ಹಿಂದುಳಿದ ವರ್ಗಗಳ ಆಯೋಗದ ವರದಿ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿಯೇ ತೀರ್ಮಾನ: ಸಿಎಂ ಸಿದ್ದರಾಮಯ್ಯ

Date:

ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕರಿಸಲಾಗಿದೆ. ಆದರೆ ವರದಿಯಲ್ಲಿರುವ ಅಂಶಗಳ ಬಗ್ಗೆ ಮಾಹಿತಿಯಿಲ್ಲ. ಸದರಿ ವರದಿಯನ್ನು ಸಚಿವ ಸಂಪುಟದ ಮುಂದೆ ಇರಿಸಿ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಹಾಸನದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡುತ್ತ, ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಕೆಲವು ಸ್ವಾಮೀಜಿಗಳು ಹಾಗೂ ಪಕ್ಷದ ಕೆಲ ನಾಯಕರೇ ವಿರೋಧಿಸುತ್ತಿರುವ ಬಗ್ಗೆ ಉತ್ತರಿಸಿದರು.

“ಎಲ್ಲರ ಅಭಿಪ್ರಾಯವನ್ನು ಪಡೆದೇ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ, ಆದರೆ ಈ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಜಯಪ್ರಕಾಶ ಹೆಗ್ಡೆ ಅವರು ಅಧ್ಯಕ್ಷರಲ್ಲವೇ? ಅವರು ವರದಿಯನ್ನು ಸಲ್ಲಿಸಿದ್ದಾರೆ. ಅದನ್ನು ಸ್ವೀಕರಿಸಿದ್ದೇವೆ. ಅದರಲ್ಲಿ ಏನಿದೆ? ಏನೆಲ್ಲ ವಿಷಯಗಳ ಬಗ್ಗೆ ಚರ್ಚೆ ಆಗಬೇಕು ಎಂಬುದನ್ನು ಸಂಪುಟದಲ್ಲಿ ವಿಸ್ತ್ರತವಾಗಿ ಚರ್ಚೆ ಮಾಡುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲವಿಲ್ಲ

“ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿರುವುದಿಲ್ಲ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್‌ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ

ಘೋಷಣೆ ಕೂಗಿದ್ದು ನಿಜವಾದರೆ ಕಠಿಣ ಕ್ರಮ

ಪಾಕಿಸ್ತಾನ ಪರ ಘೋಷಣೆ ಪ್ರಕರಣ ಸಂಬಂಧಿಸಿದಂತೆ ಎಫ್ ಎಸ್ ಎಲ್ ವರದಿ ಬೇಗ ಬಹಿರಂಗಪಡಿಸಬೇಕು ಎಂದು ವಿರೋಧಪಕ್ಷದ ನಾಯಕ ಅಶೋಕ್ ಒತ್ತಾಯಿಸಿರುವ ಬಗ್ಗೆ ಕೇಳಿದಾಗ, “ವರದಿ ಬಂದ ತಕ್ಷಣ ತಬಹಿರಂಗ ಮಾಡುತ್ತೇವೆ. ಭಾರತದ ಪರವಾಗಿ ಇಲ್ಲದಿರುವವರು ಘೋಷಣೆ ಕೂಗಿದ್ದು ನಿಜವಾಗಿದ್ದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ದೇಶಭಕ್ತಿಯನ್ನು ಬಿಜೆಪಿಯವರು ಕಾಂಗ್ರೆಸ್ ಗೆ ಹೇಳಿಕೊಡುವ ಅಗತ್ಯವಿಲ್ಲ. ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ” ಎಂದು ತಿರುಗೇಟು ನೀಡಿದರು.

ಜಾತ್ಯಾತೀತ ಜೆಡಿಎಸ್ ಕೋಮುವಾದಿ ಪಕ್ಷದೊಂದಿಗೆ ಮೈತ್ರಿ

ವಿರೋಧಪಕ್ಷದವರು ಅಧಿವೇಶನವನ್ನು ಬಹಿಷ್ಕರಿಸಿ ರಾಜ್ಯಪಾಲರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯವರು ಒಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ , ಮತ್ತೊಬ್ಬರು ಗೈರಾಗಿದ್ದರು. ಇದನ್ನು ಮುಚ್ಚಿಹಾಕಲು ಈ ರೀತಿ ಮಾಡುತ್ತಿದ್ದಾರೆ. ಪಕ್ಷವು ಮಾಡಿಕೊಂಡಿರುವ ಮೈತ್ರಿಯನ್ನು ಶಾಸಕರೇ ಒಪ್ಪಿರುವುದಿಲ್ಲ. ಜೆಡಿಎಸ್ ಅವರು ಜಾತ್ಯಾತೀತರಾಗಿದ್ದು, ಕೋಮುವಾದಿಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದರು” ಎಂದು ತಿಳಿಸಿದರು.

“ಹಾಸನ ಮೇಲ್ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ 48 ಕೋಟಿ ರೂ. ಕೊಟ್ಟಿಲ್ಲ ಎಂದು ಜೆಡಿಎಸ್ ಟೀಕೆಗೆ ಪ್ರತಿಕ್ರಿಯೆ ನೀಡಿ, ಇದಕ್ಕೆ ಅನುದಾನವನ್ನು ಜೆಡಿಎಸ್ ಅವರಲ್ಲ, ನಮ್ಮ ಸರ್ಕಾರವೇ ನೀಡುತ್ತದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...