ದಾವಣಗೆರೆ | ಸಾಮಾಜಿಕ ನ್ಯಾಯಕ್ಕೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪರಿಸ್ಥಿತಿ ಮುಖ್ಯ; ಗಣತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

Date:

“ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ” ಎಂದು ದಾವಣಗೆರೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

1002167823
ದಾವಣಗೆರೆ ನಗರದ ಸರ್ಕೀಟ್ ಹೌಸ್ ನಲ್ಲಿ ಅಹವಾಲು ಸ್ವೀಕರಿಸಿದರು.

ಕಾರ್ಯಕ್ರಮ ನಿಮಿತ್ತ ದಾವಣಗೆರೆಗೆ ಆಗಮಿಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,
“ಕೇಂದ್ರ ಸರ್ಕಾರ ಜನಗಣತಿಯನ್ನು 27 ನೇ ಸಾಲಿನಿಂದ ಕೈಗೊಳ್ಳುತ್ತಿದ್ದು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡುವುದಾಗಿ ಎಲ್ಲೂ ಹೇಳಿಲ್ಲ. ನಾವು ಮಾಡುತ್ತಿರುವುದು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ. ಅದರ ಜೊತೆ ಜಾತಿ ಗಣತಿಯೂ ಒಳಗೊಂಡಿದೆ” ಎಂದು ಸ್ಪಷ್ಟಪಡಿಸಿದರು.

1002167822

“ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಮೀಕ್ಷೆಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002167820

“ಹಿಂದುಳಿದ ವರ್ಗಗಳ ಆಯೋಗದ ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಸರ್ಕಾರದಿಂದ ಮರುಗಣತಿ ಕೈಗೊಳ್ಳಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಇಸ್ಲಾಂ ಪ್ರೀತಿಸಿದಂತೆ ಇತರೆ ಧರ್ಮಗಳನ್ನು ಗೌರವಿಸುವ ಮನೋಭಾವ ಇರಬೇಕು; ಜಮಾತೆ ಇಸ್ಲಾಂ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ

ಈ ವೇಳೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಶಾಮನೂರು ಮಲ್ಲಿಕಾರ್ಜುನ್, ಚನ್ನಗಿರಿ ಶಾಸಕರಾದ ಬಸವರಾಜು ಶಿವಗಂಗಾ, ಮಾಯಕೊಂಡ ಶಾಸಕ ಕೆ ಎಸ್ ಬಸವಂತಪ್ಪ, ಶಾಸಕ ಡಿ ಜಿ ಶಾಂತನಗೌಡ, ಸೇರಿದಂತೆ ಇತರರು ಹಾಜರಿದ್ದರು. ಈ ವೇಳೆ ಸಾರ್ವಜನಿಕರು, ಸಂಘಸಂಸ್ಥೆಗಳಿಂದ ಮನವಿ, ಹಕ್ಕೋತ್ತಾಯ ಸ್ವೀಕರಿಸಿದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...