ದೆಹಲಿಯಲ್ಲಿ ಎಎಪಿ ವಿಭಜನೆ?: ಪಕ್ಷ ತೊರೆದು ಹೊಸ ಪಕ್ಷ ಕಟ್ಟಲು ಮುಂದಾದ 15 ಕೌನ್ಸಿಲರ್‌ಗಳು

Date:

ಇತ್ತೀಚೆಗೆ ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಅದ್ಮಿ ಪಕ್ಷ (ಎಎಪಿ) ಹೀನಾಯ ಸೋಲುಂಡಿದ್ದು, ಭಾರೀ ಮುಖಭಂಗ ಅನುಭವಿಸಿತ್ತು. ಎಎಪಿಯ ಘಟಾನುಘಟಿ ನಾಯಕರಾದ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸೇರಿದಂತೆ ಹಲವರು ಸೋಲುಂಡಿದ್ದಾರೆ. ಎಎಪಿ ತನ್ನ ವರ್ಚಸ್ಸು, ನೆಲೆ ಕಳೆದುಕೊಳ್ಳುತ್ತಿದೆ ಎಂಬ ಅಭಿಪ್ರಾಯಗಳೂ ವ್ಯಕ್ತವಾಗುತ್ತಿದೆ. ಇದೇ ಹೊತ್ತಿನಲ್ಲಿ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) 15 ಎಎಪಿ ಕೌನ್ಸಿಲರ್‌ಗಳು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಹೊಸ ಪಕ್ಷ ಕಟ್ಟುವುದಾಗಿ ಘೊಷಿಸಿದ್ದಾರೆ.

ಎಂಸಿಡಿ ಕೌನ್ಸಿಲರ್‌ಗಳಾದ ಮುಕೇಶ್ ಗೋಯೆಲ್ ಮತ್ತು ಹಿಮಾನಿ ಜೈನ್ ನೇತೃತ್ವದಲ್ಲಿ 15 ಕೌನ್ಸಿಲರ್‌ಗಳು ಎಎಪಿಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದೊಳಗಿನ ಆಂತರಿಕ ಸಂಘರ್ಷಗಳೇ ತಾವು ಪಕ್ಷ ತೊರೆಯಲು ಕಾರಣ. ಆಂತರಿಕ ಸಂಘರ್ಷದಿಂದಾಗಿ ಪಾಲಿಕೆಯಲ್ಲಿ ಯಾವುದೇ ಮಹತ್ವದ ಕೆಲಸಗಳು ಪೂರ್ಣಗೊಂಡಿಲ್ಲ ಎಂದು ಹೇಳಿದ್ದಾರೆ.

ಎಎಪಿ ತೊರೆದಿರುವ ಕೌನ್ಸಿಲರ್‌ಗಳು ‘ಇಂದ್ರಪ್ರಸ್ಥ ವಿಕಾಸ್ ಪಕ್ಷ’ ಎಂಬ ಹೊಸ ಪಕ್ಷ ಕಟ್ಟುವುದಾಗಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಂಸಿಡಿಯಲ್ಲಿ ನಾವು ಅಧಿಕಾರದಲ್ಲಿದ್ದೆವು. ಆದರೂ, ಕಳೆದ 2.5 ವರ್ಷಗಳಲ್ಲಿ ಯಾವುದೇ ಉತ್ತಮ ಕೆಲಸ ಮಾಡಲಾಗಿಲ್ಲ. ದೆಹಲಿ ಅಭಿವೃದ್ಧಿಯೇ ನಮ್ಮ ಸಿದ್ಧಾಂತವಾಗಿದೆ. ಹೀಗಾಗಿ, ನಾವು ಎಎಪಿ ತೊರೆದು, ‘ಇಂದ್ರಪ್ರಸ್ಥ ವಿಕಾಸ್ ಪಕ್ಷ’ವನ್ನು ಕಟ್ಟುತ್ತಿದ್ದೇವೆ. ದೆಹಲಿಯ ಅಭಿವೃದ್ಧಿಗಾಗಿ ದುಡಿಯುವ ಪಕ್ಷಕ್ಕೆ ಬೆಂಬಲ ನೀಡುತ್ತೇವೆ” ಎಂದು ಹಿಮಾನಿ ಜೈನ್ ಹೇಳಿದ್ದಾರೆ.

“ಈಗ 15 ಕೌನ್ಸಿಲರ್‌ಗಳು ಎಎಪಿ ತೊರೆದಿದ್ದೇವೆ. ಎಎಪಿಗೆ ರಾಜೀನಾಮೆ ನೀಡುವವರ ಸಂಖ್ಯೆ ಇನ್ನೂ ಹೆಚ್ಚಾಗಬಹುದು” ಎಂದು ಮುಕೇಶ್ ಗೋಯಲ್ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಆಪರೇಷನ್ ಸಿಂಧೂರ | ಕಾಂಗ್ರೆಸ್‌ – ತರೂರ್ ನಡುವೆ ವಾಗ್ಯುದ್ಧ; ಬೇಳೆ ಬೇಯಿಸಿಕೊಳ್ಳುತ್ತಿದೆ ಬಿಜೆಪಿ

ಕೌನ್ಸಿಲರ್‌ಗಳ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿರುವ ಎಎಪಿ ನಾಯಕಿ ಪ್ರಿಯಾಂಕಾ ಕಕ್ಕರ್, “ರಾಜೀನಾಮೆ ನೀಡಿದ ಕೌನ್ಸಿಲರ್‌ಗಳಿಗೆ ಬಿಜೆಪಿಗರು ಆಮಿಷವೊಡ್ಡುತ್ತಿದ್ದಾರೆ.ತಮ್ಮ ಪಕ್ಷಕ್ಕೆ ಸೆಳೆಯಲು ಯತ್ನಿಸುತ್ತಿದ್ದಾರೆ. ಈ ರೀತಿಯ ತಂತ್ರಗಳ ಮೂಲಕ ನಗರಸಭೆಯಲ್ಲಿ ತನ್ನ ಸ್ಥಾನವನ್ನು ಬಲಪಡಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...