ಎಸೆಸೆಲ್ಸಿ | ರ್‍ಯಾಂಕ್ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಡಿಕೆಶಿ ಅಭಿನಂದನೆ

Date:

ಸರ್ಕಾರಿ ಶಾಲೆಯಲ್ಲಿ ಓದಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳದ ಅಂಕಿತಾಗೆ 5 ಲಕ್ಷ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ನವನೀತ್ ಗೆ 2 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿ, ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿನಂದಿಸಿದರು.

ಡಿಸಿಎಂ ಅವರ ಆಹ್ವಾನದ ಮೇರೆಗೆ ಇಬ್ಬರು ವಿದ್ಯಾರ್ಥಿಗಳ ಪೋಷಕರು ಮತ್ತು ಶಾಲೆಯವರು, ಸದಾಶಿವನಗರ ನಿವಾಸಕ್ಕೆ ಮಂಗಳವಾರ ಆಗಮಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಕುಮಾರ್ ಅವರು ಇಬ್ಬರೂ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಅಂಕಿತಾ ಅವರಿಗೆ 5 ಲಕ್ಷ ರೂ. ಚೆಕ್ ನೀಡಿದರು. ನವನೀತ್ ಗೆ 2 ಲಕ್ಷ ರೂ. ಉಡುಗೊರೆ ಪ್ರಕಟಿಸಿ ಚೆಕ್ ನೀಡುವಂತೆ ಕಚೇರಿ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್, ಮೊನ್ನೆ 10 ನೇ ತರಗತಿ ಫಲಿತಾಂಶ ನೋಡಿದಾಗ, ಬಾಗಲಕೋಟೆಯ ಬಸವರಾಜು ಅವರ ಪುತ್ರಿ ಅಂಕಿತಾ 625 ಕ್ಕೆ 625 ಅಂಕಗಳನ್ನು ಪಡೆದಿರುವುದನ್ನು ಕಂಡು ಸಂತೋಷವಾಯಿತು, ಬಹಳ ಹೆಮ್ಮೆ ಎನಿಸಿತು. ನಮ್ಮ ಸರ್ಕಾರಿ ಶಾಲೆ ಮಕ್ಕಳು ಹಾಗೂ ಅಲ್ಲಿನ ಶಿಕ್ಷಕರು ಬಹಳ ಸಮರ್ಥರಿದ್ದಾರೆ. ಅಂಕಿತಾ ಜತೆ ನಾನು ದೂರವಾಣಿ ಕರೆ ಮೂಲಕ ಮಾತನಾಡಿ ಬೆಂಗಳೂರಿಗೆ ಬಂದಾಗ ನನ್ನ ಮನೆಗೆ ಬರುವಂತೆ ಆಹ್ವಾನಿಸಿದ್ದೆ. ಅವರು ಇಂದು ಆಗಮಿಸಿದ್ದಾರೆ. ಸರ್ಕಾರದ ಪರವಾಗಿ ನಾನು ಈ ಹೆಣ್ಣು ಮಗಳು ಹಾಗೂ ಆಕೆಯ ಪೋಷಕರನ್ನು ಅಭಿನಂದಿಸುತ್ತೇನೆ. ಈಕೆಯ ಮುಂದಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಹಣವನ್ನು ಉಡುಗೊರೆಯಾಗಿ ನೀಡುತ್ತಿದ್ದೇನೆ” ಎಂದರು.

“ಮಂಡ್ಯದ ನವನೀತ್ ಕೂಡ ಸರ್ಕಾರಿ ಶಾಲೆಯಲ್ಲಿ ಓದಿ ಮೂರನೇ ಸ್ಥಾನ ಪಡೆದಿದ್ದು, ಈತನಿಗೆ 2 ಲಕ್ಷ ಉಡುಗೊರೆಯಾಗಿ ನೀಡುತ್ತಿದ್ದೇನೆ. ಇವರಿಗೆ ಒಳ್ಳೆಯದಾಗಲಿ” ಎಂದು ಹಾರೈಸಿದರು.

“ನನ್ನ ಆಸಕ್ತಿ ರಾಜಕಾರಣವಾದರೂ ನನ್ನ ಆಯ್ಕೆ ಶಿಕ್ಷಣ ಕ್ಷೇತ್ರ ಎಂದು ಯಾವಾಗಲೂ ಹೇಳುತ್ತಲೇ ಇರುತ್ತೇನೆ. ಗ್ರಾಮೀಣ ಭಾಗದ ಪಂಚಾಯ್ತಿ ಮಟ್ಟದಲ್ಲಿ ಸರ್ಕಾರಿ ಶಾಲೆಗಳನ್ನು ವಿಶ್ವ ಗುಣಮಟ್ಟದ ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮಾಡುವುದು ನನ್ನ ಗುರಿ” ಎಂದರು.

“ಸರ್ಕಾರದ ಹಣ ಬಳಸದೇ, ಸಿಎಸ್ಆರ್ ನಿಧಿ ಮೂಲಕ ಈ ಶಾಲೆಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದು, ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಇವುಗಳ ನಿರ್ಮಾಣದ ಸಭೆ ಕರೆಯುತ್ತೇನೆ. ರಾಮನಗರ ಜಿಲ್ಲೆಯಲ್ಲಿ ಈಗಾಗಲೇ 20 ಶಾಲೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಈ ಶಾಲೆಗಳ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂಬ ಉದ್ದೇಶ ನಮ್ಮದಾಗಿದೆ” ಎಂದು ಇದೇ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...