ಕಾವಡ್ ಯಾತ್ರೆ ಮಾರ್ಗದಲ್ಲಿ ಮಸೀದಿ, ಮಝಾರ್ ಕಾಣದಂತೆ ಪರದೆ; ವ್ಯಾಪಕ ಆಕ್ರೋಶ

Date:

ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ ಕಾವಡ್ ಯಾತ್ರೆಗೆ ಮಾರ್ಗ ಗುರುತಿಸಲಾಗಿದ್ದು, ಮಾರ್ಗದಲ್ಲಿರುವ ಎರಡು ಮಸೀದಿಗಳು ಮತ್ತು ಮಝಾರ್ ಕಾಣದಂತೆ ಪರದೆಗಳನ್ನು ಅಳವಡಿಸಲಾಗಿದೆ. ಸ್ಥಳೀಯ ಆಡಳಿತ ಮತ್ತು ಸರ್ಕಾರದ ಈ ಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪವಾಗಿದ್ದು, ಬಳಿಕ ಪರದೆಗಳನ್ನು ತೆರವುಗೊಳಿಸಲಾಗಿದೆ.

ಇತ್ತೀಚೆಗೆ, ಉತ್ತರ ಪ್ರದೇಶದ ಮುಜಾಫರ್‌ನಗರದಲ್ಲಿ ಕಾವಡ್ ಯಾತ್ರೆ ವೇಳೆ ಅಂಗಡಿ ಮಳಿಗೆಗಳ ಮಾಲೀಕರು ತಮ್ಮ ಹೆಸರುಳ್ಳ ನಾಮಫಲಕಗಳನ್ನು ಅಂಗಡಿಗಳ ಮುಂದೆ ಪ್ರದರ್ಶಿಸಬೇಕೆಂದು ಪೊಲೀಸರು ಆದೇಶ ಹೊರಡಿಸಿದ್ದರು. ಆದೇಶವು ವಿವಾದ ಸೃಷ್ಟಿಸಿತ್ತು. ಬಳಿಕ, ಪೊಲೀಸರ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿತ್ತು. ಇದೀಗ, ಉತ್ತರಾಖಂಡದ ಹರಿದ್ವಾರದಲ್ಲಿ ಅಂತದ್ದೇ ವಿವಾದವನ್ನು ಆಡಳಿತ ಸೃಷ್ಟಿಸಿದೆ.

ಹರಿದ್ವಾರದ ಜ್ವಾಲಾಪುರ ಪ್ರದೇಶದಲ್ಲಿರುವ ಎರಡು ಮಸೀದಿಗಳು ಮತ್ತು ಮಝಾರ್ ಮುಂದೆ ಬಿದಿರಿನ ಬಂಬುಗಳನ್ನು ಕಟ್ಟಿ, ಬಿಳಿ ಬಣ್ಣದ ಪರದೆಗಳನ್ನು ಹಾಕಲಾಗಿತ್ತು. ಶಾಂತಿ ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಸತ್ಪಾಲ್ ಮಹಾರಾಜ್ ಸಮರ್ಥಿಸಿಕೊಂಡಿದ್ದರು. ಅಲ್ಲದೆ, ಇದೇನು ದೊಡ್ಡ ವಿಷಯವಲ್ಲ. ನಾವು ನಿರ್ಮಾಣ ಹಂತದಲ್ಲಿರುವ ಕಟ್ಟಡಗಳನ್ನು ಕೂಡ ಮುಚ್ಚಿದ್ದೇವೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದಾಗ್ಯೂ, ವಿಪಕ್ಷಗಳು ಹಾಗೂ ಸ್ಥಳೀಯರ ಆಕ್ಷೇಪ, ಆಕ್ರೋಶಕ್ಕೆ ಮಣಿದಿರುವ ಜಿಲ್ಲಾಡಳಿತ ಪರದೆಗಳನ್ನು ತೆಗೆದುಹಾಕಿದೆ. “ನಾನು ನನ್ನ ಜೀವನದಲ್ಲಿ ಇಂತಹದ್ದನ್ನು ನೋಡಿಲ್ಲ. ನಾವು ಮುಸ್ಲಿಮರು ಯಾವಾಗಲೂ ಕಾವಡ್ ಯಾತ್ರೆ ವೇಳೆ ಶಿವಭಕ್ತರನ್ನು ಸ್ವಾಗತಿಸುತ್ತೇವೆ. ಅವರಿಗೆ ವಿವಿಧ ಸ್ಥಳಗಳಲ್ಲಿ ಉಪಹಾರಗಳನ್ನು ಒದಗಿಸುತ್ತೇವೆ. ಹರಿದ್ವಾರದಲ್ಲಿ ಹಿಂದು-ಮುಸ್ಲಿಮರ ನಡುವೆ ಸೌಹಾರ್ದತೆ ಇದೆ. ಆದರೆ, ಸರ್ಕಾರ ವಿಭಜಿಸುವ ಪ್ರಯತ್ನ ಮಾಡುತ್ತಿದೆ” ಎಂದು ಕಾಂಗ್ರೆಸ್ ನಾಯಕ ನಯೀಮ್ ಖುರೇಷಿ ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...