ಚುನಾವಣೆ 2023 | ಕೊರಮ – ಕೊರಚ ಸಮುದಾಯದ ಆಕಾಂಕ್ಷಿಗಳಿಗೆ ಟಿಕೆಟ್‌ ನೀಡಲು ಆಗ್ರಹ

Date:

  • ಐವರು ಆಕಾಂಕ್ಷಿಗಳಿಗೆ ಟಿಕೆಟ್‌ ನೀಡುವಂತೆ ಆಗ್ರಹ
  • ಜನಪ್ರತಿನಿಧಿಗಳಿಲ್ಲದ ಕುರಿತು ವಿಷಾಧಿಸಿದ ಸಂಘ

ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲು ಕೊರಮ – ಕೊರಚ (ಕುಳುವ) ಸಮಾಜದ ಆಕಾಂಕ್ಷಿಗಳಿಗೆ ರಾಜಕೀಯ ಪಕ್ಷಗಳು ಟಿಕೆಟ್ ನೀಡಬೇಕೆಂದು ಸಮುದಾಯ ಆಗ್ರಹಿಸಿದೆ.

ಈ ಕುರಿತು ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ಅಧ್ಯಕ್ಷ ಶಿವಾನಂದ ಎಂ ಭಜಂತ್ರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ಮೂಲಕ ಎಲ್ಲ ರಾಜಕೀಯ ಪಕ್ಷಗಳು ಸಮುದಾಯದ ಆಕಾಂಕ್ಷಿಗಳಿಗೆ ಟಿಕೆಟ್‌ ನೀಡುವಂತೆ ಕೋರಿದ್ದಾರೆ.

ರಾಜ್ಯ ಪರಿಶಿಷ್ಟ ಜಾತಿಯ 5ನೇ ಅತಿ ದೊಡ್ಡ ಜನಸಂಖ್ಯೆ ಇರುವ ಕೊರಮ – ಕೊರಚ ಸಮುದಾಯವನ್ನು ಪ್ರತಿನಿಧಿಸಲು ಪ್ರಸ್ತುತ ಯಾವುದೇ ಜನಪ್ರತಿನಿಧಿಯೂ ಇರದ ಕುರಿತು ಸಂಘ ವಿಷಾಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊರಮ – ಕೊರಚ ಅಲೆಮಾರಿ ಅಸಂಘಟಿತ ಸಮುದಾಯವಾಗಿದ್ದು, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅತ್ಯಂತ ಹಿಂದುಳಿದಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಯೆಲ್ಲ ಕಾಲು | ಬಸವಣ್ಣನವರ ‘ಕೊಲುವವನೇ ಮಾದಿಗ, ಹೊಲಸು ತಿಂಬವನೇ ಹೊಲೆಯ’ ಸಾಲು ನಿಜಕ್ಕೂ ಹೇಳುವುದೇನು?

“ರಾಜಕೀಯ ಕ್ಷೇತ್ರದಲ್ಲಿ ಈ ಸಮುದಾಯವನ್ನು ಪ್ರತಿನಿಧಿಸಲು ರಾಜ್ಯದಲ್ಲಿ ಪ್ರಸ್ತುತ ಯಾವುದೇ ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ ಮಂಡಳಿ ಅಧ್ಯಕ್ಷರು / ನಿರ್ದೇಶಕರು ಸಹ ಇಲ್ಲ” ಎಂದು ತಿಳಿಸಿದ್ದಾರೆ.

“ಜಿಲ್ಲಾ / ತಾಲ್ಲೂಕು ಪಂಚಾಯತ್ ಅಧ್ಯಕ್ಷರು / ಸದಸ್ಯರು, ಕನಿಷ್ಟ ಪಕ್ಷ ಕೆಪಿಎಸ್‌ಸಿ ಸದಸ್ಯರಾಗಲು ಇದುವರೆಗೂ ಯಾವೊಬ್ಬ ಪ್ರತಿನಿಧಿಗೂ ಪ್ರಾತಿನಿಧ್ಯ ದೊರಕದಿರುವುದು ಅತ್ಯಂತ ಶೋಷನೀಯ ಸಂಗತಿ” ಎಂದು ವಿಷಾಧಿಸಿದ್ದಾರೆ.

“70ರ ದಶಕದಿಂದ 2014ರವರೆಗೆ ಸಮುದಾಯವನ್ನು ಪ್ರತಿನಿಧಿಸಲು ನಾಲ್ಕು ಶಾಸಕರು, ಒಬ್ಬರು ಸಚಿವರು ಮತ್ತು ವಿಧಾನ ಪರಿಷತ್ ಸದಸ್ಯರಾಗಲು ರಾಜಕೀಯ ಪಕ್ಷಗಳು ಅವಕಾಶಗಳನ್ನು ಕಲ್ಪಿಸಿದ್ದವು” ಎಂದು ಸಂಘ ತಿಳಿಸಿದ್ದಾರೆ.ಕೊರಚ ಕೊರಮ

ಆದರೆ, ಇತ್ತೀಚಿನ ರಾಜಕೀಯ ಮೇಲಾಟದಿಂದ ಬದಲಾದ ಸನ್ನಿವೇಶದಲ್ಲಿ ಸಮುದಾಯವನ್ನು ಎಲ್ಲ ರಾಜಕೀಯ ಪಕ್ಷಗಳು ನಿರ್ಲಕ್ಷ್ಯ ಮಾಡಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 36 ಮೀಸಲು ಕ್ಷೇತ್ರಗಳ ಪೈಕಿ ಎಲ್ಲ ರಾಜಕೀಯ ಪಕ್ಷಗಳು ತಮ್ಮ ಪಕ್ಷದಲ್ಲಿನ ಐವರು ಆಕಾಂಕ್ಷಿಗಳಿಗೆ ಟಿಕೆಟ್‌ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...