ದಾವಣಗೆರೆ | ಜಿಲ್ಲಾ ಯುವ ಕಾಂಗ್ರೆಸ್ ಪದಗ್ರಹಣ ಸಮಾರಂಭದಲ್ಲಿ ನೂಕಾಟ ವಾಗ್ವಾದ; ಬಣ ರಾಜಕೀಯ ಜೋರು

Date:

ದಾವಣಗೆರೆಯಲ್ಲಿ ನಡೆದ ಯುವ ಕಾಂಗ್ರೆಸ್ ಪದಗ್ರಹಣ ಸಮಾರಂಭ ಬಣ ರಾಜಕೀಯಕ್ಕೆ ಕಾರಣವಾಯಿತು.
ಅಂತಿಮ ಹಂತದಲ್ಲಿ ಎರಡು ಬಣಗಳ ವಾಗ್ಯುದ್ದ ಮತ್ತು ತಳ್ಳಾಟಕ್ಕೆ ಕಾರ್ಯಕ್ರಮ ಸಾಕ್ಷಿಯಾಯಿತು. ನಿರ್ಗಮಿತ ಅಧ್ಯಕ್ಷ, ಪದಾಧಿಕಾರಿಗಳು ಮತ್ತು ನೂತನ ಅಧ್ಯಕ್ಷರ ಬಣಗಳ ನಡುವೆ ಅಧಿಕಾರ ಹಸ್ತಾಂತರ ಕಾರ್ಯಕ್ರಮಕ್ಕೆ ಹಿಂದಿನ ಪದಾಧಿಕಾರಿಗಳು, ಅಧ್ಯಕ್ಷರಿಗೆ ಆಹ್ವಾನ ನೀಡದಕ್ಕೆ ನೂಕಾಟ, ವಾಗ್ಯುದ್ದ ನಡೆಯಿತು.

1002222461

ದಾವಣಗೆರೆಯಲ್ಲಿ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಾಪೂಜಿ ಎಂಬಿಎ ಕಾಲೇಜಿನ ಸಭಾಂಗಣದಲ್ಲಿ ಇಂದು ಜರುಗಿತು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಬಣ ರಾಜಕೀಯ ಮತ್ತು ಪದಾಧಿಕಾರಿಗಳ ಮಧ್ಯದಲ್ಲಿನ ಭಿನ್ನಾಭಿಪ್ರಾಯಗಳ ಬಗ್ಗೆ ಮತ್ತು ಭಿನ್ನಾಭಿಪ್ರಾಯಗಳನ್ನು ಮರೆತು ಒಟ್ಟಿಗೆ ಮುಂದಕ್ಕೆ ಸಾಗುವ ಬಗ್ಗೆ ತಿಳಿ ಹೇಳಿ ಸಲಹೆ ನೀಡಿದರೂ, ಅಂತಿಮವಾಗಿ ಮತ್ತೆ ಬಣ ರಾಜಕೀಯ ಮೇಳೈಸಿದೆ.

1002222443

ಇತ್ತೀಚಿಗೆ ತಾನೇ ಯುವ ಕಾಂಗ್ರೆಸ್ ಚುನಾವಣೆ ನಡೆದು ಯುವ ಕಾಂಗ್ರೆಸ್ ನಲ್ಲಿ ನೂತನ ಅಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಬ್ಲಾಕ್ ಪದಾಧಿಕಾರಿಗಳ ಆಯ್ಕೆಯಾಗಿತ್ತು. ಅವರುಗಳ ಪ್ರದಗ್ರಹಣ ಸಮಾರಂಭ ಇಂದು ನಿಗದಿಯಾಗಿತ್ತು. ನಿಗದಿಯಂತೆ ನಡೆದ ಸಮಾರಂಭದಲ್ಲಿ ‘ಅಧ್ಯಕ್ಷರು ಮತ್ತು ಅವರ ಪದಗ್ರಹಣ ಸಮಾರಂಭಕ್ಕೆ ನಿರ್ಗಮಿತ ಅಧ್ಯಕ್ಷರಿಂದ ಅಧಿಕಾರ ಹಸ್ತಾಂತರವಾಗಬೇಕು. ಆದರೆ ಅವರನ್ನೇ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ’ ಎಂದು ತಕರಾರು ಕೇಳಿ ಬಂದಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002222445

ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷರಿಗೆ ಮಾತನಾಡಲು ಅವಕಾಶ ನೀಡಬೇಕು. ನಮ್ಮ ಅಹವಾಲುಗಳನ್ನು ಕೇಳಿಸಿಕೊಳ್ಳಬೇಕು. ಇದಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷರು, ರಾಜ್ಯಮಟ್ಟದ ಕಾರ್ಯದರ್ಶಿಗಳು, ಪದಾಧಿಕಾರಿಗಳು ಭಿನ್ನಾಭಿಪ್ರಾಯವನ್ನು ಸರಿಪಡಿಸಬೇಕು ಎಂದು ಪದೇ ಪದೇ ಮನವಿ ಮಾಡಿ ಕಾರ್ಯಕ್ರಮದಲ್ಲಿ ತಕರಾರು ತೆಗೆದ ಪ್ರಸಂಗ ನಡೆಯಿತು.

1002222447

ಅಂತಿಮವಾಗಿ ಅಧ್ಯಕ್ಷರು ಮತ್ತು ರಾಜ್ಯ ಉಸ್ತುವಾರಿಗಳು ಕಾರ್ಯಕ್ರಮ ಮುಗಿದ ನಂತರ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸುವುದಕ್ಕಾಗಿ ತಿಳಿಸಿದರು. ಆದರೆ ಅಂತಿಮವಾಗಿ ಪದಾಧಿಕಾರಿಗಳು ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರದ ವೇಳೆ ನಿರ್ಗಮನ ಅಧ್ಯಕ್ಷರಿಂದಲೇ ಅಧಿಕಾರ ಹಸ್ತಾಂತರ ನಡೆಯಬೇಕು ಎಂದು ಆಗ್ರಹಿಸಿ ವೇದಿಕೆ ಮುಂಭಾಗದಲ್ಲಿ ಜೋರು ದನಿಯಲ್ಲಿ ಆಗ್ರಹಿಸಿದ ಘಟನೆ ನಡೆಯಿತು.

ಈ ವೇಳೆ ರಾಜ್ಯದ ಪದಾಧಿಕಾರಿಗಳು ಸೇರಿದಂತೆ ಅಸಮಧಾನಿತರನ್ನು ಸಮಾಧಾನ ಪಡಿಸುವ ಪ್ರಯತ್ನ ನಡೆಯಿತು. ಆದರೂ ಇದರ ನಡುವೆ ಅಧಿಕಾರ ಹಸ್ತಾಂತರ ನಡೆದು ಪರಸ್ಪರ ವಾಗ್ವಾದಕ್ಕೆ ಮತ್ತು ಕೂಗಾಟಕ್ಕೆ ಕಾರಣವಾಯಿತು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡರಿಂದ ತಿರಂಗಾ ಯಾತ್ರೆ

ಅದೇ ಗ್ರಹಣ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಮಂಜುನಾಥಗೌಡ, ಉಪಾಧ್ಯಕ್ಷೆ ದೀಪಿಕಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಪದಾಧಿಕಾರಿಗಳಾದ ಬಾಹುಬಲಿ ಜೈನ್ , ರಾಜ್ಯ ಉಸ್ತುವಾರಿ ನಿಗಮ್ ಬಂಡಾರಿ, ಜಿಲ್ಲಾಧ್ಯಕ್ಷ ವರುಣ್ ಬೆಣ್ಣಿಹಳ್ಳಿ, ನಿತಿನ್ ಕೊಂಡಜ್ಜಿ, ದೀಪಿಕ್ ಶೆಟ್ಟಿ, ಮೈನುದ್ದೀನ್, ತಾಹಿರ್ ಇತರರು ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...