ಬಿಜೆಪಿಯವರು 48 ಮತ ತೆಗೆದುಕೊಂಡು, ಜೆಡಿಎಸ್ ಅನ್ನು ಕೈಬಿಟ್ಟಿದ್ದಾರೆ: ಡಿ ಕೆ ಶಿವಕುಮಾರ್ ಟಾಂಗ್

Date:

“ಬಿಜೆಪಿ ಹಾಗೂ ಜೆಡಿಎಸ್ ನವರು ಆತ್ಮಸಾಕ್ಷಿ ಮತಗಳನ್ನು ಕೇಳುತ್ತಿದ್ದರು. ಬಿಜೆಪಿಯವರೇ ಆತ್ಮಸಾಕ್ಷಿ ಮತ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ.

ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬಿಜೆಪಿಯವರು ತಮ್ಮ ಅಭ್ಯರ್ಥಿ ಗೆಲುವಿಗೆ ಬೇಕಾದ 45 ಮತಗಳನ್ನು ಇಟ್ಟುಕೊಂಡು ಉಳಿದ ಮತಗಳನ್ನು ಜೆಡಿಎಸ್ ಪಕ್ಷಕ್ಕೆ ನೀಡಬಹುದಿತ್ತು. ಮೈತ್ರಿ ಅಭ್ಯರ್ಥಿಯನ್ನು ನಿಲ್ಲಿಸಿದ್ದೇ ಬಿಜೆಪಿ ಬೆಂಬಲದೊಂದಿಗೆ ಅಲ್ಲವೇ? ಬಿಜೆಪಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕಲ್ಲವೇ? ಆದರೆ ಬಿಜೆಪಿ ತಮ್ಮ ಪಕ್ಷಕ್ಕೆ 48 ಮತಗಳನ್ನು ತೆಗೆದುಕೊಂಡು, ಜೆಡಿಎಸ್ ಅನ್ನು ಕೈಬಿಟ್ಟಿದ್ದಾರೆ” ಎಂದು ಪರೋಕ್ಷವಾಗಿ ಟಾಂಗ್ ನೀಡಿದರು.

ಸೋಮಶೇಖರ್ ಅವರು ಅಡ್ಡಮತದಾನ ಮಾಡಿರುವ ಬಗ್ಗೆ ಕೇಳಿದಾಗ, “ಅಡ್ಡಮತದಾನದ ಬಗ್ಗೆ ನನಗೆ ಗೊತ್ತಿಲ್ಲ. ನಾನು ನನ್ನ ಮತವನ್ನಷ್ಟೇ ನೋಡಿದ್ದೇನೆ. ಪಕ್ಷೇತರರ ಮತವನ್ನು ನಾನು ನೋಡಿಲ್ಲ. ಹೀಗಿರುವಾಗ ಅಡ್ಡ ಮತದಾನದ ಬಗ್ಗೆ ನನಗೇನು ಗೊತ್ತು? ಬಿಜೆಪಿಯವರನ್ನೇ ಕೇಳಿ. ಅವರೇ ಅಲ್ಲವೇ ಆತ್ಮಸಾಕ್ಷಿ ಮತ ಕೇಳಿದ್ದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

Bommai and HDK

ನಿಮ್ಮ ಪಕ್ಷಕ್ಕೆ ಆತ್ಮಸಾಕ್ಷಿ ಮತ ಬಂದಿದ್ದರೆ ಆ ಶಾಸಕರಿಗೆ ಕಾನೂನಾತ್ಮಕವಾಗಿ ಎದುರಾಗುವ ಸಮಸ್ಯೆಗೆ ರಕ್ಷಣೆ ಇರುತ್ತದೆಯೇ ಎಂದು ಕೇಳಿದಾಗ, “ಸಮಯ ಬರಲಿ, ಮಾತನಾಡೋಣ. ಈಗಲೇ ಎಲ್ಲವೂ ಬೇಡ. ಅಡ್ಡ ಮತದಾನದ ಬಗ್ಗೆ ಸ್ಪೀಕರ್ ಗೆ ದೂರಿನ ವಿಚಾರವೂ ನನಗೆ ಗೊತ್ತಿಲ್ಲ. ಸೋಮಶೇಖರ್ ಅವರು ಅವರ ಆತ್ಮಸಾಕ್ಷಿಗೆ ತಕ್ಕಂತೆ ಮತ ಹಾಕಿದ್ದಾರೆ. ಈ ಚುನಾವಣೆ ಮೈತ್ರಿ ಸರಿಯೋ? ಸರಿಯಲ್ಲವೋ? ಎಂಬ ವಿಚಾರಕ್ಕೆ ಸಂಬಂಧಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯನ್ನು ಮತದಾರರು, ಶಾಸಕರು, ಪದವೀಧರರು, ಶಿಕ್ಷಕರು ಒಪ್ಪಬೇಕು. ಶಿಕ್ಷಕರು ಈಗಾಗಲೇ ತಿರಸ್ಕರಿಸಿದ್ದು, ಶಾಸಕರು ಯಾವ ನಿರ್ಧಾರ ತೆಗೆದುಕೊಂಡಿದ್ದಾರೆ ನೋಡೋಣ” ಎಂದರು.

ಇದನ್ನು ಓದಿದ್ದೀರಾ? ಬಾಬಾ ರಾಮ್‌ದೇವ್‌ ಮಾಲೀಕತ್ವದ ಪತಂಜಲಿಯ ಜಾಹೀರಾತಿಗೆ ನಿಷೇಧ ಹೇರಿದ ಸುಪ್ರೀಂ ಕೋರ್ಟ್‌

ಸೋಲು ಗೆಲುವು ಮುಖ್ಯವಲ್ಲ, ನಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನ ಮಾಡಿದ್ದೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಸಂಖ್ಯಾಬಲ ಸ್ವಲ್ಪ ಹೆಚ್ಚು ಕಮ್ಮಿ ಆಗಿದ್ದರೆ ಏನಾಗುತ್ತಿತ್ತು ಅಂತಾ ನಮಗೆ ಗೊತ್ತಿದೆ. ನಾವಾಗಿರುವುದಕ್ಕೆ ಸುಮ್ಮನಿದ್ದೇವೆ. ಈ ವಿಚಾರವಾಗಿ ಹೆಚ್ಚು ಮಾತನಾಡುವುದಿಲ್ಲ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...