ಜಾತಿ ಜನಗಣತಿಗೆ ಪ್ರಧಾನಿ ಮೋದಿ ಶ್ಲಾಘನೆ; ಸಮೀಕ್ಷೆ ಬೇಡಿಕೆ ಟೀಕಿಸಿದ್ದ ಹಳೆ ವಿಡಿಯೋ ಪೋಸ್ಟ್ ಮಾಡಿದ ಕಾಂಗ್ರೆಸ್

Date:

ದಿನಕ್ಕೊಂದು ವಿಭಿನ್ನ ಅಭಿಪ್ರಾಯವನ್ನು ತಳೆಯುವ ಮೂಲಕವೇ ಪ್ರಧಾನಿ ನರೇಂದ್ರ ಮೋದಿ ಟ್ರೋಲ್‌ಗೆ ಒಳಗಾಗುತ್ತಾರೆ. ಇದೀಗ ಜಾತಿ ಜನಗಣತಿ ಬಗ್ಗೆ ತಾನೇ ನೀಡಿದ ಎರಡು ವಿಭಿನ್ನ ಹೇಳಿಕೆ ವಿಚಾರದಲ್ಲಿ ಪೇಚಿಗೆ ಸಿಲುಕಿದ್ದಾರೆ. ಈ ಹಿಂದೆ ಜಾತಿ ಜನಗಣತಿಯನ್ನು ಟೀಕಿಸಿದ್ದ ಪ್ರಧಾನಿ ಮೋದಿ ಈಗ ಜಾತಿ ಜನಗಣತಿಯನ್ನು ಶ್ಲಾಘಿಸಿದ್ದಾರೆ.

ಜಾತಿ ಜನಗಣತಿಯನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ ಒಂದು ದಿನದ ನಂತರ ಕಾಂಗ್ರೆಸ್ ಸೋಮವಾರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ. ಪ್ರಧಾನಿ ಜಾತಿ ಜನಗಣತಿಯನ್ನು ತೆಗಳಿದ್ದ, ಹೊಗಳಿದ್ದ ಎರಡೂ ವಿಡಿಯೋಗಳನ್ನು ಪೋಸ್ಟ್ ಮಾಡಿದೆ.

ಇದನ್ನು ಓದಿದ್ದೀರಾ? ಜಾತಿ ಜನಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಪ್ರಿಯಾಂಕಾ ಗಾಂಧಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾತಿ ಜನಗಣತಿಯು ಹಿಂದುಳಿದವರನ್ನು ಅಭಿವೃದ್ಧಿಯ ಮುಖ್ಯವಾಹಿನಿಗೆ ತರುವತ್ತ ಒಂದು ಹೆಜ್ಜೆಯಾಗಿದೆ. ನಮ್ಮ ಸರ್ಕಾರ ಜಾತಿ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ. ಬದಲಿಗೆ ಹಿಂದುಳಿದವರ ಸಬಲೀಕರಣದಲ್ಲಿ ನಾವು ನಂಬಿಕೆ ಇಡುತ್ತೇವೆ ಎಂದು ಪ್ರಧಾನಿ ಮೋದಿ ಭಾನುವಾರ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪ್ರಧಾನಿ ಮೋದಿ ಅವರ ಎರಡು ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. “2025ರ ಏಪ್ರಿಲ್ 30ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ್ ಆರಂಭದ ನಡುವಿನ ಅವಧಿಯಲ್ಲಿ ಮೋದಿ ಸರ್ಕಾರ ಅನಿರೀಕ್ಷಿತವಾಗಿ ಮತ್ತು ಇದ್ದಕ್ಕಿದ್ದಂತೆ ಜಾತಿ ಜನಗಣತಿಯನ್ನು ಘೋಷಿಸಿದೆ. ಇದರ ಪೂರ್ಣ ಕೀರ್ತಿಯನ್ನು ತಾವೇ ಹೊತ್ತಿಕೊಳ್ಳುವ ಯತ್ನವನ್ನು ಮೋದಿ ಮಾಡಿದ್ದಾರೆ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ಮೊದಲ ಕ್ಲಿಪ್‌ನಲ್ಲಿ 2023ರ ಅಕ್ಟೋಬರ್‌ನಲ್ಲಿ ಪ್ರಧಾನಿ ಮೋದಿ ಅವರು ಬಿಹಾರದಲ್ಲಿ ಜಾತಿ ಜನಗಣತಿ ನಡೆದ ಸಂದರ್ಭದಲ್ಲಿ ಆಡಿರುವ ಮಾತುಗಳು. ಎರಡನೇ ಕ್ಲಿಪ್‌ನಲ್ಲಿ 2024ರ ಏಪ್ರಿಲ್ 28ರಂದು ಜಾತಿ ಜನಗಣತಿಗಾಗಿ ಕಾಂಗ್ರೆಸ್ ಬೇಡಿಕೆ ಇಟ್ಟಾಗ ಮೋದಿ ಏನು ಹೇಳಿದ್ದಾರೆ ನೋಡಿ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ನೈಜ ಸಮಸ್ಯೆ ಮರೆಮಾಚಲು, ಜನರ ಗಮನ ಬೇರೆಡೆ ಸೆಳೆಯಲು ಮೋದಿ ಬಳಸುತ್ತಿರುವ ಐದು ಆಸನಗಳು

ಮೊದಲ ವಿಡಿಯೋದಲ್ಲಿ ಪ್ರಧಾನಿ ಮೋದಿ ಅವರು, “ಅವರು(ವಿಪಕ್ಷ) ಜಾತಿ ಆಧಾರದಲ್ಲಿ ಸಮಾಜವನ್ನು ಒಡೆಯುವ ಯತ್ನ ಮಾಡುತ್ತಿದ್ದರು. ಆ ಪಾಪವನ್ನು ಇಂದಿಗೂ ಮುಂದುವರೆಸಿದ್ದಾರೆ” ಎಂದು ಹೇಳಿದ್ದಾರೆ. ಇನ್ನೊಂದು ವಿಡಿಯೋದಲ್ಲಿ, ಜಾತಿ ಜನಗಣತಿ ನಡೆಸಲು ಕಾಂಗ್ರೆಸ್‌ನ ಬೇಡಿಕೆ ಬಗ್ಗೆ ಪ್ರತಿಕ್ರಿಯಿಸುತ್ತಾ, “ಇದು ನಗರ ನಕ್ಸಲಿಗರ ಮನಸ್ಥಿತಿ” ಎಂದಿದ್ದರು. ಆದರೆ ಇದೀಗ ಅದೇ ಜಾತಿ ಜನಗಣತಿಯನ್ನು ಹೊಗಳುತ್ತಾ, ಅದರ ಶ್ರೇಯಸ್ಸನ್ನು ತನ್ನ ಸರ್ಕಾರಕ್ಕೆ ಗಿಟ್ಟಿಸಿಕೊಳ್ಳುವ ಯತ್ನವನ್ನು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಬಗ್ಗೆ ಬಿಜೆಪಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಆದರೆ ಮೋದಿಯ ಈ ಹೇಳಿಕೆಯಿಂದಾಗಿ ಬಿಜೆಪಿ ನಾಯಕರು ಮಾತ್ರ ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಇನ್ನು ಭಾನುವಾರ ನಡೆದ ಸಭೆಯ ನಂತರ ಜಾತಿ ಜನಗಣತಿ ಮಿತ್ರ ಪಕ್ಷದ ಕಲ್ಪನೆಯ ಭಾಗವಾಗಿದೆ ಎಂದು ಹೇಳಿಕೊಂಡಿದ್ದಾರೆ. ಹಾಗೆಯೇ ಜೆಡಿ(ಯು) ನಾಯಕ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಮೊದಲ ಬಾರಿಗೆ ಜಾತಿ ಜನಗಣತಿ ಮಾಡಿರುವುದು ಎಂದಿದ್ದಾರೆ.

ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ದೇಶದಾದ್ಯಂತ ಜಾತಿ ಗಣತಿಯನ್ನು ನಡೆಸುವಂತೆ ಒತ್ತಾಯಿಸುತ್ತಿದ್ದವು. ಚುನಾವಣೆಯಲ್ಲಿ ಪ್ರಮುಖ ವಿಚಾರ ಇದಾಗಿತ್ತು. ಇನ್ನು ಈಗಾಗಲೇ ಬಿಹಾರ, ತೆಲಂಗಾಣ ಮತ್ತು ಕರ್ನಾಟಕದಂತಹ ಕೆಲವು ರಾಜ್ಯಗಳು ಜಾತಿ ಜನಗಣತಿ ಸಮೀಕ್ಷೆಗಳನ್ನು ನಡೆಸಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...