ಚುನಾವಣಾ ಬಾಂಡ್ ನಿಷೇಧ | ಪ್ರಜಾಪ್ರಭುತ್ವದ ಉಳಿವಿಗೆ ಮಹತ್ವದ ನಿರ್ಧಾರ: ಡಿಸಿಎಂ ಡಿಕೆ ಶಿವಕುಮಾರ್

Date:

ಚುನಾವಣಾ ಬಾಂಡ್‌ಗಳಿಗೆ ಸುಪ್ರೀಂ ಕೋರ್ಟ್‌ ನಿಷೇಧ ಹೇರಿರುವ ತೀರ್ಪನ್ನು ಸ್ವಾಗತಿಸಿರುವ ಡಿಸಿಎಂ ಡಿಕೆ ಶಿವಕುಮಾರ್, “ದೇಶದ ಇತಿಹಾಸದಲ್ಲೇ ಇದೊಂದು ಮಹತ್ವದ ನಿರ್ಧಾರ. ಪ್ರಜಾಪ್ರಭುತ್ವದ ಉಳಿವಿಗೆ ಇಂತಹ ಮಹತ್ವದ ನಿರ್ಧಾರ ಅಗತ್ಯ” ಎಂದು ಶ್ಲಾಘಿಸಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ದೇಶದ ಇತಿಹಾಸದಲ್ಲೇ ಇದೊಂದು ಮಹತ್ವದ ನಿರ್ಧಾರ. ಅವರ ಈ ಧೈರ್ಯವಾದ ನಿರ್ಧಾರಕ್ಕೆ ನಾನು ಅಭಿನಂದಿಸುತ್ತೇನೆ. ದೇಶದ ಪ್ರಜಾಪ್ರಭುತ್ವ ಉಳಿಸಲು ಇಂತಹ ಮಹತ್ವದ ನಿರ್ಧಾರಗಳು ಬೇಕು. ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇವೆ” ಎಂದು ತಿಳಿಸಿದರು.

ನಮಗೂ ಎಲ್ಲ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮಗೂ ಎಲ್ಲ ಪಕ್ಷಗಳಲ್ಲಿ ಸ್ನೇಹಿತರಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೂ ಆತ್ಮಸಾಕ್ಷಿ ಮತಗಳು ಬೀಳಲಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಎಲ್ಲ ಪಕ್ಷಗಳಲ್ಲಿ ಸ್ನೇಹಿತರಿದ್ದು, ಅವರಿಗೆ ಆತ್ಮಸಾಕ್ಷಿಯ ಮತಗಳು ಬೀಳಲಿವೆ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಅವರು ಅಡ್ಡಮತದಾನದ ಸೂಚನೆ ನೀಡಿದ್ದರು. ಈ ಬಗ್ಗೆ ಪತ್ರಕರ್ತರು ಕೇಳಿದಾಗ ಡಿ ಕೆ ಶಿವಕುಮಾರ್ ಈ ರೀತಿ ಉತ್ತರಿಸಿದರು.

“ನಮಗೂ ಎಲ್ಲ ಪಕ್ಷಗಳಲ್ಲೂ ಸ್ನೇಹಿತರಿದ್ದಾರೆ. ಜೆಡಿಎಸ್ ವಿಫಲವಾಗಿರುವ ಕಾರಣದಿಂದ ಅವರು ಬಿಜೆಪಿ ಜತೆ ಮೈತ್ರಿ ಮಾಡಿದ್ದಾರೆ. ಆ ಪಕ್ಷಗಳಿಂದ ನಮಗೂ ಆತ್ಮಸಾಕ್ಷಿಯ ಮತಗಳು ಬರುವ ವಿಶ್ವಾಸವಿದೆ. ಬಿಜೆಪಿ ಮತ್ತು ಜೆಡಿಎಸ್‌fನವರು ಸದಾ ಕುದುರೆ ವ್ಯಾಪಾರ ಮಾಡುತ್ತಾರೆ. ಅವರು ಅದಕ್ಕೆ ಹೆಸರುವಾಸಿ. ಫೆ. 27ರಂದು ಎಲ್ಲವೂ ತಿಳಿಯಲಿದೆ. ಅವರು ಬಿಜೆಪಿಗೆ ಬಹಳ ಹತ್ತಿರವಾಗಿರುವಂತೆ ಬಿಂಬಿಸುತ್ತಿದ್ದಾರೆ. ಬಿಜೆಪಿಯ ಎಷ್ಟು ಮತಗಳು ಅವರಿಗೆ ಸಿಗಲಿದೆ ಎಂಬುದನ್ನು ಕಾದುನೋಡಿ” ಎಂದು ಕೆಪಿಸಿಸಿ ಅಧ್ಯಕ್ಷ ಹೇಳಿದರು.

ಆ ಪಕ್ಷಗಳಿಂದ ನಿಮಗೆ ಎಷ್ಟು ಆತ್ಮಸಾಕ್ಷಿ ಮತಗಳು ಸಿಗಬಹುದು ಎಂದು ಕೇಳಿದಾಗ, “ಮತದಾನದ ನಂತರ ತಿಳಿಸುತ್ತೇವೆ. ಅವರು ಮೈತ್ರಿಯಿಂದ ಐದನೇ ಅಭ್ಯರ್ಥಿ ಕಣಕ್ಕಿಳಿಸಲು ಯತ್ನಿಸುತ್ತಿದ್ದಾರೆ. ಅವರು ಅವರ ಪ್ರಯತ್ನ ಮಾಡಲಿ. ನಾವು ನಮ್ಮ ಒಗ್ಗಟ್ಟಿನ ರಾಜಕಾರಣ ಮಾಡುತ್ತೇವೆ” ಎಂದು ತಿಳಿಸಿದರು.

“ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನ ಬೆಂಬಲ ನೀಡಿದ್ದಾರೆ. ರಾಜ್ಯಸಭೆಗೆ ನಮ್ಮ ಪಕ್ಷದಿಂದ ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಇವರು ಆಯ್ಕೆಯಾಗಿ ರಾಜ್ಯಸಭೆಯಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತಲಿದ್ದಾರೆ ಎಂಬ ವಿಶ್ವಾಸವಿದೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಇದನ್ನು ಓದಿದ್ದೀರಾ? ಚುನಾವಣಾ ಬಾಂಡ್‌ ಯೋಜನೆ ರದ್ದು : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಅಜಯ್ ಮಾಕೆನ್ ಅವರ ಆಯ್ಕೆ ವಿಚಾರವಾಗಿ ಕೇಳಿದಾಗ, “ಈ ಹಿಂದೆ ಬಿಜೆಪಿ, ಜೆಡಿಎಸ್‌ನವರು ಕರೆದುಕೊಂಡು ಬಂದು ನಿಲ್ಲಿಸಿದ್ದರಲ್ಲ. ಅವರನ್ನು ಕೇಳಿ. ಅಜಯ್ ಮಾಕೆನ್ ಅವರ ಕುಟುಂಬ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಅನೇಕ ತ್ಯಾಗ ಮಾಡಿದೆ. ವಿದ್ಯಾರ್ಥಿ ನಾಯಕನಿಂದ ದೆಹಲಿಯವರೆಗೂ ಪಕ್ಷ ಸಂಘಟನೆ ಮಾಡಿರುವ ಪಕ್ಷದ ಆಧಾರಸ್ತಂಭ ಇವರು. ಹೀಗಾಗಿ ಅವರನ್ನು ನಾವು ಬಹಳ ಸಂತೋಷದಿಂದ ಆಯ್ಕೆ ಮಾಡಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...