ದಹಿ ವಿವಾದ | ಇನ್ಯಾರದ್ದೋ ಕೂಸಿಗೆ ಕುಲಾವಿ ಹೊಲಿಸುವ ʼಭಂಡ ಬಾಳುʼ ಬಿಜೆಪಿಗೆ ಮಾತ್ರ ಸಾಧ್ಯ: ಕಾಂಗ್ರೆಸ್‌ ಕಿಡಿ

Date:

  • ʼದಹಿʼಯ ಕ್ರೆಡಿಟ್ ಪಡೆಯಲು ಬಿಜೆಪಿ ಹವಣಿಸುತ್ತಿರುವುದು ಪರಮಹಾಸ್ಯʼ
  • ʼಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ಒಮ್ಮೆಯೂ ಪ್ರಶ್ನಿಸದ ಬಿಜೆಪಿʼ

ದಹಿ ವಿವಾದ ಇಟ್ಟಕೊಂಡು ಬಿಜೆಪಿಯನ್ನು ಕುಟುಕಿರುವ ಕಾಂಗ್ರೆಸ್‌, “ಇನ್ಯಾರದ್ದೋ ಕೂಸಿಗೆ ಕುಲಾವಿ ಹೊಲಿಸುವಂತಹ ʼಭಂಡ ಬಾಳುʼ ಬದುಕಲು ಇವರಿಗೆ ಮಾತ್ರ ಸಾಧ್ಯ” ಎಂದಿದೆ.

ಮೊಸರು ಪ್ಯಾಕೆಟ್‌ ಮೇಲೆ ಹಿಂದಿ ಪದ ‘ದಹಿ’ ಎಂದು ನಮೂದಿಸುವಂತೆ ಹೊರಡಿಸಿದ್ದ ನಿರ್ದೇಶನಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌ಎಸ್‌ಎಸ್‌ಎಐ) ತನ್ನ ಆದೇಶವನ್ನು ಗುರುವಾರ ವಾಪಸ್‌ ಪಡೆದಿದೆ.

ಆದೇಶ ವಾಪಸ್‌ ಪಡೆದ ಬೆನ್ನಲ್ಲೇ ಬಿಜೆಪಿ “ನಮ್ಮ ಮನವಿಗೆ ಸ್ಪಂದಿಸಿ ನೀಡಿದ್ದ ಆದೇಶವನ್ನು ಹಿಂಪಡೆದಿದ್ದಕ್ಕೆ ಎಫ್‌ಎಸ್‌ಎಸ್‌ಎಐಗೆ ಧನ್ಯವಾದಗಳು” ಎಂದು ತಿಳಿಸಿ ಟ್ವೀಟ್‌ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ದಹಿ’ ವಿವಾದ | ಕರ್ನಾಟಕ, ತಮಿಳುನಾಡು ಆಕ್ರೋಶಕ್ಕೆ ಮಣಿದ ಎಫ್‌ಎಸ್‌ಎಸ್‌ಎಐ; ಪರಿಷ್ಕರಿಸಿ ಆದೇಶ

ಬಿಜೆಪಿಯ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, “ʼದಹಿʼ ಹೇರಿಕೆಯ ವಿರುದ್ಧ ಯಾವೊಬ್ಬ ಬಿಜೆಪಿಗರೂ ಬಾಯಿ ಬಿಡಲಿಲ್ಲ. ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ಒಮ್ಮೆಯೂ ಪ್ರಶ್ನಿಸದೆ, ಗುಲಾಮರಂತೆ ಸಮರ್ಥಿಸುವ ಬಿಜೆಪಿ ಈಗ ʼದಹಿʼಯ ಕ್ರೆಡಿಟ್ ಪಡೆಯಲು ಹವಣಿಸುತ್ತಿರುವುದು ಪರಮಹಾಸ್ಯ” ಎಂದು ಕಿಚಾಯಿಸಿದೆ.

“ಸರ್ಕಾರ ಕಳೆದ ಐದಾರು ತಿಂಗಳಿಂದ ಉತ್ಪಾದಕರಿಗೆ ಸಹಾಯಧನ ನೀಡಿಲ್ಲ. ಹಾಲು ಉತ್ಪಾದನೆ ಗಣನೀಯ ಕುಸಿತ ಕಂಡಿದೆ. ಮೊಸರಿಗೆ ‘ದಹಿ’ ಎಂದು ನಾಮಕರಣ ಮಾಡಲು ಇರುವ ಆಸಕ್ತಿ ಹೈನುಗಾರರ ಕಷ್ಟಕ್ಕೆ ಸ್ಪಂದಿಸುವಲ್ಲಿ ಇಲ್ಲ. ರೈತರಿಗೆ ಸಹಾಯಧನ ನೀಡಿ ಕ್ರೆಡಿಟ್ ಪಡೆಯುವ ಬದಲು ‘ದಹಿ’ಗೆ ಕ್ರೆಡಿಟ್ ಪಡೆಯುವುದು ನಾಚಿಕೆಗೇಡು ಅಲ್ಲವೇ?” ಎಂದು ಕಿಡಿಕಾರಿದೆ.

ಮೊಸರು ಮತ್ತು ಮುಂತಾದ ಹಾಲಿನ ಉತ್ಪನ್ನಗಳ ಮೇಲೆ ಕಡ್ಡಾಯವಾಗಿ ಹಿಂದಿ ಹೆಸರು ‘ದಹಿ’ ಎಂದು ಮುದ್ರಿಸಬೇಕೆಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಆದೇಶಿಸಿತ್ತು. ಈ ಬಗ್ಗೆ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಆಕ್ರೋಶದ ಕಿಚ್ಚು ಹೆಚ್ಚಾಗಿತ್ತು. ಈ ಹಿನ್ನಲೆಯಲ್ಲಿ ಆದೇಶ ಪರಿಷ್ಕರಿಸಿ ಸುತ್ತೋಲೆ ಹೊರಡಿಸಿದ ಎಫ್‌ಎಸ್‌ಎಸ್‌ಎಐ, ‘ಕರ್ಡ್’ ಎಂಬ ಇಂಗ್ಲಿಷ್ ಪದನಾಮದೊಂದಿಗೆ ಆವರಣದಲ್ಲಿ ಪ್ರಚಲಿತ ಪ್ರಾದೇಶಿಕ ಸಾಮಾನ್ಯ ಹೆಸರು ಬಳಸಬಹುದು” ಎಂದು ತಿಳಿಸಿದೆ. ಜೆಡಿಎಸ್‌ ಕೂಡ ಈ ವಿಚಾರ ವಿರೋಧಿಸಿ ಆಕ್ರೋಶ ಹೊರಹಾಕಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...