ಬಿಜೆಪಿ ಅವಧಿಯಲ್ಲಿ ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ? ಡಿಕೆ ಶಿವಕುಮಾರ್ 

Date:

“ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ?” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಪಕ್ಷ ನಾಯಕನಿಗೆ ತಿರುಗೇಟು ನೀಡಿದ್ದಾರೆ.

ಪೊಲೀಸ್ ಠಾಣೆಗೆ ರಕ್ಷಣೆ ನೀಡುವ ಪರಿಸ್ಥಿತಿ ಬಂದಿದೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಟೀಕೆ ಬಗ್ಗೆ ಕನಕಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ತಿರುಗೇಟು ನೀಡಿದ್ದಾರೆ.

“ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ” ಎಂದು ಡಿಸಿಎಂ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
kaup police
ಆಯುಧ ಪೂಜೆಯ ಸಂದರ್ಭ ಕೇಸರಿ ಬಟ್ಟೆಯಲ್ಲಿ ಉಡುಪಿ ಜಿಲ್ಲೆಯ ಕಾಪು ಪೊಲೀಸರು

ಪ್ರಜ್ವಲ್ ರೇವಣ್ಣ ಬಂಧನದ ಬಗ್ಗೆ ಕೇಳಿದಾಗ, “ಮಾಧ್ಯಮಗಳಲ್ಲಿ ಈ ವಿಚಾರ ನೋಡಿದೆ. ಎಸ್ಐಟಿ ಪ್ರಕರಣ ತನಿಖೆ ನಡೆಸುತ್ತಿದ್ದು, ಅವರು ವಿಚಾರಣೆ ಮಾಡುತ್ತಾರೆ. ಆ ಬಗ್ಗೆ ನಾನೇಕೆ ತಲೆಕೆಡಿಸಿಕೊಳ್ಳಲಿ” ಎಂದರು.

ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂನ್ 6ರವರೆಗೆ ಗಡುವು ನೀಡಿರುವ ಬಗ್ಗೆ ಕೇಳಿದಾಗ, “ಅವರು ಅಲ್ಲಿಯವರೆಗೂ ಕಾಯುವುದೇಕೆ? ಈಗಿನಿಂದಲೇ ಹೋರಾಟ ಮಾಡಲಿ. ಅವರು ಯಾವ ವಿಚಾರಕ್ಕೆ ಬಾಯಿ ಬಿಡಬೇಕೋ ಅದರ ಬಗ್ಗೆ ಬಿಡುತ್ತಿಲ್ಲ” ಎಂದು ಛೇಡಿಸಿದರು.

ನೈತಿಕ ಹೊಣೆಹೊತ್ತು ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂಬ ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಪ್ರಕರಣದ ತನಿಖೆಯಲ್ಲಿ ವಾಸ್ತವಾಂಶ ಪರಿಶೀಲನೆ ನಡೆಯಲಿ. ನಾವು ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ” ಎಂದರು.

ಇದನ್ನು ಓದಿದ್ದೀರಾ? ಮಹಿಳಾ ಅಧಿಕಾರಿಗಳಿಂದಲೇ ಪ್ರಜ್ವಲ್‌ ರೇವಣ್ಣ ಬಂಧನ, ಸಂತ್ರಸ್ತೆಯರಲ್ಲಿ ಧೈರ್ಯ ತುಂಬಲು ಈ ಕ್ರಮ

“ಬೆಂಗಳೂರು ಪದವೀಧರ ಕ್ಷೇತ್ರದ ಮತದಾರರ ಬಳಿ ನಮ್ಮ ಅಭ್ಯರ್ಥಿ ರಾಮೋಜಿ ಗೌಡರ ಪರ ಪ್ರಚಾರ ಮಾಡಿ, ಈ ಚುನಾವಣೆಯಲ್ಲಿ ನಮ್ಮ ನಾಯಕರಿಗೆ ಜವಾಬ್ದಾರಿ ವಹಿಸಲು ಕನಕಪುರಕ್ಕೆ ಬಂದಿದ್ದೇನೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ದಳದವರು ಮೈತ್ರಿಯಾಗಿವೆ. ನಮ್ಮ ಅಭ್ಯರ್ಥಿ ರಾಮೋಜಿ ಗೌಡರು ಉತ್ತಮ ಕೆಲಸ ಮಾಡಿಕೊಂಡು ಬಂದಿದ್ದು, ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ” ಎಂದು ತಿಳಿಸಿದರು.

ಜನರ ಆಶೀರ್ವಾದ, ನಾನು ನಂಬಿರುವ ಶಕ್ತಿ ನನ್ನನ್ನು ಕಾಪಾಡಲಿದೆ

ನಿಮ್ಮ ವಿರುದ್ಧ ಯಾಗ ಮಾಡುತ್ತಿರುವವರು ಯಾರು ಎಂದು ಹೇಳಬಹುದೇ, ಇದಕ್ಕಾಗಿ ವಿಶೇಷ ಪೂಜೆ ಏನಾದರೂ ಇಟ್ಟುಕೊಂಡಿದ್ದೀರಾ ಎಂದು ಕೇಳಿದಾಗ, “ಯಾಗ ಯಾರು ಮಾಡಿದ್ದಾರೆ ಎಂಬುದಕ್ಕೆ ಕಾಲವೇ ಉತ್ತರ ನೀಡಲಿದೆ. ನಮಗೆ ಆಶೀರ್ವಾದ ಮಾಡಲು ನೀವು ಹಾಗೂ ಜನರು ಇದ್ದಾರೆ. ನಾನು ನಂಬಿರುವ ಶಕ್ತಿ ಇದೆ. ನಿಮ್ಮ ಪ್ರಾರ್ಥನೆ ಕಾಪಾಡಲಿದೆ” ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...