ದಾವಣಗೆರೆ | ಸುಪ್ರೀಂ ನ್ಯಾಯಮೂರ್ತಿಗಳ ಮೇಲಿನ ಹಲ್ಲೆ ಯತ್ನ: ಯುವ ಕಾಂಗ್ರೆಸ್ ಘಟಕ ಖಂಡನೆ

Date:

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನಿಸಿ ಅವಮಾನಿಸಿದ ರಾಕೇಶ್ ಕಿಶೋರ್ನನ್ನು ಬಂಧಿಸಿ ಕಠಿಣ ಶಿಕ್ಷೆಗೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಮುಖಂಡರು, ಕಾರ್ಯಕರ್ತರು ನಗರದ ಜಯದೇವ ವೃತ್ತದಿಂದ ಡಾ. ಬಿಆರ್ ಅಂಬೇಡ್ಕರ್ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.‌

WhatsApp Image 2025 10 14 at 5.37.19 PM 1

ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಮನುವಾದಿಗಳ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ಕಾಂಗ್ರೆಸ್ ಮುಖಂಡ ವಕೀಲ ಅನೀಸ್ ಪಾಷಾ ಮಾತನಾಡಿ “ಭಾರತ ಸರ್ವ ಜನಾಂಗದ ಶಾಂತಿಯ ತೋಟ. ಅಂಬೇಡ್ಕರ್ ಈ ದೇಶದ ಎಲ್ಲರಿಗೂ ಸಮಾನ ಹಕ್ಕು ನೀಡಿದ್ದಾರೆ.‌ ಇದನ್ನು ಹಾಳು ಮಾಡಿ ಕೋಮುದ್ವೇಷ ಹೊರಡಿಸಲು ಮತೀಯ ಶಕ್ತಿಗಳು ಈ ರೀತಿಯ ದುರ್ವರ್ತನೆ ತೋರಿಸುತ್ತಿವೆ.‌ ಮುಖ್ಯ ನ್ಯಾಯಾಧೀಶ ಬಿ ಆರ್ ಗವಾಯಿಗಳು ಅಂಬೇಡ್ಕರ್ ವಾದಿಗಳು. ಅವರು ನ್ಯಾಯಪರ ತೀರ್ಪು ನೀಡುತ್ತಿರುವುದು ಕೋಮುವಾದಿ, ಮನುವಾದಿಗಳು ನುಂಗಲಾರದ ತುತ್ತಾಗಿದೆ.‌ ಅವರ ಲೆಕ್ಕಾಚಾರದಂತೆ ಮುಖ್ಯ ನ್ಯಾಯಾಧೀಶರು ಇಲ್ಲದೆ, ನ್ಯಾಯ ಮತ್ತು ಸಂವಿಧಾನದ ಆಶಯದಂತೆ ನಡೆದುಕೊಳ್ಳುತ್ತಿರುವುದೇ ಈ ಹಲ್ಲೆ ಯತ್ನಕ್ಕೆ ಮುಂದಾಗಿದೆ” ಎಂದು ಅಭಿಪ್ರಾಯಪಟ್ಟರು.

1002890697

“ಮನುವಾದಿಗಳು ಅಂಬೇಡ್ಕರರ ವಿರೋಧಿಗಳು. ದೇಶವಿರೋಧಿಗಳು.‌ ಅವರ ಮೇಲೆ ಶೂ ಎಸೆತ ಯತ್ನ ದೇಶಕ್ಕೆ ಮಾಡಿದ ಅವಮಾನವಾಗಿದ್ದು. ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡ ಹಲಗೇರಿ ಮಂಜಪ್ಪ ಮಾತನಾಡಿ, “ಮನುವಾದಿಗಳು ಅಂಬೇಡ್ಕರ್ ವಿರೋಧಿಗಳು. ಹಾಗಾಗಿ ಅಂಬೇಡ್ಕರ್ ವಾದಿಗಳ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಇದು ಕೇವಲ ಮುಖ್ಯ ನ್ಯಾಯಾಧೀಶರ ಮೇಲಿನ ಹಲ್ಲೆ, ಅವಮಾನ ಮಾತ್ರವಲ್ಲ, ಅಂಬೇಡ್ಕರ್ ಮತ್ತು ಸಂವಿಧಾನ ಮೇಲೆ ನಡೆದ ಕೃತ್ಯ. 3% ಪುರೋಹಿತಶಾಹಿ ಈ ದೇಶ ಆಳುತ್ತಿದೆ.‌ ಈ ದೇಶದ ಬಹುಸಂಖ್ಯಾತರು ಪಂಜಿನ ಮೆರವಣಿಗೆ ಹೋರಾಟ ಮಾಡುತ್ತಿರುವುದು ದುರಂತ” ಎಂದು ಅಭಿಪ್ರಾಯಪಟ್ಟರು.

IMG 20251013 WA0169
ಯುವ ಕಾಂಗ್ರೆಸ್ ಘಟಕ ಪ್ರತಿಭಟನೆ

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಿರಾಶ್ರಿತರಿಗೆ ಮನೆ ನಿರ್ಮಾಣಕ್ಕೆ ಸೌಕರ್ಯ ಒದಗಿಸಿ: ಪ್ರಗತಿಪರ ಸಂಘಟನೆಗಳ ಒತ್ತಾಯ

ಪಂಜಿನ ಮೆರವಣಿಗೆ ಮತ್ತು ಪ್ರತಿಭಟನೆಯಲ್ಲಿ ಆಪ್ ಮುಖಂಡ ಆದಿಲ್ ಖಾನ್, ಸರ್ಕಾರಿ ಶಾಲೆ ಉಳಿಸಿ ಹೋರಾಟ ಸಮಿತಿ ಮುಖಂಡ ಲಿಂಗರಾಜು ಗಾಂಧಿನಗರ, ಕಾಂಗ್ರೆಸ್ ಯುವ ಘಟಕದ ಮುಖಂಡ ವರುಣ್ ಬೆನ್ನಳ್ಳಿ, ವಕೀಲ ರಾಕೇಶ್‌, ಮಂಜುನಾಥ್‌, ಅರುಣ್‌, ಹಂಚಿನ ಮನೆ ದಯಾನಂದ, ಮಂಜುನಾಥ್ ಆರ್ ಶಾಂತಿನಗರ, ಶಿವಶಂಕರ್ ಎಸ್ಎಂ, ಸೇರಿದಂತೆ ಕಾರ್ಯಕರ್ತರು ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...