ದೆಹಲಿ ಚುನಾವಣೆ ಪ್ರಚಾರದ ವೇಳೆ ಕೇಜ್ರಿವಾಲ್ ಕಾರಿನ ಮೇಲೆ ದಾಳಿ; ಬಿಜೆಪಿ ಗೂಂಡಾಗಳೆಂದ ಎಎಪಿ

Date:

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ವಿಧಾನಸಭೆ ಚುನಾವಣೆಯ ಪ್ರಚಾರ ನಡೆಸುತ್ತಿದ್ದ ವೇಳೆ ಕೇಜ್ರಿವಾಲ್ ಕಾರಿನ ಮೇಲೆ ದಾಳಿ ನಡೆದಿದೆ. “ಬಿಜೆಪಿಯ ಗೂಂಡಾಗಳೇ ಈ ದಾಳಿಯನ್ನು ನಡೆಸಿದ್ದಾರೆ” ಎಂದು ಎಎಪಿ ಆರೋಪಿಸಿದೆ.

“ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಜೊತೆಗಿದ್ದ ಬಿಜೆಪಿ ಬೆಂಬಲಿಗರು ಕೋಲು ಮತ್ತು ಕಲ್ಲುಗಳ ಮೂಲಕ ಕೇಜ್ರಿವಾಲ್ ಅವರ ಮೇಲೆ ದಾಳಿ ನಡೆಸಿದ್ದಾರೆ” ಎಂದು ಎಎಪಿ ದೂರಿದೆ. ಇನ್ನು ಕೇಜ್ರಿವಾಲ್ ಅವರಿಗೆ ಜನರು ಕಪ್ಪು ಭಾವುಟವನ್ನು ಪ್ರದರ್ಶಿಸುತ್ತಿರುವುದು ಕೂಡಾ ವಿಡಿಯೋದಲ್ಲಿ ಕಾಣಬಹುದಾಗಿದೆ.

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆಗೆ ಸ್ಪರ್ಧಿಸುತ್ತಿರುವ ಜೈಲುಹಕ್ಕಿ ತಾಹಿರ್ ಹುಸೈನ್ ಯಾರು ಗೊತ್ತೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ದೆಹಲಿ ವಿಧಾನಸಭೆ ಕ್ಷೇತ್ರದಲ್ಲಿ ಎಎಪಿಯಿಂದ ಅರವಿಂದ್ ಕೇಜ್ರಿವಾಲ್ ಕಣದಲ್ಲಿದ್ದರೆ, ಬಿಜೆಪಿಯಿಂದ ಪರ್ವೇಶ್ ವರ್ಮಾ ಮತ್ತು ಕಾಂಗ್ರೆಸ್‌ನಿಂದ ಸಂದೀಪ್ ದೀಕ್ಷಿತ್ ಸ್ಪರ್ಧೆಗಿಳಿದಿದ್ದಾರೆ.

ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಎಎಪಿ, “ಸೋಲಿನ ಭಯದಲ್ಲಿರುವ ಬಿಜೆಪಿ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ದಾಳಿ ನಡೆಸಲು ತನ್ನ ಗೂಂಡಾಗಳನ್ನು ಕಳಿಸಿದೆ. ಚುನಾವಣಾ ಪ್ರಚಾರಕ್ಕೆ ಅಡ್ಡಿ ಉಂಟು ಮಾಡುವ ಪ್ರಯತ್ನ ಇದಾಗಿದೆ. ಈ ಪುಕ್ಕಲುತನದ ದಾಳಿಗೆ ಕೇಜ್ರಿವಾಲ್ ಅವರು ಬೆದರುವುದಿಲ್ಲ. ದೆಹಲಿ ಜನರು ಇದಕ್ಕೆ ತಕ್ಕ ಉತ್ತರವನ್ನು ನೀಡಲಿದ್ದಾರೆ” ಎಂದು ಹೇಳಿದೆ.

ಇದನ್ನು ಓದಿದ್ದೀರಾ? ದೆಹಲಿ ಚುನಾವಣೆ | ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಮಹಿಳೆಯರಿಗೆ ಮಾಸಿಕ 2,500 ರೂ. ಸಹಾಯಧನ, 500 ರೂ.ಗೆ ಎಲ್‌ಪಿಜಿ ಭರವಸೆ

ಇನ್ನು ಬಿಜೆಪಿ ಮೇಲೆ ಮಾಡಿದ ಆರೋಪವನ್ನು ಅಭ್ಯರ್ಥಿ ಪರ್ವೇಶ್ ವರ್ಮಾ ಅಲ್ಲಗಳೆದಿದ್ದಾರೆ. “ಜನರು ಪ್ರಶ್ನೆ ಕೇಳುತ್ತಿದ್ದಾಗ, ಕೇಜ್ರಿವಾಲ್ ಕಾರು ಇಬ್ಬರು ಯುವಕರ ಮೇಲೆ ಹರಿದಿದೆ. ಇಬ್ಬರನ್ನೂ ಕೂಡಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಜನರ ಜೀವಕ್ಕೆ ಮೌಲ್ಯವೇ ಇಲ್ಲದ್ದಂತೆ ಆಗಿದೆ. ನಾನು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದೇನೆ” ಎಂದು ಆರೋಪಿಸಿದ್ದಾರೆ.

ದೆಹಲಿಯಲ್ಲಿ ಫೆಬ್ರವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರವರಿ 8ರಂದು ಚುನಾವಣಾ ಫಲಿತಾಂಶ ಹೊರಬರಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...