ದಾವಣಗೆರೆ | ಯತ್ನಾಳ್ ಶಾಸಕ ಸ್ಥಾನ ವಜಾ ಮಾಡಲು ದಲಿತ ಹಕ್ಕುಗಳ ಆಂದೋಲನ ಸಮಿತಿ ಆಗ್ರಹ

Date:

ವಿಜಯಪುರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳರನ್ನು ಶಾಸಕ ಸ್ಥಾನದಿಂದ ವಜಾ ಗೊಳಿಸುವಂತೆ ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ (ಎ ಐ ಡಿ ಆರ್ ಎಂ) ದಾವಣಗೆರೆ ಜಿಲ್ಲಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ದಾವಣಗೆರೆ ಉಪ ವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

“ಇತ್ತೀಚೆಗೆ ದಾವಣಗೆರೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಬಸನಗೌಡ ಪಾಟೀಲ್ ಯತ್ನಾಳ್ ಆಗಮಿಸಿದಾಗ ಮಾಧ್ಯಮದವರ ಜೊತೆಗೆ ಮಾತನಾಡುವಾಗ ನಾಡ ಹಬ್ಬ ದಸರಾ ಉದ್ಘಾಟನೆ ವಿಷಯ ಕುರಿತಂತೆ ಬೂಕರ್ ಪ್ರಶಸ್ತಿ ವಿಜೇತರಾದ ಭಾನು ಮುಸ್ತಾಕ್ ರವರ ಬಗ್ಗೆ ಮಾತನಾಡುವ ಸಮಯದಲ್ಲಿ ಮೈಸೂರು ದಸರಾ ಹಬ್ಬ ಕುರಿತು ದಲಿತ ಮಹಿಳೆಯೂ ಉದ್ಘಾಟನೆ ಮಾಡಲು ಯೋಗ್ಯರಲ್ಲ ಎಂದು ಬಾಯಿಗೆ ಬಂದಂತೆ ಮಾತನಾಡಿ ಇಡೀ ದಲಿತ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ದಲಿತರ ಮತಗಳಿಂದಲೇ ಸದಾ ಗೆದ್ದು ಬರುತ್ತಿರುವ ಇಂತಹ ದಲಿತ ಮಹಿಳಾ ವಿರೋಧಿಯಾದ ಬಸನಗೌಡ ಪಾಟೀಲ ಯತ್ನಾಳ್ ರವರನ್ನು ಕರ್ನಾಟಕ ವಿಧಾನಸಭಾ ಸದಸ್ಯತ್ವದಿಂದ ಈ ಕೂಡಲೇ ವಜಾ ಗೊಳಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಖಿಲ ಭಾರತ ದಲಿತ ಆಂದೋಲನ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ಮಾಡುವ ಮೂಲಕ ಕರ್ನಾಟಕ ವಿಧಾನಸಭಾಧ್ಯಕ್ಷರಾದ ಯು ಟಿ ಖಾದರ್ ರವರಿಗೆ ದಾವಣಗೆರೆ ಉಪ ವಿಭಾಗಾಧಿಕಾರಿಗಳ ಮೂಲಕ ಪ್ರತಿಭಟಿಸಿ ಮನವಿ ಸಲ್ಲಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ದಲಿತ ಕಾಲೋನಿಯ ಮೂಲಸೌಕರ್ಯ ಅಭಿವೃದ್ಧಿಗೆ ದಸಂಸ ಪ್ರತಿಭಟನೆ

ಈ ಸಂದರ್ಭದಲ್ಲಿ ಎ ಐ ಡಿ ಆರ್ ಎಂ ಜಿಲ್ಲಾಧ್ಯಕ್ಷ ನರೇಗಾ ರಂಗನಾಥ್, ಪ್ರಧಾನ ಕಾರ್ಯದರ್ಶಿ ರಾಜು ಕೆರೆಯಾಗಳಹಳ್ಳಿ, ಖಜಾಂಚಿ ರಮೇಶ್ ಸಿ ದಾಸರ್ ಮತ್ತು ಮುಖಂಡರುಗಳಾದ ನಾಗನೂರು ನಿಂಗಪ್ಪ ಮತ್ತು ಯೋಗೇಶ್ ಹಾಗೂ ಇತರರು ಹಾಜರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...