ದಾವಣಗೆರೆ | ಬಿಜೆಪಿಗೆ ಸಪೋರ್ಟ್‌ ಮಾಡಲು ವಿನಯ್ ಸ್ಪರ್ಧೆ, ನೀವೆಲ್ಲರೂ ತಿರಸ್ಕರಿಸಿ: ಸಿಎಂ ಸಿದ್ದರಾಮಯ್ಯ ಕರೆ

Date:

ನನಗೆ ಮೋಸ ಮಾಡಿ ಹೋಗಿದ್ದ ಬೈರತಿ ಬಸವರಾಜು ದಾವಣಗೆರೆಯಲ್ಲಿ ಬಿಜೆಪಿಗೆ ಲಾಭ ಆಗಲಿ ಎಂದು ವಿನಯ್‌ ಕುಮಾರ್‌ಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ದಾವಣಗೆರೆಯಲ್ಲಿ ನಡೆದ ಕುರುಬ ಸಮುದಾಯದ ಮತ್ತು ಹಿಂದುಳಿದ ಸಮಾಜಗಳ ಸಭೆಯಲ್ಲಿ ಅವರು ಮಾತನಾಡಿ, “ಬಿಜೆಪಿ ಹಿಂದುಳಿದವರನ್ನು ಬಳಸಿಕೊಂಡು ಬಿಸಾಡುತ್ತದೆ. ಇದಕ್ಕೆ ಕೆ.ಎಸ್.ಈಶ್ವರಪ್ಪ ಕೂಡ ಸ್ಪಷ್ಟ ಉದಾಹರಣೆ. ನನ್ನ ವಿರುದ್ಧ ರಕ್ತ ಕಾರುತ್ತಿದ್ದ ಈಶ್ವರಪ್ಪ ಅವರ ಮಗನಿಗೂ ಬಿಜೆಪಿ ಟಿಕೆಟ್ ಕೊಡಲಿಲ್ಲ. ಇದೇ ಬಿಜೆಪಿಯ ಜಾಯಮಾನ” ಎಂದರು.

“ನಿಮಗೆ ನಾನು ಬೇಕೋ-ವಿನಯ್ ಬೇಕೋ ತೀರ್ಮಾನ ಮಾಡಿ. ನಾನು ಬೇಕು ಅಂದ್ರೆ ವಿನಯ್‌ಗೆ ಒಂದೂ ಓಟು ಹಾಕಬೇಡಿ. ಬಿಜೆಪಿ ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ. ಇಂಥಾ ಬಿಜೆಪಿಗೆ ವಿನಯ್ ಸಪೋರ್ಟ್ ಆಗುವಂತೆ ಮಾಡಿದ್ದು ಸರಿಯಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಲ್ಲ. ಇಲ್ಲಿ ನಾನೇ ಅಭ್ಯರ್ಥಿ. ಕಾಂಗ್ರೆಸ್ ಗೆ ಹಾಕುವ ಒಂದೊಂದು ಮತಗಳೂ ನನಗೇ ಹಾಕಿದಂತೆ. ವಿಯನ್ ಗೆ ಹಾಕುವ ಒಂದೊಂದು ಮತವೂ ನನ್ನ ವಿರುದ್ಧ ಹಾಕಿದಂತೆ” ಎಂದು ಸೂಚಿಸಿದರು.

“ಮೋದಿ ಸುಳ್ಳನ್ನೇ ಮಾರುಕಟ್ಟೆ ಮಾಡಿ ಜಾತಿ-ಧರ್ಮದ ಹೆಸರಲ್ಲಿ ಸಮಾಜ ಒಡೆದದ್ದೇ ಸಾಧನೆ. ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ನನಗೆ ತೊಡೆ ತಟ್ಟಿದ್ದರು. ಪಾದಯಾತ್ರೆ ಮಾಡಿ ಸೊಕ್ಕು ಮುರಿದೆ. ಹಿಂದುಳಿದವರ ಶತ್ರು ಬಿಜೆಪಿಗೆ ಮತ ಹಾಕೋದಕ್ಕೆ ಕಾರಣವೇ ಇಲ್ಲ. ಬಿಜೆಪಿ ಕುರುಬರಿಗೆ ಒಂದೂ ಸೀಟು ಕೊಟ್ಟಿಲ್ಲ. ನೀವೂ ಬಿಜೆಪಿಗೆ ಒಂದು ಓಟೂ ಕೊಡಬೇಡಿ” ಎಂದರು.

“ಹಿಂದುಳಿದವರಿಗೆ ಮೀಸಲಾತಿ ಕೊಟ್ಟಾಗ ವಿರೋಧಿಸಿದ್ದು ಬಿಜೆಪಿ, ಮಹಿಳೆಯರಿಗೆ ಮೀಸಲಾತಿ ಕೊಟ್ಟಾಗ ವಿರೋಧಿಸಿದ್ದು ಬಿಜೆಪಿ, ಉನ್ನತ ಶಿಕ್ಷಣದಲ್ಲಿ ಮೀಸಲಾತಿ ಕೊಟ್ಟಾಗ ವಿರೋಧಿಸಿದ್ದು ಬಿಜೆಪಿ, ಬಿಜೆಪಿಯ ರಾಮಾ ಜೋಯಿಸ್ ಮೀಸಲಾತಿ ವಿರೋಧಿಸಿ ಸುಪ್ರೀಂಕೋರ್ಟ್ ಗೆ ಹೋಗಿದ್ದರು. ಹೀಗಾಗಿ ಬಿಜೆಪಿ ಪಕ್ಕಾ ಹಿಂದುಳಿದವರ, ಶ್ರಮಿಕರ, ದುಡಿಯುವ ವರ್ಗಗಳ ವಿರೋಧಿ. ಸುಳ್ಳನ್ನು ಮಾರ್ಕೆಟ್ ಮಾಡಿ ಮೋದಿ ಭಾರತೀಯರಿಗೆ ಮಾಡಿದ ಮೋಸಕ್ಕೆ, ನಂಬಿಕೆ ದ್ರೋಹಕ್ಕೆ ಪಾಠ ಕಲಿಸಿ” ಎಂಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...