ದಲಿತ ಸಮುದಾಯದವರು ಸಿಎಂ ಆಗಲು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯ: ದಿನೇಶ್‌ ಗುಂಡೂರಾವ್‌

Date:

ದಲಿತ ಸಮುದಾಯದವರು ಸಿಎಂ ಆಗಲು ಕಾಂಗ್ರೆಸ್‌ನಲ್ಲಿ ಮಾತ್ರ ಸಾಧ್ಯ. ದಲಿತರು ಸಿಎಂ ಆದರೆ ಎಲ್ಲರೂ ಸಂತೋಷಡುತ್ತಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಈ ಹಿಂದೆಯೇ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗುತ್ತಿದ್ದರು.‌ ಆದರೆ ಆಗ ನಮಗೆ ಹೆಚ್ಚು ಸ್ಥಾನಗಳು ಸಿಗಲಿಲ್ಲ. ಹಾಗೊಂದು ವೇಳೆ ಸ್ಥಾನಗಳು ಬಂದಿರುತ್ತಿದ್ದರೆ ಹಿಂದೆಯೇ ದಲಿತ ಸಿಎಂ ಆಗುತ್ತಿದ್ದರು. ಕಾಂಗ್ರೆಸ್ ನಿಂದ ಮಾತ್ರ ದಲಿತ ಸಿಎಂ ಆಗಲು ಅವಕಾಶ ಇದೆ” ಎಂದರು.

“ಹೈಕಮಾಂಡ್ ಸೂಚಿಸಿದರೆ ಸಚಿವರು, ಶಾಸಕರು ಯಾರೇ ಆದರೂ ಸ್ಪರ್ಧಿಸಲು ಸಿದ್ಧವಾಗಿ ಇರಬೇಕಾಗುತ್ತದೆ. ನಮ್ಮ ತಯಾರಿ ನಾವು ಮಾಡುತ್ತಿದ್ದೇವೆ.‌ ಇನ್ನೂ ಎರಡು, ಮೂರು ಹಂತಗಳಲ್ಲಿ ಪಟ್ಟಿ ಪ್ರಕಟವಾಗಲಿದೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳು ಬರಬೇಕು ಎಂಬ ಗುರಿ ಇದೆ. ಜನರ ಜೊತೆ ಯಾರು ಒಳ್ಳೆಯ ಹೆಸರು ತೆಗೆದುಕೊಂಡಿದ್ದಾರೋ ಅವರೇ ಸ್ಪರ್ಧಿಸಬೇಕಾಗುತ್ತದೆ. ವರಿಷ್ಠರು ಯಾವುದೇ ತೀರ್ಮಾನ ತೆಗೆದುಕೊಂಡರೂ ನಾವು ಸಿದ್ದ ಆಗಿರಬೇಕಾಗುತ್ತದೆ” ಎಂದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಡಾ. ಮಂಜುನಾಥ್ ಇಲ್ಲವೇ ಯಾರನ್ನೇ ಕಣಕ್ಕಿಳಿಸಿದರೂ ನಮಗೆ (ಕಾಂಗ್ರೆಸ್) ಭಯ ಇಲ್ಲ. ರಾಜಕೀಯ ಎಂದು ಬಂದಾಗ ಹೋರಾಟ ಇದ್ದಿದ್ದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ʼಮಹಿಳಾ ದಿನʼ ಅರ್ಥಪೂರ್ಣವಾಗೋದು ಆಕೆಗೆ ಘನತೆಯಿಂದ ಬದುಕಲು ಬಿಟ್ಟಾಗ ಮಾತ್ರ

ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯಾರೇ ಸ್ಪರ್ಧಿಸಲಿ. ನಮಗೆ ಯಾರನ್ನು ನಿಲ್ಲಿಸಿದರೂ ಭಯ ಇಲ್ಲ.‌ ಡಾ. ಮಂಜುನಾಥ್ ಅವರ ಬಗ್ಗೆ ಗೌರವ ಇದೆ.‌ ವೃತ್ತಿಯಲ್ಲಿ ನಮ್ಮ ಸರ್ಕಾರ ಕೂಡ ಅವರಿಗೆ ಸಹಕಾರ ನೀಡಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ಮಂಜುನಾಥ್ ಅವರನ್ನು ವೃತ್ತಿಯಲ್ಲಿ ಮುಂದುವರಿಸಿದ್ದರು. ಈಗಲೂ ಮತ್ತೆ ನಮ್ಮ ಸರ್ಕಾರ ಬಂದ ಮೇಲೆಯೂ ಅವರನ್ನು ಮುಂದುವರೆಸಲಾಗಿತ್ತು. ಅವರಿಗೆ ಎಲ್ಲ ಗೌರವವನ್ನೂ ಕೊಟ್ಟಿದ್ದೇವೆ. ಆದರೆ, ರಾಜಕೀಯ ಎಂದು ಬಂದಾಗ ನೋಡೋಣ” ಎಂದರು.

ಎಚ್‌. ಡಿ. ದೇವೇಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ದಿನೇಶ್‌, “ಕಲುಷಿತ ವ್ಯವಸ್ಥೆಯಲ್ಲಿ ಮಂಜುನಾಥ್ ರಾಜಕೀಯಕ್ಕೆ ಬರುವುದು ಬೇಡ ಎಂದು ದೇವೇಗೌಡರು ಹೇಳಿದ್ದಾರೆ. ಹಾಗಾದರೆ ಕುಮಾರಸ್ವಾಮಿ ಕಲುಷಿತನಾ? ರೇವಣ್ಣ ಕಲುಷಿತನಾ? ಮಂಜುನಾಥ್ ಅವರು ವೃತ್ತಿಯಲ್ಲಿ ಹೆಸರು ಮಾಡಿದ್ದಾರೆ. ರಾಜಕೀಯವಾಗಿ ಹೆಸರು ಕಳೆದುಕೊಳ್ಳೋದು ಬೇಡ ಎಂಬ ಉದ್ದೇಶದಿಂದ ಹೇಳಿರಬಹುದು” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...