ಮಾನನಷ್ಟ ಪ್ರಕರಣ | ತಡೆ ಕೋರಿದ್ದ ‌ಬಿಜೆಪಿ ಶಾಸಕ ಯತ್ನಾಳ್‌ಗೆ ಹೈಕೋರ್ಟ್ ಚಾಟಿ

Date:

ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ಗೆ ಹೈಕೋರ್ಟ್ ಪೀಠ ತರಾಟೆಗೆ ತೆಗೆದುಕೊಂಡಿದೆ. ಕುಟುಂಬ ಹಾಗೂ ವಯಕ್ತಿಕ ನಿಂದನೆ ಹೇಳಿಕೆ ಖಂಡಿಸಿ, ಯತ್ನಾಳ್‌ ವಿರುದ್ಧ ಕೋರ್ಟ್ ಮೊರೆ ಹೋಗಿದ್ದ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

ಪ್ರಕರಣಕ್ಕೆ ತಡೆ ಕೋರಿ ಬಸವನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೊರೆ ಹೋಗಿದ್ದರು. ಪ್ರಕರಣವನ್ನ ಆಲೀಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದರು. ಅಲ್ಲದೇ ಶಾಸಕರ ಕೀಳು ಅಭಿರುಚಿಯ ಹೇಳಿಕೆಯನ್ನು ಪ್ರಶ್ನಿಸಿದರು. “ನೀವು ಹೇಳಿಕೆ ನೀಡಿದ್ದು ಹೌದೋ ಅಲ್ಲವೋ” ಎಂದು ಪ್ರಶ್ನಿಸಿದರು. ಹೇಳಿಕೆ ನೀಡಿದ್ದನ್ನು ಯತ್ನಾಳ್ ಪರ ವಕೀಲ ಒಪ್ಪಿಕೊಂಡರು.

ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿಯವರು, “ಈ ರೀತಿಯ ಪದ ಬಳಕೆ ಯಾವ ಅರ್ಥ ನೀಡುತ್ತದೆ. ವಯಕ್ತಿಕ ತೇಜೋವಧೆಗೆ ನೀವು ಏಕೆ ಇಳಿದಿರಿ? ಇತ್ತಿಚೆಗೆ ಈ ರೀತಿಯ ಹೇಳಿಕೆಗಳು ಮಾಮೂಲಾಗಿವೆ. ಒಂದು ಸಮುದಾಯದ ವಿರುದ್ಧ ಈ ರೀತಿ ಪದಬಳಕೆ ಸರಿಯಲ್ಲ. ಮಹಿಳೆಯೊಬ್ಬರು ಮುಸ್ಲಿಂ ಪತ್ನಿ ಆಗಿದ್ದಾಕ್ಷಣ ಈ ರೀತಿಯ ಹೇಳಿಕೆ ನೀಡುವುದೇ? ಇದು ಸರಿಯಲ್ಲ” ಎಂದು ಚಾಟಿ ಬೀಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದು ದೇಶ ಒಂದು ಚುನಾವಣೆ- ಒಕ್ಕೂಟ ವ್ಯವಸ್ಥೆ ಧ್ವಂಸಕ್ಕೆ ಅಡಿಗಲ್ಲು

ಸ್ವತಃ ಯತ್ನಾಳ್ ಪರ ವಕೀಲ ಸಿ.ವಿ ನಾಗೇಶ್ ಅವರು ಯತ್ನಾಳ್ ಅವರ ಹೇಳಿಕೆಯನ್ನು ಸಮರ್ಥಿಸಲ್ಲ ಎಂದು ಕೋರ್ಟ್ ಮುಂದೆ ತಪ್ಪು ಒಪ್ಪಿಕೊಂಡರು. ಸಚಿವರ ಹೇಳಿಕೆಗೆ ಪ್ರತಿಯಾಗಿ ಯತ್ನಾಳ್ ಅವರು ಹೇಳಿಕೆ ನೀಡಿದ್ದಾರೆ. ಆದರೆ ಕುಟುಂಬ ನಿಂಧಿಸುವ ಉದ್ದೇಶದಿಂದ ಈ ಹೇಳಿಕೆ ನೀಡಿಲ್ಲ ಎಂದು ಯತ್ನಾಳ್ ಪರ ವಕೀಲರಿ ನ್ಯಾಯಮೂರ್ತಿ ಅವರಿಗೆ ಸಮಜಾಯಿಶಿ ನೀಡಲು ಪ್ರಯತ್ನಿಸಿದರು. ಆದರೆ ಯತ್ನಾಳ್ ಪರ ವಕೀಲರ ವಾದವನ್ನು ಒಪ್ಪದ ಜಸ್ಟೀಸ್ ನಾಗಪ್ರಸನ್ನ ಅವರು ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...