ಯೂತ್‌ ಕಾಂಗ್ರೆಸ್‌ನಿಂದ ‘ಮೋದಿ ಕಾ‌ ಅಸ್ಲಿ ಪರಿವಾರ್’ ಪೋಸ್ಟರ್‌: ದಿಲ್ಲಿ ಪೊಲೀಸರಿಂದ ಎಫ್‌ಐಆರ್‌

Date:

ಯೂತ್ ಕಾಂಗ್ರೆಸ್‌ನ ಹೆಸರಿನಡಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರದೊಂದಿಗೆ ಅವ್ಯವಹಾರ ಪ್ರಕರಣಗಳಲ್ಲಿ ಸಿಲುಕಿ ದೇಶ ತೊರೆದ ಉದ್ಯಮಿಗಳಾದ ನೀರವ್‌ ಮೋದಿ, ವಿಜಯ್‌ ಮಲ್ಯ ಮುಂತಾದವರ ಚಿತ್ರಗಳಿರುವ ಪೋಸ್ಟರ್‌ಗಳು ದಿಲ್ಲಿಯ ಹಲವೆಡೆ ಕಂಡುಬಂದ ಬಳಿಕ ದಿಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿರುವುದಾಗಿ ವರದಿಯಾಗಿದೆ.

ಈ ವಿವಾದಾತ್ಮಕ ಪೋಸ್ಟರ್‌ಗಳಲ್ಲಿ ನರೇಂದ್ರ ಮೋದಿ ಮತ್ತು ದೇಶ ತೊರೆದ ಕೆಲವು ಉದ್ಯಮಿಗಳು, ಲೈಂಗಿಕ ದೌರ್ಜನ್ಯದ ಬಿಜೆಪಿ ಮುಖಂಡರೊಂದಿಗೆ “ಮೋದಿ ಕಾ ಅಸ್ಲಿ ಪರಿವಾರ್”(ಮೋದಿಯ ನಿಜವಾದ ಪರಿವಾರ) ಎಂಬ ಶೀರ್ಷಿಕೆಯೊಂದಿಗೆ ಭಾರತೀಯ ಯುವ ಕಾಂಗ್ರೆಸ್‌ ಎಂದು ಬರೆದಿರುವ ಫ್ಲೆಕ್ಸ್ ಅನ್ನು ಹಲವಡೆ ಹಾಕಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪೋಸ್ಟರ್‌ಗಳಿಗೆ ಸಂಬಂಧಿಸಿದಂತೆ ತುಘಲಕ್‌ ರೋಡ್‌ ಪೊಲೀಸ್‌ ಠಾಣೆಯಲ್ಲಿ ದಿಲ್ಲಿ ಪ್ರಿವೆನ್ಶನ್‌ ಆಫ್‌ ಡಿಫೇಸ್‌ಮೆಂಟ್‌ ಆಫ್‌ ಪ್ರಾಪರ್ಟಿ ಆ್ಯಕ್ಟ್‌ನ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆ ಬಳಿಕ ಖುದ್ದು ಪೊಲೀಸರೆ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದಾರೆ.

ಹೊಸದಿಲ್ಲಿ ಮುನಿಸಿಪಲ್‌ ಕೌನ್ಸಿಲ್‌ನ ಅಧಿಕಾರಿಯೊಬ್ಬರ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈ ವಿವಾದಿತ ಪೋಸ್ಟರ್‌ನಲ್ಲಿ ದೇಶ ತೊರೆದ ಉದ್ಯಮಿಗಳಲ್ಲದೇ, ಗೌತಮ್ ಅದಾನಿ, ಭೋಪಾಲ್‌ನ ಬಿಜೆಪಿ ಸಂಸದೆ, ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣ ಪ್ರಮುಖ ಆರೋಪಿ ಪ್ರಜ್ಞಾ ಸಿಂಗ್ ಠಾಕೂರ್‌ ಹಾಗೂ ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯದ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸೇರಿದಂತೆ ಒಟ್ಟು 13 ಜನಗಳ ಫೋಟೋಗಳನ್ನು ಹಾಕಲಾಗಿತ್ತು. ಇವರೆಲ್ಲರೂ ಮೋದಿಯವರ ನೈಜ ಕುಟುಂಬ ಎಂದು ಬರೆಯಲಾಗಿತ್ತು.

ಹಿನ್ನೆಲೆ ಏನು?

ಪಾಟ್ನಾದಲ್ಲಿ ಕಳೆದ ರವಿವಾರ ನಡೆದ ಸಮಾವೇಶದಲ್ಲಿ ಆರ್‌ಜೆಡಿ ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್‌ ಅವರು, ಪ್ರಧಾನಿ ಮೋದಿಗೆ ಕುಟುಂಬವಿಲ್ಲ. ನೈಜ ಹಿಂದೂ ಅಲ್ಲ. ನೈಜ ಹಿಂದೂ ತಾಯಿ ಮರಣ ಹೊಂದಿದಾಗ ಕೇಶಮುಂಡನ ಮಾಡುತ್ತಿದ್ದರು” ಎಂದು ಹೇಳಿದ್ದಕ್ಕೆ ಬಿಜೆಪಿ ಪಾಳಯ ಆಕ್ರೋಶಗೊಂಡಿತ್ತು.

modi ka pariwar 1 1

ಇದಕ್ಕೆ ಪ್ರತಿಯಾಗಿ ಸೋಮವಾರ ನಡೆದ ಸಾರ್ವಜನಿಕ ಸಮಾವೇಶದ ಭಾಷಣದ ವೇಳೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಮೋದಿ, 140 ಕೋಟಿ ದೇಶವಾಸಿಗಳು ತಮ್ಮ ಪರಿವಾರ ಎಂದಿದ್ದರು. ಇದರ ಬೆನ್ನಲ್ಲೇ ಹಲವು ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಜಾಲತಾಣ ಹ್ಯಾಂಡಲ್‌ಗಳ ಬಯೋದಲ್ಲಿ ʼಮೋದಿ ಕಾ ಪರಿವಾರ್’ ಎಂದು ಸೇರಿಸಿದ್ದರು.

ಇದಕ್ಕೆ ಕೌಂಟರ್ ಆಗಿ ಯೂತ್ ಕಾಂಗ್ರೆಸ್, “ಮೋದಿ ಕಾ ಅಸ್ಲಿ ಪರಿವಾರ್” ಎಂದು ಹೇಳುವ ಮೂಲಕ ಅತ್ಯಾಚಾರ ಆರೋಪಿಗಳು, ದೇಶ ತೊರೆದ ಉದ್ಯಮಿಗಳ ಫೋಟೋ ಇರುವ ಫ್ಲೆಕ್ಸ್ ಹಾಕಿತ್ತು. ಅಲ್ಲದೇ, ಅದನ್ನೇ ಸೋಷಿಯಲ್ ಮೀಡಿಯಾಗಳಲ್ಲೂ ಹಂಚಿಕೊಂಡಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...