ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮ ಪರಿಶೀಲಿಸಲು ಚುನಾವಣಾ ಆಯೋಗಕ್ಕೆ ಮನವಿ: ಡಿ.ಕೆ ಶಿವಕುಮಾರ್

Date:

ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮದ ಪರಿಶೀಲನೆ ಮಾಡಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಮಹದೇವಪುರ ವಿಧಾನಸಭೆ ಕ್ಷೇತ್ರ ಸೇರಿದಂತೆ ರಾಜ್ಯದ ನಾನಾ ಕಡೆ ಚುನಾವಣೆ ಆಯೋಗದಿಂದಲೇ ಮತ ಅಕ್ರಮ ಕುರಿತು ಕೆಪಿಸಿಸಿ ಅಧ್ಯಕ್ಷರೂ ಆದ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಮುಖಂಡರ ನಿಯೋಗ ಬೆಂಗಳೂರಿನಲ್ಲಿ ರಾಜ್ಯ ಚುನಾವಣೆ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿತು.

ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, “ಅನ್ಯಾಯದ ವಿರುದ್ಧ ಹೋರಾಡಿ, ಮತದಾನದ ಹಕ್ಕು ರಕ್ಷಣೆ ಮಾಡಿಕೊಳ್ಳಲು ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಾವು ಪ್ರತಿಭಟನೆ ನಡೆಸಿದ್ದೆವು. ಕೋರ್ಟ್ ಆದೇಶ ಗಮನದಲ್ಲಿಟ್ಟುಕೊಂಡು, ಚುನಾವಣಾ ಆಯೋಗದ ಕಚೇರಿಗೆ ಮೆರವಣಿಗೆ ಮೂಲಕ ಬರುವುದು ಬೇಡ ಎಂದು ತೀರ್ಮಾನಿಸಿ ಪಕ್ಷದ ವತಿಯಿಂದ ಕೆಲವು ನಾಯಕರಷ್ಟೇ ಆಗಮಿಸಿದೆವು. ಚುನಾವಣೆಯಲ್ಲಿ ಹೇಗೆ ಅನ್ಯಾಯವಾಗಿದೆ ಎಂದು ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಇದು ರಾಜ್ಯದ ಉದ್ದಗಲಕ್ಕೆ ನಡೆದಿರುವ ಅನ್ಯಾಯ. ನಾವು ಕೆಲವು ಕ್ಷೇತ್ರಗಳಲ್ಲಿ ಮಾತ್ರ ಅಧ್ಯಯನ ಮಾಡಿದ್ದೇವೆ. ನಾವು ಐದಾರು ಪ್ರದೇಶಗಳನ್ನು ಪ್ರಸ್ತಾಪಿಸಿ, ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದ್ದೇವೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಮತ ಕಳವು: ಚುನಾವಣಾ ಆಯೋಗವೇ ನೇರ ಬೆಂಬಲ ನೀಡಿತೆ?  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಯೋಗಕ್ಕೆ ನಾವು ಮಹದೇವಪುರ ಹಾಗೂ ಗಾಂಧಿನಗರದ ಮಾದರಿಗಳನ್ನು ಸಲ್ಲಿಸಿಲ್ಲ. ನಿನ್ನೆ ಮಾಧ್ಯಮಗೋಷ್ಠಿಯಲ್ಲಿ ರಾಹುಲ್ ಗಾಂಧಿ ಅವರು ಬಿಡುಗಡೆ ಮಾಡಿದ್ದು ಕೇವಲ ಉದಾಹರಣೆ. ರಾಜ್ಯದ ಕೆಲವು ಭಾಗಗಳಲ್ಲಿ ಈ ರೀತಿ ಅನ್ಯಾಯವಾಗಿದ್ದು, ಎಲ್ಲಾ ಕಡೆ ಪರಿಶೀಲನೆ ಮಾಡಿ ಈ ಅಕ್ರಮವನ್ನು ಪತ್ತೆಹಚ್ಚಬೇಕು. ಈ ಅಕ್ರಮದಲ್ಲಿ ಭಾಗಿಯಾಗಿರುವ ರಿಟರ್ನಿಂಗ್ ಅಧಿಕಾರಿ, ಬಿಎಲ್ಒ ಸೇರಿದಂತೆ ಯಾರೇ ಆಗಿದ್ದರೂ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದೇವೆ” ಎಂದು ಮಾಹಿತಿ ನೀಡಿದರು.

“ಒಂದೇ ಮತದಾರರ ಹೆಸರನ್ನು ಐದು ಕಡೆ ಸೇರಿಸುವುದು, ಮನೆ ವಿಳಾಸ ಇಲ್ಲದೆ ಮತಪಟ್ಟಿಯಲ್ಲಿ ಸೇರಿಸುವುದು, ಖಾಲಿ ನಿವೇಶನಗಳ ವಿಳಾಸದಲ್ಲಿ ನಕಲಿ ಮತ ಸೇರಿಸುವುದು, ಮತಗಳನ್ನು ಪಕ್ಕದ ಬೂತ್‌ಗಳಿಗೆ ವರ್ಗಾಯಿಸಿ ಅಕ್ರಮ ಎಸಗಿರುವುದಕ್ಕೆ ಸಾಕಷ್ಟು ದಾಖಲೆಗಳಿವೆ. ಹೀಗಾಗಿ ನಾವು ಆಯೋಗಕ್ಕೆ 8-10 ಅಂಶಗಳನ್ನು ಹಾಕಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮತದಾರರ ಪಟ್ಟಿಯ ಡಿಜಿಟಲ್ ಮಾದರಿ ಸೇರಿದಂತೆ ನಮಗೆ ಯಾವ ರೀತಿ ಮಾಹಿತಿ ಬೇಕು ಎಂದು ಆಯೋಗಕ್ಕೆ ಕೇಳಿದ್ದೇವೆಯೇ ಹೊರತು, ನಾವು ಸಂಪೂರ್ಣ ವಿವರವನ್ನು ನೀಡಿಲ್ಲ” ಎಂದು ಸ್ಪಷ್ಟನೆ ನೀಡಿದರು.

“ಚುನಾವಣಾ ಆಯೋಗಕ್ಕೆ ಹೊಸದಾಗಿ ಬಂದಿರುವ ಅನ್ಬುಕುಮಾರ್ ಅವರು ಪರಿಶೀಲನೆ ಆರಂಭಿಸಿರುವುದಾಗಿ ನಮಗೆ ತಿಳಿಸಿದರು. ಅವರ ಕ್ರಮ ಸ್ವಾಗತಾರ್ಹ. ಯಾವ ಕ್ಷೇತ್ರಗಳಲ್ಲಿ ಏನೆಲ್ಲಾ ಅನ್ಯಾಯ ಆಗಿದೆ, ಮುಂದೆ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬ ವಿಚಾರ ತಿಳಿಸುತ್ತೇವೆ. ಇದು ಕೇವಲ ಕರ್ನಾಟಕ ಅಥವಾ ಮಹದೇವಪುರಕ್ಕೆ ಸೀಮಿತವಾದ ಹೋರಾಟವಲ್ಲ” ಎಂದು ತಿಳಿಸಿದರು.

“ನಿಮ್ಮದೇ ಸರ್ಕಾರ, ನಿಮ್ಮದೇ ಅಧಿಕಾರಿ ಎಂದು ಕೆಲವರಲ್ಲಿ ಪ್ರಶ್ನೆ ಮೂಡಬಹುದು. ಎಲ್ಲಾ ನಿಯಂತ್ರಣ ಆಯೋಗದ ಕೈಯಲ್ಲಿ ಇರಲಿದೆ. ಕಂಪ್ಯೂಟರ್‌ನಲ್ಲಿ ನನ್ನ ಹೆಸರು ಹಾಕಿದರೆ, ನನ್ನ ಹೆಸರಲ್ಲಿ ಎಷ್ಟು ಕಡೆ ಮತ ಇದೆ ಎಂದು ಗೊತ್ತಾಗುತ್ತದೆ. ಇದನ್ನು ಪರಿಶೀಲಿಸುವಷ್ಟು ಸೌಜನ್ಯ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಇರಬೇಕು. ಹೀಗಾಗಿ ನಾವು ಅವರ ಗಮನ ಸೆಳೆದಿದ್ದೇವೆ. ಇಡೀ ದೇಶದಲ್ಲಿ ಇದು ವ್ಯಾಪಕ ಚರ್ಚೆ ಆಗಬೇಕಿದೆ. ಈ ನಿಟ್ಟಿನಲ್ಲಿ ನಾವು ಪ್ರತಿಭಟನೆ ನಡೆಸಿದ್ದು, ಮುಂದಿನ ದಿನಗಳಲ್ಲಿ, ಇದನ್ನು ಮುಂದುವರಿಸುತ್ತೇವೆ” ಎಂದರು.

ಇದನ್ನು ಓದಿದ್ದೀರಾ? ಮೋದಿ ಮತಗಳ ಕಳವು ಮಾಡಿ ಪ್ರಧಾನಿಯಾಗಿದ್ದಾರೆ, ಸಾಬೀತುಪಡಿಸಬಲ್ಲೆವು: ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅವರಿಂದ ಅಫಿಡವಿಟ್ ಬೇಕು ಎಂಬ ಆಯೋಗದ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, “ಯಾವ ಅಫಿಡವಿಟ್ ಬೇಕು? ನಾನು, ರಾಹುಲ್ ಗಾಂಧಿ ಅವರೇ ಅಫಿಡವಿಟ್. ಚುನಾವಣೆಗೆ ಸ್ಪರ್ಧಿಸುವಾಗ, ಗೆದ್ದ ನಂತರ ನಮ್ಮಿಂದ ಅಫಿಡವಿಟ್ ತೆಗೆದುಕೊಂಡ ಮೇಲೆ ನಮ್ಮ ಮಾತಿಗಿಂತ ಇನ್ನೇನು ಅಫಿಡವಿಟ್ ಬೇಕು? ನಾವು ಸುಳ್ಳು ಹೇಳಿದ್ದರೆ, ಗಲ್ಲಿಗೆ ಹಾಕಿ. ರಾಹುಲ್ ಗಾಂಧಿ ಅವರ ಆರೋಪವನ್ನು ಆಯೋಗದವರು ನಿರಾಕರಿಸಿದ್ದಾರಾ? ಅವರು ಅಫಿಡವಿಟ್ ಕೇಳಿದ ಕಾರಣಕ್ಕೆ ನಾವು ಅವರಿಂದ ಮಾಹಿತಿ ಬಯಸುತ್ತಿದ್ದೇವೆ. ನಾವು ಪಡೆದಿರುವ ಮಾಹಿತಿ ಆರ್‌ಟಿಐ ಮೂಲಕ ಸಂಗ್ರಹಿಸಿರುವ ಮಾಹಿತಿ” ಎಂದು ತಿಳಿಸಿದರು.

ಅಕ್ರಮ ಎಲ್ಲೇ ಆಗಲಿ, ಯಾರೇ ಮಾಡಲಿ, ತಪ್ಪು ತಪ್ಪೇ: ಡಿಸಿಎಂ

ಅರವಿಂದ ಲಿಂಬಾವಳಿ ಅವರು ಚಾಮರಾಜಪೇಟೆ, ವರುಣಾ ಕ್ಷೇತ್ರಗಳಲ್ಲಿ ಡಬಲ್ ಎನ್ ರೋಲ್ ಆಗಿರುವ ಬಗ್ಗೆ ಮಾಹಿತಿ ನೀಡಿರುವ ಬಗ್ಗೆ ಕೇಳಿದಾಗ, “ವರುಣಾ, ಚಾಮರಾಜಪೇಟೆ, ಕನಕಪುರ ಯಾವುದೇ ಕ್ಷೇತ್ರ ಇರಲಿ. ಈ ತಪ್ಪು ಎಲ್ಲಾದರೂ ತಪ್ಪೆ. ಕ್ರಮ ಕೈಗೊಳ್ಳಲಿ. ಸಂವಿಧಾನದ ಆಶಯ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಬೇಕು” ಎಂದು ತಿಳಿಸಿದರು.

ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ನಾವು ಬಿಜೆಪಿ ನಾಯಕರ ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ. ನಮ್ಮ ಹೋರಾಟ ಏನಿದ್ದರೂ ಚುನಾವಣಾ ಆಯೋಗದ ವಿರುದ್ಧ. ಅವರು ಒಂದು ಪಕ್ಷದ ಧ್ವನಿಯಾಗಿ ಕೆಲಸ ಮಾಡಬಾರದು ಎಂಬುದು ನಮ್ಮ ಹೋರಾಟ” ಎಂದು ತಿಳಿಸಿದರು.

ನನ್ನ ಕ್ಷೇತ್ರದ ಎರಡು ವಿಧಾಸಭಾ ಕ್ಷೇತ್ರದಲ್ಲಿ ಈ ರೀತಿ ಆಗಿದೆ ಎಂಬ ಡಿ.ಕೆ. ಸುರೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಈ ಹಿಂದೆಯೇ ಕೇಂದ್ರ ಚುನಾವಣಾ ಆಯೋಗಕ್ಕೆ ಹೋಗಿ ಮಾಹಿತಿ ಸಮೇತ ಪತ್ರ ಬರೆದಿದ್ದರು. ಅದರ ದಾಖಲೆ ನನ್ನ ಬಳಿ ಇದೆ. ಆದರೆ ಆಯೋಗ ಆ ಪತ್ರವನ್ನು ಗಣನೆಗೆ ತೆಗೆದುಕೊಳ್ಳಲಿಲ್ಲ” ಎಂದರು.

ಶಿವಕುಮಾರ್ 1

ಇಂಡಿಯಾ ಟುಡೆ ಫ್ಯಾಕ್ಟ್ ಚೆಕ್‌ಗೆ ಅಭಿನಂದನೆ

ಇಂಡಿಯಾ ಟುಡೆ ಮಾಡಿರುವ ಫ್ಯಾಕ್ಟ್ ಚೆಕ್ ವರದಿಯಲ್ಲಿ ರಾಹುಲ್ ಗಾಂಧಿ ಅವರ ಆರೋಪ ಸಾಬೀತಾಗಿರುವುದರ ಬಗ್ಗೆ ಕೇಳಿದಾಗ, “ನಾನು ಮೊದಲು ಇಂಡಿಯಾ ಟುಡೆ ಮಾಧ್ಯಮಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಮಾಧ್ಯಮಗಳು ಕೂಡ ಪ್ರಜಾಪ್ರಭುತ್ವದ ಭಾಗ. ನಾವೆಲ್ಲರೂ ಸೇರಿ ಇದನ್ನು ಉಳಿಸಬೇಕು. ನಾವೆಲ್ಲರೂ ಪ್ರಜಾಪ್ರಭುತ್ವದ ಆಧಾರ ಸ್ತಂಭಗಳು. ನಿಮ್ಮ ಕಾರ್ಯಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಚುನಾವಣಾ ಆಯೋಗಕ್ಕೆ ಆಕ್ಷೇಪಣೆ ಹಾಕಲು ಈಗ ಕಾಲ ಮೀರಿದೆ ಎಂಬ ಅರಿವು ನಮಗಿದೆ. ಆದರೆ ಹದಗೆಟ್ಟಿರುವ ವ್ಯವಸ್ಥೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರ ಆರೋಪ ನಿರಾಧಾರ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನಾವು ಬಿಜೆಪಿ ನಾಯಕರನ್ನು ಪ್ರಶ್ನೆ ಮಾಡುತ್ತಿಲ್ಲ. ನಾವು ಚುನಾವಣಾ ಆಯೋಗವನ್ನು ಪ್ರಶ್ನಿಸುತ್ತಿದ್ದೇವೆ. ಅವರು ಏನಾದರೂ ಟೀಕೆ ಮಾಡಲಿ. ನಾವು ನಮ್ಮ ಕರ್ತವ್ಯ ನಿಭಾಯಿಸುತ್ತೇವೆ” ಎಂದರು. “ಬಿಜೆಪಿ ನಾಯಕರ ಈ ವರ್ತನೆ ಅವರು ಈ ಅಕ್ರಮದಲ್ಲಿ ಭಾಗಿಯಾಗಿರುವುದನ್ನು ತೋರಿಸುತ್ತಿದೆ” ಎಂದು ತಿರುಗೇಟು ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...