ದಾವಣಗೆರೆ | ಆಗ್ನೇಯ ಪದವೀಧರರ ಮತದಾರ ನೊಂದಣಿ ವಿಸ್ತರಿಸಿ: ಪ್ರಗತಿಪರ ಮುಖಂಡರ ಆಗ್ರಹ

Date:

ಆಗ್ನೇಯ ಪದವೀಧರರ ಮತದಾರ ನೊಂದಣಿ ಪ್ರಕ್ರಿಯೆ ವಿಸ್ತರಣೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಮುಖಂಡರುಗಳು ದಾವಣಗೆರೆ ಜಿಲ್ಲೆ ಜಗಳೂರು ನಗರದ ತಾಲೂಕು ಕಛೇರಿ ಮುಂಭಾಗದಲ್ಲಿ ಜಗಳೂರು ತಹಶೀಲ್ದಾರ್ ಸೈಯದ್‌ ಕಲೀಂ ಉಲ್ಲಾ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ವೇಳೆ ವಕೀಲ ಆ‌ರ್.ಓಬಳೇಶ್ ಮಾತನಾಡಿ, “ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ನೊಂದಣಿಗೆ ನ.6 ರಂದು ದಿನಾಂಕ ನಿಗದಿಗೊಳಿಸಿದ ಪರಿಣಾಮ ತಾಲ್ಲೂಕಿನಲ್ಲಿ ಸಾವಿರಾರು ಪದವೀಧರರು ಮತದಾನ ಅರ್ಹತೆಯಿಂದ ವಂಚಿತರಾಗುತ್ತಿದ್ದಾರೆ. ತಾಲ್ಲೂಕಿನಾದ್ಯಂತ ಕೇವಲ 3025 ಮತದಾರರು ಅರ್ಜಿಸಲ್ಲಿಸಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಹಳ್ಳಿಗಳಲ್ಲಿ ಬಹುತೇಕ ಪದವೀಧರರು, ಸೇವಾನಿರತ ಶಿಕ್ಷಕರು, ವಕೀಲರು, ದುಡಿಮೆ ಅರಸಿ ನಗರಪ್ರದೇಶಗಳಿಗೆ ತೆರಳಿರುವ ನಿರುದ್ಯೋಗಿ ಪದವೀಧರರು ಮಾಹಿತಿ ಕೊರತೆಯಿಂದ, ಇನ್ನು ಕೆಲವರು ಸಮರ್ಪಕ ದಾಖಲಾತಿಗಳಿಲ್ಲದ ಕಾರಣ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗಿಲ್ಲ. ಆದ್ದರಿಂದ ಸರ್ಕಾರ ಮತದಾರರ ನೊಂದಣಿಗೆ ಇನ್ನೂ ಕೆಲದಿನಗಳಿಗೆ ವಿಸ್ತರಣೆಗೊಳಿಸಿ ಅವಕಾಶ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕನಕದಾಸರ ಸಮಾಜ ಸುಧಾರಣೆ ಮಾನವೀಯ ಮೌಲ್ಯಗಳು ಇಂದಿಗೂ ಪ್ರಸ್ತುತ: ಸಚಿವ ಡಿ ಸುಧಾಕರ್

ಮನವಿ ಸಲ್ಲಿಸುವ ವೇಳೆ ಸಮಾಜಕಲ್ಯಾಣ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಬಿ. ಮಹೇಶ್ವರಪ್ಪ, ಜಿ.ಶಂಭುಲಿಂಗಪ್ಪ, ಮಾನವಹಕ್ಕುಗಳ ಹೋರಾಟ ಸಮಿತಿಯ ಪದಾಧಿಕಾರಿಗಳಾದ ಜಿ.ತಿಪ್ಪೇಸ್ವಾಮಿ, ರಕೀಬ್, ಪ್ರದೀಪ್, ಶುಕ್ರದೆಸೆ ಸಂಪಾದಕ, ಪ್ರಗತಿಪರ ಹೋರಾಟಗಾರರಾದ ರಾಜಪ್ಪ ವ್ಯಾಸಗೊಂಡನಹಳ್ಳಿ, ದಸಂಸ ತಾಲೂಕಾಧ್ಯಕ್ಷ ಸತೀಶ್ ಮಲೆಮಾಚಿಕೆರೆ, ಮಾದಿಹಳ್ಳಿ ಮಂಜುನಾಥ್, ಗೊಲ್ಲರಹಟ್ಟಿ ತಿಪ್ಪೇಸ್ವಾಮಿ, ಧನ್ಯಕುಮಾರ್ ಎಚ್.ಎಂ ಹೊಳೆ, ಚಂದ್ರಪ್ಪ, ಗೌರಿಪುರ ಸತ್ಯಮೂರ್ತಿ, ಉಮೇಶ್ ಸೇರಿದಂತೆ ಇತರರು ಹಾಜರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...