ಬೆಂಗಳೂರು ಶಾಸಕ ಸಂಸದರೊಂದಿಗೆ ಡಿಸಿಎಂ ಸಭೆ: ಒಂದು ಗಂಟೆ ತಡವಾಗಿದ್ದಕ್ಕೆ ಬಿಜೆಪಿ ಆಕ್ರೋಶ

Date:

  • ಬಿಬಿಎಂಪಿ ಚುನಾವಣೆ, ಮಳೆ ಸಮಸ್ಯೆ ವಿಚಾರಗಳ ಚರ್ಚೆಗೆ ಕರೆದಿದ್ದ ಸಭೆ
  • ವಿಧಾನಸೌಧದಲ್ಲಿ ಸರ್ವಪಕ್ಷ ಬೆಂಗಳೂರು ಶಾಸಕರ ಸಭೆ ಕರೆದಿದ್ದ ಡಿಕೆಶಿ

ಬೆಂಗಳೂರು ನಗರದ ಶಾಸಕ ಸಂಸದರೊಂದಿಗೆ ನಗರದ ಅಭಿವೃದ್ದಿ ಮತ್ತು ಸಮಸ್ಯೆ ಆಧಾರಿತ ವಿಚಾರಗಳ ಚರ್ಚೆ ಸಲುವಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆದಿದ್ದ ಮೊದಲ ಸಭಾವೇದಿಕೆ ಆಡಳಿತ ಹಾಗೂ ವಿಪಕ್ಷ ನಡುವಿನ ಮುಸುಕಿನ ಗುದ್ದಾಟಕ್ಕೆ ಸಾಕ್ಷಿಯಾಗಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉಪಮುಖ್ಯಮಂತ್ರಿ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಗೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರ ತಂಡ ಗೈರಾದರೆ, ಶಾಸಕ ರವಿ ಸುಬ್ರಹ್ಮಣ್ಯ, ಸಂಸದರಾದ ತೇಜಸ್ವಿ ಸೂರ್ಯ, ಪಿ ಸಿ ಮೋಹನ್ ಹಾಜರಾಗಿದ್ದರು.

ಇಂದಿನ (ಜೂನ್‌ 5) ಸಭೆಯಲ್ಲಿ ಅಭಿವೃದ್ದಿಶೀಲ ಬೆಂಗಳೂರನ್ನು ಹೊಸ ಮಜಲಿಗೆ ಕೊಂಡೊಯ್ಯುವ ಹಾಗೂ ಇಲ್ಲಿನ ಕೆಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಲಹೆ ಸೂಚನೆಗಳು ಹಾಗೂ ಬಿಬಿಎಂಪಿ ಚುನಾವಣೆ ಸಂಬಂಧಿ ಚರ್ಚೆಗಳು ನಡೆಯಲಿವೆ. ಆದರೆ ಸಭೆ ಆರಂಭಕ್ಕೂ ಮುನ್ನ ಡಿಸಿಎಂ ವಿರುದ್ದ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಆಕ್ರೋಶ ಹೊರ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?:ನಮ್ಮ ಡಿಸಿಎಂ | ಬಿಕ್ಕಟ್ಟುಗಳನ್ನೇ ಮೆಟ್ಟಿಲುಗಳನ್ನಾಗಿ ಬಳಸಿ ಬೆಳೆದ ಶಿವಕುಮಾರ್‌

ಬೆಂಗಳೂರಲ್ಲಿ ಮಳೆ ಹಾಗೂ ಪ್ರವಾಹ ನಿರ್ವಹಣೆ ಸಲುವಾಗಿ ಸಭೆ ಕರೆಯಲಾಗಿತ್ತು, ಹನ್ನೊಂದು ಗಂಟೆಗೆ ಈ ಸಭೆ ನಿಗದಿಯಾಗಿತ್ತು. ಆದರೆ ನಮ್ಮನ್ನ ಸಭೆಗೆ ಕರೆದ ಡಿಸಿಎಂ ಒಂದು ಗಂಟೆಗೂ ಹೆಚ್ಚು ಕಾಲ ಕಾಯಿಸಿದ್ದಾರೆ. ತಡವಾಗಿ ಬಂದು ಸಭೆ ನಡೆಸುತ್ತಿದ್ದಾರೆ.

ಈ ಬಗ್ಗೆ ನಮಗೆ ಮಾಹಿತಿ ನೀಡಿರಲಿಲ್ಲ, ಅಷ್ಟು ಸಾಲದು ಎನ್ನುವಂತೆ ಅವರು ಶಿಷ್ಟಾಚಾರದ ಆಹ್ವಾನವನ್ನು ಸಭೆಗೆ ನೀಡದೆ, ನಿನ್ನೆ ಸಂಜೆ ಕೇವಲ ವಾಟ್ಸಪ್ ಮೂಲಕ ಆಹ್ವಾನ ನೀಡಿದ್ದಾರೆ.

ಈ ಮೂಲಕ ಉದ್ದೇಶಪೂರ್ವಕವಾಗಿ ಅವರ ನಡವಳಿಕೆ ಪ್ರದರ್ಶಿಸಿದ್ದಾರೆ ಎಂದ ಅವರು ಈ ಕಾರಣದಿಂದಲೇ ನಾವುಗಳು ಸಭೆಯಿಂದ ನಿರ್ಗಮಿಸುತ್ತಿದ್ದೇವೆ ಎಂದರು. ಇವರಿಗೆ ಶಾಸಕರಾದ ಮುನಿರತ್ನ, ಎಸ್ ಟಿ ಸೋಮಶೇಖರ್, ಬೈರತಿ ಬಸವರಾಜು ಜೊತೆಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...