ದಾವಣಗೆರೆ | ಮಾದಿಗ ಸಂಘಟನೆಗಳ ಒಕ್ಕೂಟದಿಂದ ಒಳಮೀಸಲಾತಿಯ ನೇಮಕಾತಿಗೆ‌ ಒತ್ತಾಯಿಸಿ ಬಂದ್

Date:

ದಾವಣಗೆರೆ ಜಿಲ್ಲೆ ವಿವಿಧ ಮಾದಿಗ ಸಂಘಟನೆಗಳ ಒಕ್ಕೂಟದಿಂದ, ಒಳ ಮೀಸಲಾತಿ ಇಲ್ಲದೆ ಹಳೆ ಮೀಸಲಾತಿಯ ಆಧಾರಿತವಾಗಿ ನೇಮಕಾತಿ ಪ್ರಕ್ರಿಯೆ ಮಾದಿಗ ಸಮಾಜಕ್ಕೆ ಮಾಡುವ ದೊಡ್ಡ ಮೋಸವಾಗಿದೆ. ಇದನ್ನು ವಿರೋಧಿಸಿ ದಾವಣಗೆರೆ ಬಂದ್ ವಿಚಾರವಾಗಿ ತುರ್ತು ಸಭೆಯನ್ನು ಕರೆಯಲಾಗಿದ್ದು, ಈ ಸಭೆಗೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ವಿವಿಧ ದಲಿತ ಮತ್ತು ಮಾದಿಗ ಪರ ಸಂಘಟನೆಗಳ ಮುಖಂಡರು ಭಾಗವಹಿಸಿ, ಮಾದಿಗರ 35 ವರ್ಷಗಳ ಹೋರಾಟದ ಪ್ರತಿಫಲವಾಗಿ ರಾಜ್ಯಪಾಲರಿಂದ ಅಂಕಿತಗೊಂಡು ಕಾಯ್ದೆಯಾಗಿ ರೂಪಗೊಂಡ ಒಳ ಮೀಸಲಾತಿ ವರ್ಗೀಕರಣವನ್ನು ಕಾಂಗ್ರೆಸ್ ಸರ್ಕಾರದ ಕೆಲವು ಸಚಿವರುಗಳು ವಿರೋಧಿಸಿದ್ದು, ಒಳ ಮೀಸಲಾತಿಯನ್ನೇ ನಾಶ ಮಾಡಿದಂತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿ, ದಾವಣಗೆರೆ ಬಂದ್ ಗೆ ನಿರ್ಧಾರ ಕೈಗೊಳ್ಳಲಾಯಿತು.‌

1003793629

56 ಸಾವಿರ ಉದ್ಯೋಗಗಳನ್ನು, ಒಳ ಮೀಸಲಾತಿ ಇಲ್ಲದೆ ಹಳೆ ಮೀಸಲಾತಿಯ ಆಧಾರಿತ ನೇಮಕಾತಿ ಪ್ರಕ್ರಿಯೆ ಮಾದಿಗ ಸಮಾಜಕ್ಕೆ ಮಾಡುವ ದೊಡ್ಡ ಮೋಸವಾಗಿದೆ, ಇದರ ವಿರುದ್ಧ ಎಲ್ಲಾ ದಾವಣಗೆರೆ ಜಿಲ್ಲೆಯ ಸಮಸ್ತ ಮಾದಿಗರ ಸಮಾಜದಿಂದ ಒಕ್ಕೂರಲಿನಿಂದ ಮಾರ್ಚ್ 06 ರಂದು ದಾವಣಗೆರೆ ಬಂದ್ ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು,

ಸಭೆಯ ನಂತರ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾದ ಕೆ ಬಸವಂತಪ್ಪನವರನ್ನು ಸಮಾಜದವರು ಮುತ್ತಿಗೆ ಹಾಕಿ ಮಾದಿಗ ಸಮಾಜದ ಪರವಾಗಿ ಒಳ ಮೀಸಲಾತಿ ಪರವಾಗಿ ಧ್ವನಿ ಎತ್ತುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು, ಸರ್ಕಾರ ಮತ್ತು ಸಚಿವರು ಹಾಗೂ ಶಾಸಕರುಗಳ ವಿರುದ್ಧ ದಿಕ್ಕಾರವನ್ನು ಕೂಗಿದ ಮಾದಿಗ ಪ್ರತಿಭಟನಾಕಾರರು ಶಾಸಕರನ್ನು ಪಟ್ಟು ಹಿಡಿದು ಒಳ ಮೀಸಲಾತಿಯನ್ನು ಜಾರಿ ಮಾಡಿಸಬೇಕೆಂದು ಆಗ್ರಹಿಸಿದರು,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜದ ಮುಖಂಡರಾದ ಆಲೂರು ನಿಂಗರಾಜ ಮಾತನಾಡಿ “ನಮ್ಮ ಸಮಾಜದ ಪ್ರತಿನಿಧಿಯಾಗಿ ನೀವುಗಳು ಸದನದಲ್ಲಿ ಮಾತನಾಡದೆ ಇರುವುದನ್ನು ನಾವು ಖಂಡಿಸುತ್ತೇವೆ, ಸಮಾಜದ ಋಣವನ್ನು ತೀರಿಸುವ ನೀವುಗಳು ಸರ್ಕಾರದ ಕಿವಿ ಹಿಂಡಿ, ನಮ್ಮ ಸಮಾಜಕ್ಕೆ ಒಳಮೀಸಲಾತಿಯನ್ನು ಯಥಾವತ್ತಾಗಿ ಜಾರಿ ಮಾಡಿಸಿ ನ್ಯಾಯವನ್ನು ಕೊಡಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯ ಬಜೆಟ್ | ದಾವಣಗೆರೆ ಜನತೆಯ ನಿರೀಕ್ಷೆಗಳೇನು? ಮುಖಂಡರು ಹೇಳುವುದೇನು?

ಮಾಜಿ ಕಾರ್ಪೊರೇಟ್ ಎಂ ಹಾಲೇಶ್, ಮಾದಿಗ ಸಮಾಜದ ಹಿರಿಯ ಮುಖಂಡರಾದ ಎಚ್ ವಿಶ್ವನಾಥ್, ಮಾದಿಗ ದಂಡೋರ ಅಧ್ಯಕ್ಷ ಎಚ್ ಸಿ ಗುಡ್ಡಪ್ಪ, ಸಾಹಿತಿ ಹುಚ್ಚಂಗಿ ಪ್ರಸಾದ್, ಡಿಎಸ್ಎಸ್ ಸಂಚಾಲಕರಾದ ರಾಘವೇಂದ್ರ ಕಡೆಮನಿ ಹಿರಿಯದಲಿತ ಹೋರಾಟಗಾರರಾದ ಮಲ್ಲೇಶಪ್ಪ ಹರಿಹರ, ಕಡ್ತಿ ಅಂಜಿನಪ್ಪ, ಭೀಮಾರ್ಮಿ ಜಿಲ್ಲಾ ಸಂಚಾಲಕ ನಿಂಗರಾಜ್ ಚಿಕ್ಕನಹಳ್ಳಿ , ಪಿ ಜೆ ಮಹಾಂತೇಶ್ ತಾಲೂಕ ಸಂಚಾಲಕರು ಹರಿಹರ ಡಿಎಸ್ಎಸ್ ಜಿಲ್ಲಾ ಸಂಚಾಲಕರಾದ ಕುಂದುವಾಡ ಮಂಜುನಾಥ್, ರವಿಕುಮಾರ್ ಎಂ ಕೆ ಟಿ ನಗರ, ರವಿಕುಮಾರ್ ಟಿ, ಚೆನ್ನಗಿರಿ ತಾಲೂಕ ಸಂಚಾಲಕರಾದ ಪಾಂಡಮಟ್ಟಿ ಪ್ರಭಾಕರ್, ಚೆನ್ನಗಿರಿ ಮೂರ್ತಿ, ಕೆಂಚಮನಹಳ್ಳಿ ರುದ್ರೇಶ್, ಗುಂಗುರು ಮಂಜುನಾಥ, ಗುನ್ನೂರ್ ಬಸವರಾಜ್, ಮಾಂತೇಶ್ ಹಾಲವರ್ತಿ, ಶಾಮ್ ವಕೀಲರು, ಮಂಜಪ್ಪ ವಕೀಲರು ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...