ದಾವಣಗೆರೆ | ಕರವೇಯಿಂದ ಮಧ್ಯಮ ವರ್ಗದ ಧ್ವನಿ ಶಾಮನೂರು ಶಿವಶಂಕರಪ್ಪಗೆ ಶ್ರದ್ಧಾಂಜಲಿ.

Date:

ದಾವಣಗೆರೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ)ಯ ಜಿಲ್ಲಾ ಘಟಕದಿಂದ ಭಾನುವಾರವಷ್ಟೇ ಅಗಲಿದ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಚಿರಶಾಂತಿ ಸಿಗಲೆಂದು ದಾವಣಗೆರೆ ಜಿಲ್ಲಾ ಘಟಕದಿಂದ ಡಾ. ಮೋದಿ ವೃತ್ತದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಭಾವಚಿತ್ರಕ್ಕೆ ಪೂಜಿಸಿ ಪುಷ್ಪ ನಮನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ವೇಳೆ “ಶಾಮನೂರು ಶಿವಶಂಕರಪ್ಪ ಮಧ್ಯಮ ವರ್ಗದ ಧ್ವನಿ” ಎಂದು ಕೆಲವೇ ಅಧ್ಯಕ್ಷ ರಾಮೇಗೌಡ ಬಣ್ಣಿಸಿದರು.

ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನಮನ ಸಲ್ಲಿಸಿ ಕರವೇ ಜಿಲ್ಲಾ ಅಧ್ಯಕ್ಷರಾದ ರಾಮೇಗೌಡ ಮಾತನಾಡಿ “ಮಧ್ಯಮ ವರ್ಗದ ಧ್ವನಿಯಾಗಿ ನಿಂತವರು ಶಾಮನೂರು ಶಿವಶಂಕರಪ್ಪನವರು. ದಾವಣಗೆರೆಗೆ ಶೈಕ್ಷಣಿಕವಾಗಿ ಜ್ಞಾನಕಾಶಿ ಎಂಬ ಬಿರುದು ಬರಲು ಶಿವಶಂಕರಪ್ಪ ಅವರೇ ಕಾರಣ. ಇಂಥಹ ಮಹಾನ್ ವ್ಯಕ್ತಿಯನ್ನು ಕಳೆದುಕೊಂಡಿರುವುದು ದಾವಣಗೆರೆಗೆ ತುಂಬಲಾಗದ ನಷ್ಟ. ಪಾದಚಾರಿ ವ್ಯಾಪಾರಿಗಳಿಗೆ ವ್ಯವಸ್ಥಿತವಾಗಿ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಶಾಮನೂರು ಶಿವಶಂಕರಪ್ಪ ಅವರಿಗೆ ವಿನಂತಿಸಿದಾಗ ಕಳೆದ 20 ವರ್ಷಗಳಿಂದ ಒದಗಿಸಿ ಕೊಡದಿದ್ದನ್ನು, ಶಾಮನೂರು ಶಿವಶಂಕರಪ್ಪ ಅವರು ಎಸ್ ಎಸ್ ಮಲ್ಲಿಕಾರ್ಜುನ್ ಅವರಿಗೆ ತಿಳಿಸಿ ಅವರ ಪರಿಶ್ರಮದಿಂದ ಪುಟ್ಬಾತ್ ವ್ಯಾಪಾರಿಗಳಿಗೆ ಸರ್ಕಾರದ ವತಿಯಿಂದ ಆಹಾರ ಘಟಕವನ್ನು ನಿರ್ಮಿಸಿ ಕೊಡುವಲ್ಲಿ ಶಿವಶಂಕರಪ್ಪ ಅವರ ಪಾತ್ರ ಬಹಳ ಪ್ರಮುಖವಾಗಿತ್ತು” ಎಂದು ಸ್ಮರಿಸಿದರು.

1003308897

“ಎಷ್ಟೋ ಕಡು ಬಡವ ವಿದ್ಯಾರ್ಥಿಗಳಿಗೆ ಮತ್ತು ಪತ್ರಕರ್ತರ ಮಕ್ಕಳಿಗೆ ಸ್ಕಾಲರ್ಶಿಪ್ ಕೊಡುವ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವಂತ ಕೆಲಸ ಮತ್ತು ದಾವಣಗೆರೆ, ರಾಜ್ಯ, ಹೊರ ರಾಜ್ಯದ ದೇವಸ್ಥಾನಗಳಿಗೆ ಅಭಿವೃದ್ಧಿಗೆ ಹಣ ನೀಡಿರುವುದರ ಮೂಲಕ ಶಿವಶಂಕರಪ್ಪ ಅವರು ಕೊಡುಗೆ ದಾನಿಯಾಗಿದ್ದರು. ಜನತೆಗೆ ಕಣ್ಣ ಮುಂದೆ ಕಾಣುವಂತೆ ಶಿವಶಂಕರಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ಇಂಥ ಮಹಾನ್ ವ್ಯಕ್ತಿ ನಗರದಲ್ಲಿ ಮತ್ತೊಬ್ಬ ಹುಟ್ಟುವುದು ಸಾದ್ಯವಿಲ್ಲ” ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆಯಲ್ಲಿ ಕಾಂಗ್ರೆಸ್ ಎಂದರೆ ಶಾಮನೂರು ಎಂಬಂತಿದ್ದ ಶಾಮನೂರು ಶಿವಶಂಕರಪ್ಪ ನಿಧನ

ಇಂದು ಸಂಜೆ ಡಾ. ಮೋದಿ ವೃತ್ತದಲ್ಲಿರುವ ಕರವೇ ಫುಡ್ ಕೋರ್ಟ್ ನ ಎಲ್ಲಾ ಹೋಟೆಲುಗಳನ್ನು ಬಂದ್ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಗುವುದೆಂದು ತಿಳಿಸಿದರು. ಈ ಸಂದರ್ಭದಲ್ಲಿ ಮಹಿಳಾ ಘಟಕ ಅಧ್ಯಕ್ಷೆ ಶ್ರೀಮತಿ ಬಸಮ್ಮ, ಮಂಜುಳಾ ಗಣೇಶ್, ಸಲ್ಮಾಭಾನು, ಸಾಕಮ್ಮ ಬಾಯಿ, ಮಂಜುಳಮ್ಮ, ಜಿಲ್ಲಾ ಉಪಾಧ್ಯಕ್ಷರಾದ ಮಂಜುಶ್ರೀ ಗೌಡ, ಗಿರೀಶ್ ಕುಮಾರ್, ಗೋಪಾಲ್ ದೇವರ ಮನೆ, ಓ ಮಹೇಶ್ವರಪ್ಪ, ಸುರೇಶ್, ಚಂದ್ರು, ತುಳಸಿರಾಮ್, ಬಸವರಾಜ್, ಸಂಜು, ನಾಗರಾಜ್, ಭಾಷಾ, ದಾದಾಪೀರ್, ಅಕ್ಷಯ್, ಕಾರ್ತಿ, ರಮೇಶ್, ಸಾಗರ್, ನಾಗರಾಜ್, ಕರಿಬಸಪ್ಪ , ಸಂಜು, ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...