ನ್ಯಾ. ಕುನ್ಹಾ ಆಯೋಗವು ಬಿಜೆಪಿ ಸರ್ಕಾರದ ಕೋವಿಡ್ ಭ್ರಷ್ಟಾಚಾರ ಬಿಚ್ಚಿಟ್ಟಿದೆ: ಸಿಎಂ ಸಿದ್ದರಾಮಯ್ಯ

Date:

ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಮತ್ತು ಆರೋಗ್ಯ ಮಂತ್ರಿಯಾಗಿದ್ದ ಶ್ರೀರಾಮುಲು ಇಬ್ಬರೂ ಕೋವಿಡ್ ಸಂದರ್ಭದಲ್ಲಿ ಚೀನಾದಿಂದ ಪಿಪಿಇ ಕಿಟ್ ತರಿಸಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ನ್ಯಾ.ಮೈಕೆಲ್ ಕುನ್ಹಾ ತನಿಖಾ ಆಯೋಗ ಪತ್ತೆ ಹಚ್ಚಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಂಡೂರು ವಿಧಾನಸಭಾ ಕ್ಷೇತ್ರದ ಮೆಟ್ರಿಕಿ ಗ್ರಾಮದಲ್ಲಿ ಮಾತನಾಡಿದ ಅವರು, “ಕೋವಿಡ್ ಸಂದರ್ಭದಲ್ಲಿ ಇಡೀ ರಾಜ್ಯದ ಜನತೆ ಭಯ, ಆತಂಕದಲ್ಲಿ ದೇವರ ಪ್ರಾರ್ಥನೆ ಮಾಡುತ್ತಿದ್ದಾಗ ಬಿಜೆಪಿ ಸರ್ಕಾರ ಮತ್ತು ಸಚಿವ ಶ್ರೀರಾಮುಲು ಅವರು ಹಣ ಲೂಟಿ ಮಾಡುವುದರಲ್ಲಿ ಮುಳುಗಿದ್ದರು. ನಮ್ಮ ಜನರ ಮೃತದೇಹಗಳ ಹೆಸರಲ್ಲೂ ಭ್ರಷ್ಟಚಾರ ನಡೆಸಿದ ಬಿಜೆಪಿ ಯವರನ್ನು ಯಾವ ದೇವರೂ ಕ್ಷಮಿಸಲ್ಲ. ನೀವೂ ಕ್ಷಮಿಸಬೇಡಿ” ಎಂದು ಜನರಿಗೆ ಕರೆ ನೀಡಿದರು.

“ಬಿಜೆಪಿ ಶ್ರೀಮಂತರ ಮತ್ತು ಮೇಲ್ವರ್ಗದವರ ಪಕ್ಷ. ಕಾಂಗ್ರೆಸ್ ಜಾರಿ ಮಾಡುವ ಎಲ್ಲ ಬಡವರ ಪರವಾದ ಕಾರ್ಯಕ್ರಮಗಳನ್ನು ವಿರೋಧಿಸುತ್ತದೆ. ಅಪಪ್ರಚಾರ ಮಾಡುತ್ತದೆ. ಆಗ ಇಂದಿರಾ ಗಾಂಧಿಯವರ 20 ಅಂಶಗಳ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸಿ ಅಪಪ್ರಚಾರ ಮಾಡಿತ್ತು. ಈಗ ನಮ್ಮ‌ ಸರ್ಕಾರದ ಐದು ಗ್ಯಾರಂಟಿಗಳನ್ನು ವಿರೋಧಿಸಿ ಅಪಪ್ರಚಾರ ಮಾಡುತ್ತಿದೆ. ಇದೇ ಬಿಜೆಪಿಯ ಜಾಯಮಾನ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಜೆಪಿ ಕೋವಿಡ್ ಹಗರಣ ಬಟಾಬಯಲು | 330 ರೂ. ಕಿಟ್‌ಗೆ 2,200 ರೂ. ಪಾವತಿಸಿದ್ದ ಬಿಎಸ್‌ವೈ ಸರ್ಕಾರ; ಏಳು ಪಟ್ಟು ಹೆಚ್ಚು ಹಣಕ್ಕೆ ಕಾರಣಗಳೇ ಇಲ್ಲ!

“ಬಿಜೆಪಿ ರೈತರು, ಕಾರ್ಮಿಕರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ದಲಿತರು, ಹಿಂದುಳಿದವರ ಪರವಾಗಿ ಒಂದೇ ಒಂದು ಕಾರ್ಯಕ್ರಮ ಕೊಟ್ಟಿದ್ದರೆ ನೆನಪಿಸಿಕೊಂಡು ಹೇಳಿ ನೋಡೋಣ. ಯಾವ ಕಾರ್ಯಕ್ರಮವನ್ನೂ ಕೊಟ್ಟಿಲ್ಲ. ಅದಕ್ಕೆ ನಿಮಗೆ ನೆನಪಾಗ್ತಿಲ್ಲ. ಸಂಡೂರಿನಲ್ಲಿರುವ ರಸ್ತೆ, ಶಾಲೆ, ವಸತಿ ಶಾಲೆ, ಅಂಗನವಾಡಿ, ಆಸ್ಪತ್ರೆ, ನೀರು, ನೀರಾವರಿ ಎಲ್ಲವೂ ಆಗಿರುವುದು ಸಂತೋಷ್ ಲಾಡ್ ಮತ್ತು ತುಕಾರಾಮ್ ಅವರ ಅವಧಿಯಲ್ಲಿ. ಬಿಜೆಪಿಯವರು ಕೇವಲ ಸುಳ್ಳು ಹೇಳಿಕೊಂಡು, ಜನರ ನಡುವೆ ದ್ವೇಷ ಬಿತ್ತುತ್ತಾ ರಾಜಕಾರಣ ಮಾಡುತ್ತಿದ್ದಾರೆ” ಎಂದು ಹರಿಹಾಯ್ದರು.

“78 ವರ್ಷದ ಸಿದ್ದರಾಮಯ್ಯ ಅವರು 28 ವರ್ಷದ ಯುವಕನ ರೀತಿಯಲ್ಲಿ ದಿನಕ್ಕೆ 12-14 ಗಂಟೆ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಇದ್ದಾಗಲೂ ದಿನಕ್ಕೆ ಏಳು-ಎಂಟು ಅಧಿಕಾರಿಗಳ ಸಭೆ ನಡೆಸ್ತಾರೆ. ಮೂರು ದಿನಗಳಿಂದ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೂ ಸಂಡೂರು ಕ್ಷೇತ್ರದಲ್ಲೇ , ಸಂಡೂರು ಜನರ ಮನೆ ಬಾಗಿಲಿಗೇ ಬಂದು ಮತ ಕೇಳುತ್ತಿದ್ದಾರೆ. ನಮ್ಮ ತಂದೆ ಸಮಾನರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನ್ನಪೂರ್ಣಮ್ಮ ಅವರಿಗೆ ಆಶೀರ್ವಾದ ಮಾಡಿ ಅಂತ ಕೇಳುತ್ತಿದ್ದಾರೆ. ಇವರ ಮಾತು ನೆರವೇರಿಸಿ ಅನ್ನಪೂರ್ಣಮ್ಮ ಅವರನ್ನು ಗೆಲ್ಲಿಸಿ” ಎಂದು ಸಚಿವ ಸಂತೋಷ್‌ ಲಾಡ್‌ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...