ಡೆಂಘೀ ಪಾಸಿಟಿವ್ ಬಂದವರ ಮೇಲೆ 4 ದಿನಗಳವರೆಗೆ ನಿಗಾ: ಸಚಿವ ದಿನೇಶ್ ಗುಂಡೂರಾವ್

Date:

ಡೆಂಘೀ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಂಗಳೂರಿನ ಯಲಹಂಕದಲ್ಲಿ ಶುಕ್ರವಾರ ಡೆಂಘೀ ಹಾಟ್ ಸ್ಪಾಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಡೆಂಘೀ ನಿಯಂತ್ರಣ ವಿಚಾರದಲ್ಲಿ ಬೆಂಗಳೂರಿನಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದರು.

ಯಲಹಂಕದ ಶಿಂಗೇನಹಳ್ಳಿಯಲ್ಲಿ ಸ್ಥಳೀಯ ಶಾಲೆಗಳಿಗೆ ತೆರಳಿ ಡೆಂಘೀ ಕುರಿತು ಜಾಗೃತಿ ಮೂಡಿಸಿದರು. ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಡೆಂಘೀ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಘೀ ಪ್ರಕರಣಗಳಲ್ಲಿ ಇಳಿಮುಖ ಕಾಣುವ ನೀರಿಕ್ಷೆ ಇದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಲವು ಜಿಲ್ಲೆಗಳಲ್ಲಿ ಡೆಂಘೀ ಪ್ರಕರಣಗಳು ಇಳಿಮುಖವಾಗಿವೆ. ರಾಜ್ಯದ ಒಟ್ಟು ಡೆಂಘೀ ಪ್ರಕರಣಗಳಲ್ಲಿ ಬೆಂಗಳೂರಿನಲ್ಲಿ ಶೇ.50 ರಷ್ಟು ಡೆಂಘೀ ಪ್ರಕರಣಗಳಿವೆ. ಹೀಗಾಗಿ ಬೆಂಗಳೂರಿನಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಚ್ವಿನ ಗಮನ ಹರಿಸಿ ಡೆಂಘೀ ಹತೋಟಿಗೆ ತರುವಂತೆ ಸೂಚಿಸಿದ್ದೇನೆ” ಎಂದರು.

“10 ಜಿಲ್ಲೆಗಳ ಡೆಂಘೀ ಹಾಟ್ ಸ್ಪಾಟ್‌ಗಳಿಗೆ ಉಪನಿರ್ದೇಶಕರ ಮಟ್ಟದ ಅಧಿಕಾರಿಗಳನ್ನು ಕಳುಹಿಸಿಕೊಡಲಾಗುತ್ತಿದೆ. ಸೋಮವಾರ ಹಾಗೂ ಮಂಗಳವಾರ ಅಧಿಕಾರಿಗಳು ಹಾಟ್ ಸ್ಪಾ‌ಟ್‌ಗಳಿಗೆ ಭೇಟಿ ನೀಡಿ ಡೆಂಘೀ ನಿಯಂತ್ರಣ ಕ್ರಮಗಳ ಅನುಷ್ಠಾನ ಆಗಿರುವ ಬಗ್ಗೆ ವಿಶೇಷ ಗಮನ ಹರಿಸಲಿದ್ದಾರೆ. ಎರಡಕ್ಕಿಂತ ಹೆಚ್ಚು ಡೆಂಘೀ ಪಾಸಿಟಿವ್ ಪ್ರಕರಣಗಳು ಗೋಚರಿಸಿದರೆ ಡೆಂಘೀ ಹಾಟ್ ಸ್ಪಾಟ್ ಎಂದು ಗುರುತಿಸಲಾಗುತ್ತಿದೆ” ಎಂದು ಹೇಳಿದರು.

ರಾಜ್ಯದಲ್ಲಿ ನಿಫಾ ವೈರಸ್ ಪ್ರಕರಣಗಳು ಪತ್ತೆಯಾಗಿಲ್ಲ

“ಕೇರಳದಲ್ಲಿ ನಿಫಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತೆ ಸೂಚಿಸಲಾಗಿದೆ. ರಾಜ್ಯದಲ್ಲಿ ನಿಫಾ ವೈರಸ್‌ನ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದಿಂದ ಕೇರಳಕ್ಕೆ ಪ್ರವಾಸ ಕೈಗೊಳ್ಳುವವರು ಎಚ್ಚರಿಕೆ ವಹಿಸಿ ಎಂದು ಮಾರ್ಗಸೂಚಿ ಹೊರಡಿಸಿದ್ದೇವೆ” ಎಂದು ತಿಳಿಸಿದರು.

“ತೀರಾ ಅಗತ್ಯವಾಗಿದ್ದರೆ ಮಾತ್ರ ಕೇರಳ ಪ್ರವಾಸ ಕೈಗೊಳ್ಳಿ. ಅನಗತ್ಯವಾಗಿ ಕೇರಳಕ್ಕೆ ತೆರಳುವುದು ಬೇಡ. ರಾಜ್ಯದಲ್ಲಿ ಇತ್ತಿಚೆಗೆ ಝೀಕಾ ವೈರಸ್ ಪತ್ತೆಯಾಗಿತ್ತು. ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ. ಆದರೆ ನಿಫಾ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೂಡ ಮುಂಜಾಗೃತೆ ಕ್ರಮಗಳನ್ನ ಅನುಸರಿಸಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...