ದೆಹಲಿ ಚುನಾವಣೆ | ಬಿಜೆಪಿಯೇ ಗೆಲ್ಲುತ್ತದೆ ಎಂದ ‘ಆಕ್ಸಿಸ್ ಮೈ ಇಂಡಿಯಾ’ ಚುನಾವಣೋತ್ತರ ಸಮೀಕ್ಷೆ

Date:

ಪ್ರತಿ ಬಾರಿಯೂ ಚುನಾವಣಾ ಸಮೀಕ್ಷೆಯ ನಿಖರ ಫಲಿತಾಂಶ ನೀಡುವ ‘ಆಕ್ಸಿಸ್ ಮೈ ಇಂಡಿಯಾ’ದ ದೆಹಲಿ ಚುನಾವಣೋತ್ತರ ಸಮೀಕ್ಷಾ ವರದಿ ಬಿಡುಗಡೆಯಾಗಿದೆ. ಸಂಸ್ಥೆಯ ಮುಖ್ಯಸ್ಥ ಪ್ರದೀಪ್ ಗುಪ್ತಾ ಅವರು ಸಮೀಕ್ಷಾ ವರದಿಯನ್ನು ಪ್ರಕಟಿಸಿದ್ದು, ದೆಹಲಿಯಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದೆ.

ಬುಧವಾರ ಹಲವಾರು ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದವು. ಅವುಗಳ ಪೈಕಿ, ದೈನಿಕ್ ಭಾಸ್ಕರದ ಸಮೀಕ್ಷೆ ಮಾತ್ರವೇ ದೆಹಲಿಯಲ್ಲಿ ಎಎಪಿ ಗೆಲುತ್ತದೆ. ಈ ಬಾರಿ ಎಎಪಿ, 43-47 ಸ್ಥಾನಗಳನ್ನು ಪಡೆಯುತ್ತದೆ ಎಂದು ಹೇಳಿತ್ತು. ಉಳಿದ ಎಲ್ಲ, ಅಂದರೆ, ಮ್ಯಾಟ್ರಿಕ್ಸ್, ಜೆವಿಸಿ ಪೋಲ್, ಪೀಪಲ್ಸ್ ಪಲ್ಸ್, ಪಿ-ಮಾರ್‌ಕ್ಯೂ, ಪೀಪಲ್ಸ್ ಇನ್‌ಸೈಟ್‌ನ ಸಮೀಕ್ಷೆಗಳು ಬಿಜೆಪಿ ಅಧಿಕಾರಕ್ಕೇರಲಿದೆ ಎಂದು ಹೇಳಿದ್ದವು.

ಆದರೆ, ಆಕ್ಸಿಸ್ ಮೈ ಇಂಡಿಯಾ ಬುಧವಾರ ತನ್ನ ಸಮೀಕ್ಷಾ ಅಂಕಿಅಂಶವನ್ನು ಪ್ರಕಟಿಸಿರಲಿಲ್ಲ. ಇದೀಗ, ಗುರುವಾರ ಫಲಿತಾಂಶವನ್ನು ಪ್ರಕಟಿಸಿದೆ. ಫೆಬ್ರವರಿ 5ರಂದು ನಡೆದ ದೆಹಲಿ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 45-55 ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ ಎಂದು ಹೇಳಿದೆ. ಎಎಪಿ ಕೇವಲ 15-25 ಸ್ಥಾನಗಳನ್ನು ಮಾತ್ರವೇ ಗೆಲ್ಲಬಹುದು ಎಂದು ಹೇಳಿದೆ. ಇನ್ನು, ಕಾಂಗ್ರೆಸ್ ಹೆಚ್ಚೆಂದರೆ ಒಂದು ಸ್ಥಾನವನ್ನು ಗೆಲ್ಲಬಹುದು ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಕ್ಸಿಸ್ ಮೈ ಇಂಡಿಯಾದ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸ್ಪರ್ಧಿಸಿರುವ ನವದೆಹಲಿ ವಿಧಾನಸಭಾ ಕ್ಷೇತ್ರವಿರುವ ನವದೆಹಲಿ ಜಿಲ್ಲೆಯ 10 ಸ್ಥಾನಗಳಲ್ಲಿ, ಬಿಜೆಪಿ ಏಳು ಸ್ಥಾನಗಳನ್ನು ಗೆಲ್ಲಲಿದೆ. ಎಎಪಿ ಮೂರು ಸ್ಥಾನಗಳನ್ನು ಮಾತ್ರ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ.

ಇನ್ನು, ಈಶಾನ್ಯ ದೆಹಲಿ ಜಿಲ್ಲೆಯ ಬಿಜೆಪಿ 10 ಸ್ಥಾನಗಳಲ್ಲಿ ಬಿಜೆಪಿ ಆರು ಮತ್ತು ಎಎಪಿ ನಾಲ್ಕು ಸ್ಥಾನಗಳನ್ನು ಗೆಲ್ಲಬಹುದು ಆರು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಆಗ್ನೇಯ ದೆಹಲಿ ಜಿಲ್ಲೆಯಲ್ಲಿ, ಬಿಜೆಪಿ ಮತ್ತು ಎಎಪಿ ತಲಾ ಐದು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.

ಪ್ರಕಟವಾದ ಬಹುತೇಕ ಎಲ್ಲ ಸಮೀಕ್ಷೆಗಳು, ಬಿಜೆಪಿ 27 ವರ್ಷಗಳ ಬಳಿಕ, ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಮರಳಿದೆ. ರಾಷ್ಟ್ರ ರಾಜಧಾನಿಯ ಗದ್ದುಗೆ ಬಿಜೆಪಿ ಪಾಲಾಗಲಿದೆ ಎಂದು ಹೇಳುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...