ದೆಹಲಿ ಚುನಾವಣೆ | ನಿಮ್ಮೊಳಗೆ ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿಬಿಡಿ: ಒಮರ್ ಅಬ್ದುಲ್ಲಾ

Date:

ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಎಎಪಿ ಘಟಾನುಘಟಿ ನಾಯಕರಾದ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್, ಮನಿಷ್ ಸಿಸೋಡಿಯಾ ಸೋಲುಂಡಿದ್ದಾರೆ. ಎಎಪಿ ಕೇವಲ 24 ಸ್ಥಾನಗಳಿಗೆ ಕುಸಿದಿದ್ದು, ಅಧಿಕಾರ ಕಳೆದುಕೊಂಡಿದೆ. ಕಾಂಗ್ರೆಸ್‌ ಈಬಾರಿಯೂ ಶೂನ್ಯ ಸಾಧನೆ ಮಾಡಿದೆ. ಬಿಜೆಪಿ ಗೆದ್ದು ಬೀಗುತ್ತಿದೆ.

ದೆಹಲಿ ಚುನಾವಣಾ ಫಲಿತಾಂಶದ ಬಗ್ಗೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪ್ರತಿಕ್ರಿಯಿಸಿದ್ದು, ಎಎಪಿ ಮತ್ತು ಕಾಂಗ್ರೆಸ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಿಮ್ಮೊಳಗೆ ಕಿತ್ತಾಡಿ, ಒಬ್ಬರನ್ನೊಬ್ಬರು ಮುಗಿಸಿಬಿಡಿ’ ಎಂದು ಕಿಡಿಕಾರಿದ್ದಾರೆ.

ಪೌರಾಣಿಕ ಕಥೆಯುಳ್ಳ ವಿಡಿಯೋವೊಂದನ್ನು ಹಂಚಿಕೊಂಡು ಟ್ವೀಟ್‌ ಮಾಡಿರುವ ಒಮರ್ ಅಬ್ದುಲ್ಲಾ, “ನಿಮ್ಮಲ್ಲೇ ನೀವು ಇನ್ನಷ್ಟು ಕಿತ್ತಾಡಿಕೊಳ್ಳಿ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂಡಿಯಾ ಮೈತ್ರಿಕೂಟ ಭಾಗವಾಗಿದ್ದ ಎಎಪಿ ಮತ್ತು ಕಾಂಗ್ರೆಸ್‌ ಮೈತ್ರಿಯಲ್ಲಿ ಸ್ಪರ್ಧಿಸಬೇಕು ಎಂಬುದು ಮಿತ್ರ ಪಕ್ಷಗಳ ಅಭಿಪ್ರಾಯವಾಗಿತ್ತು. ಆದರೆ, ಸೀಟು ಹಂಚಿಕೆ ಮತ್ತು ಹೊಂದಾಣಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಹೆಚ್ಚಾದ ಕಾರಣ, ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧೆಗಿಳಿದವು. ಈ ಸ್ಪರ್ಧೆಯು ಪ್ರಚಾರದ ಸಮಯದಲ್ಲಿ ಮಿತ್ರ ಪಕ್ಷಗಳ ನಡುವೆಯೇ ಪೈಪೋಟಿ, ವಾಕ್ಸಮರಕ್ಕೂ ಕಾರಣವಾಯಿತು. ಅಂತಿಮವಾಗಿ, ಬಿಜೆಪಿ ಗೆಲುವು ಸಾಧಿಸಿತು.

ಮಹಾರಾಷ್ಟ್ರ ಮತ್ತು ಹರಿಯಾಣ ಚುನಾವಣೆ ಬಳಿಕ ‘ಇಂಡಿಯಾ’ ಮೈತ್ರಿಕೂಟದಲ್ಲಿ ಬಿರುಕು ಮೂಡಿದೆ ಎಂಬ ಅಭಿಪ್ರಾಯಗಳಿವೆ. ಹರಿಯಾಣದಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಮತ್ತು ಮಹಾರಾಷ್ಟ್ರದ ಕಳಪೆ ಪ್ರದರ್ಶನದ ಕಾರಣಕ್ಕಾಗಿ ‘ಇಂಡಿಯಾ’ ಕೂಟದ ನಾಯಕತ್ವವನ್ನು ಕಾಂಗ್ರೆಸ್‌ ಇತರ ಪಕ್ಷಗಳಿಗೆ ಬಿಟ್ಟುಕೊಡಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಇದರಲ್ಲಿ, ಎಎಪಿ ಕೂಡ ದನಿಗೂಡಿಸಿತ್ತು. ಆದರೆ, ದೆಹಲಿಯಲ್ಲಿ ಈಗ ಎಎಪಿಯೂ ಸೋಲುಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...