ದರ್ಶನ್‌ ಪ್ರಕರಣ | ಪಕ್ಷದ ಆಧಾರದ ಮೇಲಲ್ಲ, ತಪ್ಪಿನ ಆಧಾರದ ಮೇಲೆ ತನಿಖೆ: ಗೃಹ ಸಚಿವ ಪರಮೇಶ್ವರ್

Date:

“ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ‌ ಪ್ರಕರಣದ ತನಿಖೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ. ಪ್ರಕರಣದ ತಪ್ಪಿತಸ್ಥರು ಯಾವುದೇ ಪಕ್ಷದಲ್ಲಿದ್ದರು ತಪ್ಪಿತಸ್ಥರೇ ಆಗಿರುತ್ತಾರೆ” ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆರೋಪಿಗಳು ಬೇರೆ ಪಕ್ಷದಲ್ಲಿದ್ದಾರೆ ಎಂಬುದನ್ನು ಮುಖ್ಯವಾಗಿ ತೆಗೆದುಕೊಳ್ಳುವುದಿಲ್ಲ. ಏನು ತಪ್ಪು ಮಾಡಿದ್ದಾರೆ ಎಂಬ ಆಧಾರದ ಮೇಲೆ ತನಿಖೆ, ವಿಚಾರಣೆ ನಡೆಯುತ್ತದೆ” ಎಂದು ತಿಳಿಸಿದರು.

“ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ನನ್ನು ವಿಚಾರಣೆ ನಡೆಸಲು ಇನ್ನೊಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ‌ ಪೊಲೀಸರು ಕೇಳಿದ್ದರು. ಆದರೆ ಎರಡು ದಿನ ಕಸ್ಟಡಿಗೆ ನೀಡಿದೆ. ಎರಡು ದಿನದ ಬಳಿಕ ವಿಚಾರಣೆ ಮುಗಿದರೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಾರೆ” ಎಂದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೇಣುಕಸ್ವಾಮಿ ಪ್ರಕರಣದ ಕೊಲೆ ಆರೋಪ ಹೊತ್ತಿರುವ ನಟ ದರ್ಶನ್ ವಿಚಾರದಲ್ಲಿ ಯಾರೂ ನನ್ನ ಬಳಿ ಬರಬೇಡಿ ಎಂದು ಮುಖ್ಯಮಂತ್ರಿ ಸೂಚಿಸಿದ್ದಾರೆ‌ ಎಂಬುದರ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನಮ್ಮ ಅಧಿಕಾರಿಗಳು ಮಾಹಿತಿ ನೀಡಲು ಹೋಗುವುದನ್ನು ಹೊರತುಪಡಿಸಿ, ಯಾರೂ ಹೋಗಲ್ಲ. ಅದರ ಅವಶ್ಯಕತೆ ಯಾರಿಗೂ ಇಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಯಾರೂ ನನ್ನ ಬಳಿ ಬಂದಿಲ್ಲ‌” ಎಂದು ಸ್ಪಷ್ಟಪಡಿಸಿದರು.

ಜೈಲಿನಲ್ಲಿ ದುಡ್ಡು ಎಲ್ಲ ಸೌಲಭ್ಯಗಳು ಸಿಗುತ್ತವೆ. ನಟ ದರ್ಶನ ಜೈಲಿಗೆ ಬೇರೆ ರೀತಿಯಲ್ಲಿ ಟ್ರೀಟ್ ಮಾಡಲಾಗುತ್ತದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, “ಕೆಲವು ಸಂದರ್ಭದಲ್ಲಿ ಸತ್ಯ ಇರಬಹುದು. ಜೈಲುಗಳ ಮೇಲೆ ದಾಳಿ ನಡೆದಾಗ ಫೋನ್ ಸೇರಿದಂತೆ ಬೇರೆ ಬೇರೆ ವಸ್ತುಗಳು ಸಿಕ್ಕಿವೆ. ಅಧಿಕಾರಿಗಳ ಕಣ್ತಪ್ಪಿಸಿ ನಡೆದಿರುತ್ತದೆ. ಜೈಲ್ ಅಧಿಕಾರಿಗಳು ನಿಗಾವಹಿಸುತ್ತಾರೆ. ಇಂತಹ ಘಟನೆಗಳಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿರುತ್ತದೆ‌” ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರ ವಿರುದ್ಧ ಎಕ್ಸ್‌ (ಟ್ವೀಟರ್) ಖಾತೆಯಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ವ್ಯಕ್ತಿಗೆ ನೋಟಿಸ್ ನೀಡಲು ತೆರಳಿದ್ದ ಹೈಗ್ರೌಂಡ್ ಠಾಣೆ ಪೊಲೀಸರಿಗೆ ಅಡ್ಡಿಪಡಿಸಿದ ವಿಚಾರದ ಕುರಿತು ಪ್ರತಿಕ್ರಿಯಿಸಿ, “ಉತ್ತರ ಪ್ರದೇಶದ ನೋಯ್ಡಾಗೆ ಮಫ್ತಿಯಲ್ಲಿ ಹೋಗಿದ್ದರು. ಅಲ್ಲಿನ ಪೊಲೀಸರಿಗೆ ಮುಂಚಿತವಾಗಿ ತಿಳಿಸಬೇಕಿತ್ತು. ಅಲ್ಲಿಗೆ ಹೋದ ನಂತರ ತಿಳಿಸಿದ್ದಾರೆ. ಅಲ್ಲಿನ ಪೊಲೀಸರ ಸಹಾಯ ಪಡೆದು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗದೇ ಇದ್ದರೆ, ವಾರಂಟ್ ಜಾರಿ ಮಾಡಿ ಬಂಧಿಸುತ್ತಾರೆ‌” ಎಂದರು.

ಕರ್ನಾಟಕ ಸೇರಿದಂತೆ ಎಂಟು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನದ ಕುರಿತ ವರದಿಗೆ ಸಮಿತಿ ರಚನೆಯ ಕುರಿತು ಮಾತನಾಡಿ, “ಕರ್ನಾಟಕದ ಬಗ್ಗೆ ಎಐಸಿಸಿ ಮಟ್ಟದಲ್ಲಿ ಬೇರೆಯೇ ನಿರೀಕ್ಷೆ ಇತ್ತು. 15ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಪಕ್ಷದ ಅಧ್ಯಕ್ಷರು ಹಾಗೂ ಸಿಎಂ ಅವರು ಹೈಕಮಾಂಡ್‌ಗೆ ತಿಳಿಸಿದ್ದರು. ಅದು ಆಗಲಿಲ್ಲ. ಯಾವ ಕಾರಣಕ್ಕಾಗಿ ಹೀಗಾಗಿದೆ. ನಮ್ಮ ಸರ್ಕಾರ ಇದ್ದಾಗಿಯೂ ಇಷ್ಟು ಸ್ಥಾನ ಕಡಿಮೆಯಾಗಿದೆಯಲ್ಲ ಎಂದು ನಿಖರವಾದ ಕಾರಣವನ್ನು ಕಂಡುಕೊಳ್ಳಬೇಕಿದೆ. ಫ್ಯಾಕ್ಟ್ ಫೈಂಡಿಂಗ್ ಆಧಾರದ ಮೇಲೆ ಕ್ರಮದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು.‌

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...