ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಉಪ್ಪಿಟ್ಟು ಕೇಸರಿಬಾತ್ ಸವಿದ ಡಿಸಿಎಂ ಡಿ ಕೆ ಶಿವಕುಮಾರ್‌

Date:

ಬೆಂಗಳೂರಿನ ತುಮಕೂರು ರಸ್ತೆಯಲ್ಲಿರುವ ದಾಸರಹಳ್ಳಿ ಇಂದಿರಾ ಕ್ಯಾಂಟೀನ್​ಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಭಾನುವಾರ ಬೆಳಗ್ಗೆ ಭೇಟಿ ನೀಡಿ ಉಪಹಾರ ಸವಿದರು.

ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಭಾನುವಾರ ಬೆಳಗ್ಗೆ ದಿಢೀರ್ ಬೆಂಗಳೂರು ಪ್ರದಕ್ಷಣೆ ಹಮ್ಮಿಕೊಂಡು ಪಾಲಿಕೆಯ ಯಾವುದೇ ಅಧಿಕಾರಿಗಳಿಗೆ, ಸಿಬ್ಬಂದಿಗೆ ಮುನ್ಸೂಚನೆ ನೀಡದೆ ಮೊದಲಿಗೆ ದಾಸರಹಳ್ಳಿ ವಲಯದ ವಾರ್ಡ್ ಸಂಖ್ಯೆ 39 ಚೊಕ್ಕಸಂದ್ರದ ಇಂದಿರಾ ಗಾಂಧಿ ಕ್ಯಾಂಟೀನ್ ಪರಿಸ್ಥಿತಿ ಪರಿಶೀಲಿಸಿದರು.

ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ತಿಂಡಿ‌ ಕೇಳಿದರು. ಅದಾಗಲೇ ತಿಂಡಿ ಖಾಲಿ ಆಗಿತ್ತು. ಈ ವೇಳೆ ಎಷ್ಟು ಪ್ಲೇಟ್ ಬರುತ್ತದೆ ಎಂದು ಕ್ಯಾಂಟೀನ್ ಮ್ಯಾನೇಜರ್ ಗೆ ಕೇಳಿದಾಗ 208 ಪ್ಲೇಟ್ ಬಂದು ಖಾಲಿ ಆಗಿದೆ ಎಂದಾದ ತಿಂಡಿ ಪೂರೈಕೆಯನ್ನು ಖಾತರಿಪಡಿಸಿಕೊಳ್ಳಲು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ದಾಸರಹಳ್ಳಿಯ 15ನೇ ವಾರ್ಡ್ ಕ್ಯಾಂಟೀನ್ ಗೆ ಭೇಟಿ ನೀಡಿ ಉಪ್ಪಿಟ್ಟು, ಕೇಸರಿಬಾತ್ ಸವಿದರು. ಈ ಸಂದರ್ಭದಲ್ಲಿ ಪಕ್ಕದಲ್ಲಿ ತಿಂಡಿ ತಿನ್ನುತ್ತಿದ್ದವರನ್ನು ಮಾತನಾಡಿಸಿ ಮಾಹಿತಿ ಪಡೆದರು. ಬಳಿಕ ಪ್ರತಿ ವಾರ, ತಿಂಗಳಿಗೆ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿ ಗುಣಮಟ್ಟ ಪರಿಶೀಲಿಸುವಂತೆ ಪಾಲಿಕೆ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಾಂಗ್ರೆಸ್ ಕೊಡುಗೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ

ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿರುವ ಕುರಿತು ಟ್ವೀಟ್‌ ಮಾಡಿರುವ ಡಿ ಕೆ ಶಿವಕುಮಾರ್‌, “ಇಂದು ನಗರ‌ ಪ್ರದಕ್ಷಿಣೆ ನಿಮಿತ್ತ ಮಾಗಡಿ ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುತ್ತಿದ್ದು, ಇದಕ್ಕೂ ಮುನ್ನ ಚೊಕ್ಕಸಂದ್ರದ ಇಂದಿರಾ ಕ್ಯಾಂಟೀನ್ ನಲ್ಲಿ ಉಪಾಹಾರ ಸೇವಿಸಿದೆ. ಲಕ್ಷಾಂತರ ಬಡವರ ಹಸಿವು ನೀಗಿಸುತ್ತಿರುವ ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ಪಕ್ಷದ ಮಹತ್ತರ ಕೊಡುಗೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ” ಎಂದಿದ್ದಾರೆ.

ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂ. ಅನುದಾನ

ನಗರ ಪ್ರದೇಶದ ಬಡವರು ಮತ್ತು ಶ್ರಮಿಕರಿಗೆ ಕಡಿಮೆ ದರದಲ್ಲಿ ಊಟ, ಉಪಾಹಾರ ಒದಗಿಸುವ ಉದ್ದೇಶದಿಂದ ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಆರಂಭವಾಗಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ 100 ಕೋಟಿ ರೂ. ಮೀಸಲಿಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬಜೆಟ್‌ 23-24 | ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ ಪುನಾರಂಭಕ್ಕೆ 100 ಕೋಟಿ ರೂ. ಅನುದಾನ

ಘನತ್ಯಾಜ್ಯ ಸಂಸ್ಕರಣಾ ಘಟಕಗಳ ಪರಿಶೀಲನೆ

ಸೀಗೇಹಳ್ಳಿ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ 120 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಮಾರ್ಥ್ಯವಿದ್ದು, ಸದ್ಯ ಸಂಸ್ಕರಣಾ ಘಕಟವು ಚಾಲ್ತಿಯಲ್ಲಿ‌ ಇರುವುದಿಲ್ಲ. ಅದನ್ನು ಕೂಡಲೆ ಪ್ರಾರಂಭಿಸಲು ಸೂಚನೆ ನೀಡಿದರು.

ಕನ್ನಹಳ್ಳಿ ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ 350 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಂಸ್ಕರಿಸುವ ಸಾಮರ್ಥ್ಯವಿದ್ದು, ಪ್ರತಿನಿತ್ಯ 350 ಮೆಟ್ರಿಕ್ ಟನ್ ಸಂಸ್ಕರಣೆ ಮಾಡಲಾಗುತ್ತಿದೆ. ಪ್ರತಿನಿತ್ಯ ನಿತ್ಯ ಎಷ್ಟು ಕಾಂಪ್ಯಾಕ್ಟರ್ ಬರುತ್ತದೆ, ಅದಕ್ಕೆ ಅಳವಡಿಸಿರುವ ಜಿ.ಪಿ.ಎಸ್ ಅನ್ನು ಪರಿಶೀಲಿಸಿದರು.

ದೊಡ್ಡಬಿದರಕಲ್ಲು ಘನತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ 150 ಮೆಟ್ರಿಕ್ ಟನ್ ಹಸಿ ತ್ಯಾಜ್ಯ ಸಂಸ್ಕರಿಸುವ ಸಾಮರ್ಥ್ಯವಿದ್ದು, ಪ್ರತಿನಿತ್ಯ 110 ಮೆಟ್ರಿಕ್ ಟನ್ ಸಂಸ್ಕರಣೆ ಮಾಡಲಾಗುತ್ತಿದ್ದು, ಅದನ್ನು‌ ಪರಿಶೀಲನೆ ನಡೆಸಿದರು.

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಬೆಂಗಳೂರಿನಲ್ಲಿ ಘನತ್ಯಾಜ್ಯ ಸಂಗ್ರಹ ಹೆಚ್ಚಳವಾಗುತ್ತಿದ್ದು, ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವ ಕುರಿತು ಗಂಭೀರ ಚಿಂತನೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈ ವೇಳೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್, ಘನತ್ಯಾಜ್ಯ ವಿಭಾಗದ ವಿಶೇಷ ಆಯುಕ್ತ ಡಾ. ಹರಿಶ್ ಕುಮಾರ್, ವಲಯ ಜಂಟಿ ಆಯುಕ್ತ ಜಗದೀಶ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...