ದೆಹಲಿ | ಎಎಪಿ ಕಚೇರಿ ‘ಸೀಲ್’ ಮಾಡಿದ ಪೊಲೀಸರು; ಆರೋಪ

Date:

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಬಂಧನ ಖಂಡಿಸಿ ಎಎಪಿ ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಬಂಧನದಲ್ಲಿರುವ ಕೇಜ್ರಿವಾಲ್ ನೀಡಿರುವ ಸಂದೇಶವನ್ನ ಅವರ ಪತ್ನಿ ಓದುತ್ತಿರುವ ವಿಡಿಯೋವನ್ನು ಎಎಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಈ ಬೆನ್ನಲ್ಲೇ ದೆಹಲಿಯಲ್ಲಿರುವ ಎಎಪಿ ಕಚೇರಿಯನ್ನು ಪೊಲೀಸರು ಎಲ್ಲ ಕಡೆಗಳಿಂದ ಸೀಲ್ ಮಾಡಿದ್ದಾರೆ ಎಂದು ಪಕ್ಷದ ನಾಯಕರು ಆರೋಪಿಸಿದ್ದಾರೆ.

ತಮ್ಮನ್ನು ಪಕ್ಷದ ಕಚೇರಿಗೆ ಪ್ರವೇಶಿದಂತೆ ತಡೆಯಲಾಗುತ್ತಿದೆ ಎಂದು ಎಎಪಿ ಮುಖಂಡರಾದ ಅತಿಶಿ, ಸೌರಭ್ ಭಾರದ್ವಾಜ್, ದುರ್ಗೇಶ್ ಪಾಠಕ್ ಮತ್ತು ಇತರರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿಯಲ್ಲಿರುವ ಎಎಪಿ ಕಚೇರಿಯನ್ನು ಎಲ್ಲ ಕಡೆಯಿಂದಲೂಸೀಲ್‌’ ಮಾಡಲಾಗಿದ್ದು, ಪ್ರವೇಶ ನಿರ್ಬಂಧಿಸಲಾಗಿದೆ. ವಿಷಯವನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಾಗುವುದುಎಂದು ದೆಹಲಿ ಸಚಿವೆ ಆತಿಶಿ ಹೇಳಿದ್ದಾರೆ.

ಕುರಿತುಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಆತಿಶಿ, “ದಿಲ್ಲಿಯಐಟಿಒನಲ್ಲಿರುವ ಪಕ್ಷದ ಕಚೇರಿಯನ್ನು ಎಲ್ಲ ಕಡೆಗಳಿಂದ ಸೀಲ್ ಮಾಡಲಾಗಿದೆ. ಚುನಾವಣೆ ಹತ್ತಿರದಲ್ಲಿರುವಾಗ ರಾಷ್ಟ್ರೀಯ ಪಕ್ಷವೊಂದರ ಕಚೇರಿಯನ್ನು ರೀತಿ ಹೇಗೆ ಬಂದ್ ಮಾಡಬಹುದುಎಂದು ಪ್ರಶ್ನಿಸಿದ್ದಾರೆ.

ಸಂವಿಧಾನವು ಎಲ್ಲರಿಗೂ ಚುನಾವಣೆಯಲ್ಲಿ ಸಮಾನ ಅವಕಾಶವನ್ನು ನೀಡುತ್ತದೆ. ಆದರೆ, ಕಚೇರಿಯನ್ನುಸೀಲ್‌’ ಮಾಡಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆಎಂದು ತಿಳಿಸಿದ್ದಾರೆ.

ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲು ಮತ್ತು ಚುನಾವಣಾ ಆಯುಕ್ತರನ್ನು ಭೇಟಿ ಮಾಡಲು ಆಯುಕ್ತರಲ್ಲಿ ಎಎಪಿ ಸಮಯಾವಕಾಶ ಕೇಳಿದೆ” ಎಂದಿದ್ದಾರೆ.

ಎಎಪಿ ರಾಷ್ಟ್ರೀಯ ವಕ್ತಾರ ಸೌರಭ್ ಭಾರದ್ವಾಜ್ ಕೂಡ ಪ್ರತಿಕ್ರಿಯಿಸಿದ್ದು, ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೊದಲು ನೀರು ಕೊಟ್ಟು ಆಮೇಲೆ ಚುನಾವಣಾ ಪ್ರಚಾರಕ್ಕೆ ಬನ್ನಿ; ಕರವೇ ಟಿ.ಎ.ನಾರಾಯಣಗೌಡ

ಎಎಪಿ ನಾಯಕರ ಆರೋಪವನ್ನು ದೆಹಲಿ ಪೊಲೀಸರು ಅಲ್ಲಗಳೆದಿದ್ದಾರೆ. “ನಾವು ಯಾವುದೇ ಕಚೇರಿಯನ್ನು ಸೀಲ್ ಮಾಡಿಲ್ಲ. ಆ ಪ್ರದೇಶದಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ಡಿಡಿ ಜಾರಿಗೊಳಿಸಲಾಗಿದೆ. ಹೀಗಾಗಿ, ಅಲ್ಲಿ ಪೊಲೀಸ್ಸಿಬ್ಬಂದಿ ನಿಯೋಜಿಸಲಾಗಿದೆ. ಜತೆಗೆ, ಆ ಸ್ಥಳಗಳಲ್ಲಿ ಸಭೆ ಸೇರುವುದನ್ನು ನಿಷೇಧಿಸಲಾಗಿದೆ” ಎಂದು ಡಿಸಿಪಿ (ಕೇಂದ್ರ) ಎಂ ಹರ್ಷವರ್ಧನ ಹೇಳಿದ್ದಾರೆ.

“ಎಎಪಿಯ 500ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ನಾಯಕರು ಶನಿವಾರ ಶಾಹೀದಿ ಪಾರ್ಕ್‌ನಲ್ಲಿ ಜಮಾಯಿಸಿದ್ದರು. ಸಭೆಗೆ ಅನುಮತಿ ಪಡೆಯದೆಯೇ ಮೆರವಣಿಗೆ ಮಾಡಿದ್ದರು. ಈ ಮಾರ್ಗದಲ್ಲಿ ನಿಷೇಧಾಜ್ಞೆ ವಿಧಿಸಲಾಗಿತ್ತು. ಅಲ್ಲದೆ, ಆ ರಸ್ತೆಯಲ್ಲಿ ನ್ಯಾಯಾಲಯ ಮತ್ತು ಹಲವು ರಾಜಕೀಯ ಪಕ್ಷಗಳ ಕಚೇರಿಗಳು ಇವೆ. ಹಾಗಾಗಿ, ಅವರನ್ನು ತಡೆಯಲಾಯಿತು. 25 ಮಂದಿಯನ್ನು ಬಂಧಿಸಿ, ನಂತರ ಬಿಡುಗಡೆ ಮಾಡಲಾಯಿತುಎಂದು ಅವರು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...