ವ್ಯಾಪಾರಸ್ಥರ ಬಿಜೆಪಿ, ದೀನದಲಿತರ ಕಾಂಗ್ರೆಸ್‌; ಯಾವುದು ಬೇಕು ನಿರ್ಧರಿಸಿ ಎಂದ ಮಹದೇವಪ್ಪ

Date:

  • ದೀನದಲಿತರ ಪರ ಇರುವ ಏಕೈಕ ಧ್ವನಿ ಕಾಂಗ್ರೆಸ್ ಪಕ್ಷ
  • ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಅಬ್ಬರದ ಪ್ರಚಾರ

ಬಿಜೆಪಿ ವ್ಯಾಪಾರಸ್ಥರ ಪಕ್ಷ, ಕಾಂಗ್ರೆಸ್ ದೀನದಲಿತರ ಪರ ಇರುವ ಪಕ್ಷ. ಈ ಬಾರಿ ಜನ ಯೋಚಿಸಿ ಮತ ನೀಡಿ ನಿಮ್ಮ ಆಯ್ಕೆ ಪ್ರದರ್ಶಿಸಿ ಎಂದು ಮಾಜಿ ಸಚಿವ ಎಚ್ ಸಿ ಮಹದೇವಪ್ಪ ಹೇಳಿದರು.

ತಮ್ಮ ಸ್ವಕ್ಷೇತ್ರ ಟಿ ನರಸೀಪುರದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಕ್ಷದ ಸ್ಟಾರ್ ಕ್ಯಾಂಪೇನರ್ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಮಹದೇವಪ್ಪ ಮತಯಾಚನೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಬಿಜೆಪಿ ಎಂದಿಗೂ ಬಡವರ, ದೀನದಲಿತರ ಪರ ಕೆಲಸ ಮಾಡುವುದಿಲ್ಲ ಅವರದ್ದೇನಿದ್ದರೂ ಅಂಬಾನಿ, ಅದಾನಿಗಳಿಗಳಿಗಿರುವ ಪಕ್ಷ. ಅವರ ಉದ್ದಾರವೇ ಬಿಜೆಪಿಯ ಸಾಧನೆ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿಯವರು ಯಾವತ್ತಿಗೂ ದೇಶ ಉಳಿಸುವ ಯೋಜನೆ ಹಾಗೂ ಯೋಚನೆಯನ್ನು ಮಾಡುವವರಲ್ಲ. ಇವರದ್ದೇನಿದ್ದರೂ ಮಾರುವ ಯೋಜನೆಗಳಷ್ಟೇ ಎಂದು ಮಹದೇವಪ್ಪ ಲೇವಡಿ ಮಾಡಿದರು.

ಭಾರತೀಯ ಜನತಾಪಕ್ಷ ಹಾಗೂ ಮೋದಿ ಆಡಳಿತದಲ್ಲಿ ಸಂವಿಧಾನ ಸಂಕಷ್ಟಕ್ಕೀಡಾಗಿದೆ. ಇವರು ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ.

ಸಮಾನತೆ, ಸ್ವಾತಂತ್ರ್ಯದ ಉದ್ದೇಶವನ್ನು ಇವರು ಹಾಳು ಮಾಡುತ್ತಾರೆ. ಇವರಿಗೆ ಮತ್ತೆ ಆಡಳಿತ ನೀಡಿದರೆ ದೇಶವನ್ನು ಅವನತಿ ಕಡೆಗೆ ಒಯ್ಯುತ್ತಾರೆ ಎಂದು ಮಾಜಿ ಸಚಿವರು ಹೇಳಿದರು.

ಬಿಜೆಪಿ ಆರ್‌ಎಸ್‌ಎಸ್‌ ಆಣತಿಯಂತೆ ಕೆಲಸ ಮಾಡುವ ಜನವಿರೋಧಿ ಪಕ್ಷ. ಜನ ಇಲ್ಲಿ ಬದುಕುವುದು ಅಸಾಧ್ಯ ಎನ್ನುವ ವಾತಾವರಣವನ್ನು ದೇಶ ಕಂಡಿದೆ.

ಇವರೇ ಅಧಿಕಾರದಲ್ಲಿದ್ದರೆ ನಿಮ್ಮ ಅಭಿವೃದ್ದಿ ಅಸಾಧ್ಯ. ಕಾಂಗ್ರೆಸ್ ದೇಶದ ಜನರ ಪಕ್ಷ. ಇದರೊಂದಿಗಿದ್ದರೆ ಜನ ಸದಾ ಸುರಕ್ಷಿತ, ದೇಶದ ಜೊತೆ ಸಂವಿಧಾನವೂ ಭದ್ರ ಎಂದು ಮಹದೇವಪ್ಪ ಹೇಳಿದರು.

ಹಿಂದೆ ಆಡಳಿತ ನಡೆಸಿದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 165 ಭರವಸೆಗಳನ್ನೂ ಈಡೇರಿಸಿದೆ. ಇದು ನಮ್ಮ ಕಾಂಗ್ರೆಸ್ ಸರ್ಕಾರ. ಬಿಜೆಪಿಯವರು ಹೇಳಿದ್ದಷ್ಟೇ ಹೊರತು ಮಾಡಿದ್ದೇನೂ ಇಲ್ಲ ಎಂದರು.

ಈ ಸುದ್ದಿ ಓದಿದ್ದೀರಾ?:ಹಳೆ ಮೈಸೂರಿನಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಜೆಡಿಎಸ್ ಹರಸಾಹಸ : ಪ್ರಚಾರದ ಕಣಕ್ಕೆ ಎಚ್‌ಡಿಡಿ, ಎಚ್‌ಡಿಕೆ

ಸಮಯ ಸಾಧಕ ರಾಜಕೀಯನ್ನಷ್ಟೇ ಮಾಡುವ ಭಾಜಪದವರು ರಾಜ್ಯವನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಮಹಿಳೆಯರು, ದಲಿತರು,ದುಡಿಯುವ ವರ್ಗವನ್ನು ಇವರು ಪ್ರಪಾತಕ್ಕೆ ತಳ್ಳಿದ್ದಾರೆ.

ಜನಪರ ಸೂಕ್ಷ್ಮತೆ, ಕಾಳಜಿ ಇಲ್ಲದ ಈ ಸರ್ಕಾರ ಎಮ್ಮೆಯ ದಪ್ಪ ಚರ್ಮದಂತೆ. ʼಇಂತಹ ಸರ್ಕಾರ ಇದ್ದರೆಷ್ಟು ಹೋದರೆಷ್ಟು ಎಂದು ಮಹದೇವಪ್ಪ ಗುಡುಗಿದರು.

ನೀವೆಲ್ಲ ಮತ್ತೊಮ್ಮೆ ಯೋಚನೆ ಮಾಡಿ, ಸ್ಥಿರ ಹಾಗೂ ಸುಭದ್ರ ಸರ್ಕಾರ ನೀಡಲು ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ, ನನಗೂ ಹಾಗೂ ನಮ್ಮ ಜಿಲ್ಲೆಯ ಎಲ್ಲರನ್ನೂ ಆಶೀರ್ವದಿಸಿ ಎಂದು ಕ್ಷೇತ್ರದ ಮತದಾರರು ಹಾಗೂ ಕಾಂಗ್ರೆಸ್ ಅಭಿಮಾನಿಗಳಲ್ಲಿ ವಿನಂತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...