಂತ್ರಿಗಳು ಸಹ ಬಂದು ಹೋಗಿದ್ದಾರೆ. ಆದರೆ ಇಂದು ಸಿದ್ದರಾಮಯ್ಯ ಅವರು ಬಸವೇಶ್ವರರ ಫೋಟೋ ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲಿ ಇಡಬೇಕು ಎಂಬ ನಿರ್ಧಾರ ಮಾಡಿದ್ದಾರೆ. ಮೊಟ್ಟ ಮೊದಲು ಸಿದ್ದರಾಮಯ್ಯ ತೆಗೆದುಕೊಂಡ ನಿರ್ಧಾರ ಇಂದು ಇಡೀ ದೇಶಕ್ಕೆ ಮಾದರಿ ಆಗಿದೆ” ಎಂದರು.

ಈ ವೇಳೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಹಿರಿಯ ಸಾಹಿತಿ ಗೊ.ರು. ಚನ್ನಬಸಪ್ಪ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ‌ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...