ಕರ್ತವ್ಯದಲ್ಲಿರುವಾಗ ರಸ್ತೆ ಅಪಘಾತದಲ್ಲಿ ಯೋಧ ಮೃತಪಟ್ಟರೆ ‘ಹುತಾತ್ಮ’ ಎಂದು ಪರಿಗಣಿಸಲಾಗದು: ಅಧಿಕಾರಿಗಳು

Date:

ಕರ್ತವ್ಯದಲ್ಲಿರುವಾಗ ರಸ್ತೆ ಅಪಘಾತದಲ್ಲಿ ಯೋಧ ಮೃತಪಟ್ಟರೆ ಅದು ಹೋರಾಟದ ಸಾವಾಗುವುದಿಲ್ಲ, ಯುದ್ಧದಲ್ಲಿ ಸಾವನ್ನಪ್ಪಿದರು ಎಂಬ ಹುತಾತ್ಮ ಸ್ಥಾನವನ್ನು ನೀಡಲಾಗುವುದಿಲ್ಲ ಎಂದು ಬಿಹಾರ ಸರ್ಕಾರ ಬುಧವಾರ ಸ್ಪಷ್ಟಪಡಿಸಿದೆ. ಈ ಬಗ್ಗೆ ಅಧಿಕಾರಿಗಳಿಗೆ ಬಂದಿರುವ ಪತ್ರವನ್ನು ಉಲ್ಲೇಖಿಸಿ ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ಪಿಟಿಐ ವರದಿ ಮಾಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ತವ್ಯದಲ್ಲಿರುವಾಗ ಸಾವನ್ನಪ್ಪಿದ ಸಿವಾನ್ ನಿವಾಸಿ ರಾಮ್ ಬಾಬು ಸಿಂಗ್ ಅವರು ಸೇನಾ ಯೋಧರಾಗಿದ್ದರು. ಬಿಎಸ್‌ಎಫ್‌ನಲ್ಲಿ ಅಲ್ಲ. ಅವರ ಸಾವನ್ನು ‘ಯುದ್ಧದ ಸಾವು’ ಎಂದು ಪರಿಗಣಿಸಲಾಗುವುದಿಲ್ಲ ಎಂದು ವರದಿಯಾಗಿದೆ.

ಇದನ್ನು ಓದಿದ್ದೀರಾ? ತೆಲಂಗಾಣದ ಬಗ್ಗೆ ಮೋದಿ ಅವಹೇಳನ: ರಾಹುಲ್ ಗಾಂಧಿ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮೊದಲು, ಮುಖ್ಯಮಂತ್ರಿ ಕಚೇರಿ ಸಿಂಗ್ ಅವರನ್ನು ‘ಬಿಎಸ್‌ಎಫ್ ಯೋಧ’ ಎಂದು ಕರೆದಿದೆ. ಜೊತೆಗೆ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ. ಹಾಗೆಯೇ ಕಳೆದ ವಾರ ರಸ್ತೆ ಅಪಘಾತದಲ್ಲಿ ಯೋಧ ಸಾವನ್ನಪ್ಪಿದ ಬಳಿಕ ಅವರನ್ನು ‘ಹುತಾತ್ಮ’ ಎಂದು ಸರ್ಕಾರ ಹೇಳಿತ್ತು.

ಆದರೆ ಇದೀಗ ಹೆಸರು ಬಹಿರಂಗಪಡಿಸಲು ಇಚ್ಛಿಸದ ಹಿರಿಯ ಅಧಿಕಾರಿಯೊಬ್ಬರು ತಮಗೆ ಮಾಹಿತಿ ನೀಡಿರುವುದಾಗಿ ಪಿಟಿಐ ವರದಿ ಮಾಡಿದೆ. “ನಿನ್ನೆ ರಾತ್ರಿ ನಮಗೆ ಸೇನೆಯಿಂದ ಪತ್ರ ಬಂದಿದೆ, ಅದರಲ್ಲಿ ರಾಮ್ ಬಾಬು ಸಿಂಗ್ ಅವರು ಸೇನೆಯಲ್ಲಿದ್ದಾರೆ ಎಂದು ನಮಗೆ ತಿಳಿಸಲಾಗಿದೆ. ಅಲ್ಲದೆ, ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಕಾರಣ ಅವರ ಸಾವನ್ನು ‘ಯುದ್ಧದ ಸಾವು’ ಎಂದು ಕರೆಯಲಾಗುವುದಿಲ್ಲ ಎಂದು ಉಲ್ಲೇಖಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಸಿಂಗ್ ಅವರ ಮೃತದೇಹ ಬುಧವಾರ ಬೆಳಿಗ್ಗೆ ಪಟನಾ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಅಲ್ಲಿ ಮಾಲಾರ್ಪಣೆ ಸಮಾರಂಭ ನಡೆದಿದೆ. ಆದರೆ ಸಾಮಾನ್ಯವಾಗಿ ಹುತಾತ್ಮ ಯೋಧರಿಗೆ ನೀಡುವ ಗೌರವ ರಕ್ಷೆ ನೀಡಲಾಗಿಲ್ಲ.

ಇದನ್ನು ಓದಿದ್ದೀರಾ? ಜಮ್ಮು ಕಾಶ್ಮೀರ | ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ಯೋಧನ ಮೃತದೇಹ ಪತ್ತೆ

ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, “ನಿನ್ನೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎಕ್ಸ್‌ನಲ್ಲಿ ರಾಮ್ ಬಾಬು ಸಿಂಗ್ ಒಬ್ಬ ಬಿಎಸ್ಎಫ್ ಯೋಧ ಎಂದು ಪೋಸ್ಟ್ ಮಾಡಿದ್ದರು. ಈಗ, ಅವರು ಸೇನೆಯಲ್ಲಿದ್ದರು ಎಂದು ತಿಳಿದುಬಂದಿದೆ. ಸಿಎಂ ಈ ರೀತಿ ಗೊಂದಲ ಸೃಷ್ಟಿಸುವುದು ವಿಷಾದನೀಯ. ಆದರೆ ಸಿಂಗ್ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡುವ ಭರವಸೆಯನ್ನು ಸಿಎಂ ಈಡೇರಿಸುತ್ತಾರೆ ಎಂದು ಭಾವಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಇನ್ನು ಸಿಂಗ್ ಅವರ ಪಾರ್ಥಿವ ಶರೀರ ಬಂದ ಬಗ್ಗೆ ನನಗೆ ಯಾರೂ ತಿಳಿಸಿಲ್ಲ. ನಾನು ಒಬ್ಬಂಟಿಯಾಗಿ ಬಂದಿದ್ದೇನೆ. ಇಬ್ಬರು ಉಪಮುಖ್ಯಮಂತ್ರಿಗಳು ಮತ್ತು ದೊಡ್ಡ ಸಂಪುಟ ಸೇರಿದಂತೆ ಸರ್ಕಾರಿ ಪ್ರತಿನಿಧಿಗಳು ಕಾಣದಿರುವುದು ನಿರಾಶಾದಾಯಕ. ನಾನು ಸಿಂಗ್ ಅವರ ಕುಟುಂಬದೊಂದಿಗೆ ಮಾತನಾಡಿ ಸಂತಾಪ ಸೂಚಿಸಿದ್ದೇನೆ” ಎಂದು ತಿಳಿಸಿದರು.

ಸಿಂಗ್ ಅಂತ್ಯಕ್ರಿಯೆಯನ್ನು ಬುಧವಾರ ಸಂಜೆ ಸಿವಾನ್‌ನ ವಾಸಿಲ್‌ಪುರ ಗ್ರಾಮದಲ್ಲಿರುವ ಅವರ ಹುಟ್ಟೂರಿನಲ್ಲಿ ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ. “ಸಿಂಗ್ ಅವರ ತ್ಯಾಗದ ಬಗ್ಗೆ ನಮಗೆ ಹೆಮ್ಮೆ ಇದೆ. ಕರ್ತವ್ಯದ ವೇಳೆ ಮಡಿಯುವ ಅರೆಸೈನಿಕ ಸಿಬ್ಬಂದಿಗೆ ‘ಹುತಾತ್ಮ’ ಸ್ಥಾನಮಾನ ನೀಡುವಂತೆ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯುತ್ತೇನೆ. ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸೈನಿಕರಂತೆಯೇ ಅವರನ್ನು ಗೌರವಿಸಬೇಕು. ಸಿಎಪಿಎಫ್ ಸಿಬ್ಬಂದಿಗೆ ಸಾಮಾನ್ಯವಾಗಿ ಅರ್ಹವಾದ ಮನ್ನಣೆ ಸಿಗುವುದಿಲ್ಲ” ಎಂದು ಯಾದವ್ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...